AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಟ್‌ ತೋರಿಸುವುದಾಗಿ ಹೇಳಿ ಬಿಲ್ಡರ್ ರಶೀದ್​​​ನಿಂದ ಲೈಂಗಿಕ ಕಿರುಕುಳ ಆರೋಪ

ನಿವೇಶನ ತೋರಿಸುತ್ತೇನೆ ಎಂದು ಮಹಿಳೆಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಬಿಲ್ಡರ್ ರಶೀದ್​​​ ಆಕೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಆರೋಪಿ ರಶೀದ್​ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.

ಸೈಟ್‌ ತೋರಿಸುವುದಾಗಿ ಹೇಳಿ ಬಿಲ್ಡರ್ ರಶೀದ್​​​ನಿಂದ ಲೈಂಗಿಕ ಕಿರುಕುಳ ಆರೋಪ
ಆರೋಪಿ ರಶೀದ್​​, ಎಫ್​ಐಆರ್​
ಅಶೋಕ್​ ಪೂಜಾರಿ, ಮಂಗಳೂರು
| Updated By: ವಿವೇಕ ಬಿರಾದಾರ|

Updated on: Oct 26, 2024 | 11:24 AM

Share

ಮಂಗಳೂರು, ಅಕ್ಟೋಬರ್​ 26: ನಿವೇಶನ ತೋರಿಸುವುದಾಗಿ ಕಾರಿನಲ್ಲಿ ಕರೆದುಕೊಂಡು ಹೋಗಿ ಬಿಲ್ಡರ್​​ ತನಗೆ ಲೈಂಗಿಕ ಕಿರುಕುಳ (Sexual Harassment) ನೀಡಿದ್ದಾನೆ ಎಂದು ಸಂತ್ರಸ್ತೆ ಮಂಗಳೂರು ಮಹಿಳಾ ಠಾಣೆಯಲ್ಲಿ (Mangaluru Police Station) ದೂರು ದಾಖಲಿಸಿದ್ದಾರೆ. ದೂರು ಆಧರಿಸಿ ಬಿಲ್ಡರ್ ರಶೀದ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ನಿವೇಶನ ನೋಡಲೆಂದು ಮಹಿಳೆ ಅಕ್ಟೋಬರ್​ 21ರಂದು ಬಿಲ್ಡರ್​ ರಶೀದ್ ಜೊತೆ ಕಾರಿನಲ್ಲಿ ಕುಶಾಲನಗರಕ್ಕೆ ತೆರಳಿದ್ದರು. ಮಹಿಳೆ ಹೊಟೇಲ್‌ನಲ್ಲಿ ಇಬ್ಬರಿಗೂ ಪ್ರತ್ಯೇಕ ರೂಮ್‌ ಬುಕ್‌ ಮಾಡಿದ್ದರು. ಆದರೆ ಬಿಲ್ಡರ್​ ರಶೀದ್‌ ಒಂದೇ ರೂಂನಲ್ಲಿ ಇರುವ ಇಂಗಿತ ವ್ಯಕ್ತಪಡಿಸಿದ್ದಾನೆ. ಇದಕ್ಕೆ ಒಪ್ಪದ ಮಹಿಳೆ ವಿರಾಜಪೇಟೆಯಲ್ಲಿನ ತನ್ನ ತಂಗಿಯ ಮನೆಯಲ್ಲಿ ಉಳಿದುಕೊಂಡಿದ್ದಾರೆ.

ಇದನ್ನೂ ಓದಿ: “ಸಹಕರಿಸು, ಇಲ್ಲ 24 ತುಂಡು ಮಾಡುವೆ”, ಬೆದರಿಕೆ ನೊಂದು ಯುವತಿ ಆತ್ಮಹತ್ಯೆಗೆ ಯತ್ನ

ಮರುದಿನ ಬಿಲ್ಡರ್​ ರಶೀದ್​ ಜೊತೆ ಮಹಿಳೆ ನಿವೇಶನ ನೋಡಲು ಹೋಗಿದ್ದಾರೆ. ಈ ವೇಳೆ ಬಿಲ್ಡರ್​ ರಶೀದ್‌ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೇ, ದಾರಿ ಮಧ್ಯೆ ಹಣದ ಆಮಿಷ ತೋರಿಸಿ ಅತ್ಯಾಚಾರಕ್ಕೆ ಯತ್ನಿಸಿದನು ಎಂದು ಮಹಿಳೆ ಆರೋಪಿಸಿದ್ದಾರೆ. ಅಲ್ಲದೇ, ಈ ವಿಚಾರ ಯಾರಿಗಾದರು ತಿಳಿಸಿದರೇ ಹಲ್ಲೆ ಮಾಡುವುದಾಗಿ ಬೆದರಿಕೆ ಸಹ ಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಆರೋಪಿ ರಶೀದ್​ ವಿರುದ್ಧ ಮಂಗಳೂರು ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ