AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​​ನಲ್ಲಿ ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಧರ್ಮದೇಟು

ಮಂಗಳೂರಿನ ಖಾಸಗಿ ಬಸ್​ನಲ್ಲಿ ತೆರಳುತ್ತಿದ್ದ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದ ಯುವಕನಿಗೆ ಧರ್ಮದೇಟು ನೀಡಿ ಪೋಲಿಸರಿಗೆ ಒಪ್ಪಿಸಲಾಗಿದೆ. ಘಟನೆ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನಿಗೆ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಸ್​​ನಲ್ಲಿ ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಧರ್ಮದೇಟು
ಅಸಭ್ಯವಾಗಿ ವರ್ತಿಸಿದ ಯುವಕ
ಅಶೋಕ್​ ಪೂಜಾರಿ
| Edited By: ವಿವೇಕ ಬಿರಾದಾರ|

Updated on: Jun 08, 2024 | 2:23 PM

Share

ಮಂಗಳೂರು, ಜೂನ್​ 08: ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಯುವತಿಯ (Girl) ಸಂಬಂಧಿಕರು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ (Mangaluru) ಬಲ್ಲಾಳ್‌ ಬಾಗ್ ಎಂಬಲ್ಲಿ ನಡೆದಿದೆ. ಪಾಂಡೇಶ್ವರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವತಿ ಮಂಗಳೂರು ನಗರದ ನಾಗೂರಿಯಲ್ಲಿರುವ ಎಸ್​ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್​ಗಳನ್ನು ಸೇಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಯುವತಿ ಶುಕ್ರವಾರ (ಜೂ.07) ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಾಗೂರಿಯಲ್ಲಿರುವ ಕಚೇರಿಗೆ ಹೋಗಿ ಪ್ರೊಡಕ್ಟ್​ಗಳನ್ನು ತೆಗೆದುಕೊಂಡಿದ್ದಾಳೆ. ಬಳಿಕ ಪ್ರೊಡಕ್ಟ್​ಗಳನ್ನು ಮಾರಾಟ ಮಾಡಲು ನಾಗೂರಿಯಿಂದ ಬಸ್​​ನಲ್ಲಿ ಹೊರಟು 9 ಗಂಟೆ ಸುಮಾರಿಗೆ ಸ್ಟೇಟ್ ಬ್ಯಾಂಕ್​ಗೆ ಬಂದು ಇಳಿದಿದ್ದಾರೆ.

ಇದನ್ನೂ ಓದಿ: ಪ್ರೀತಿಯ ನಾಟಕವಾಡಿ ಹಿಂದೂ ಯುವತಿಯ ಮತಾಂತರ, ಗೋಮಾಂಸ ತಿನ್ನಿಸಿ ಚಿತ್ರಹಿಂಸೆ; ಲವ್ ಜಿಹಾದ್ ಬಯಲು

ನಂತರ ಸ್ಟೇಟ್ ಬ್ಯಾಂಕ್​ನಿಂದ ಬಜಪೆ ಕಡೆಗೆ ಹೋಗಲು ಮರೋಳಿ ಎಂಬ ಹೆಸರಿನ ಬಸ್ಸನಲ್ಲಿ 9:10ಕ್ಕೆ ಹತ್ತಿ ನಿರ್ವಾಹಕ ಸೈಡ್​ನ ನಾಲ್ಕನೇ ಸೀಟಿನಲ್ಲಿ ಕುಳಿತುಕೊಂಡಿದ್ದಾಳೆ. ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಯುವಕ, ಯುವತಿ ಕೂತಿದ್ದ ಕುಳಿತುಕೊಂಡಿದ್ದ ಹಿಂಬದಿಯ ಸೀಟಿನಲ್ಲಿ ಕೂರುತ್ತಾನೆ. ಬಳಿಕ ಯುವತಿಯ ಸೊಂಟಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ.

ಬಳಿಕ ಯುವತಿ ಈ ವಿಚಾರವನ್ನು ತನ್ನ ಸಂಬಂಧಿಕರಿಗೆ ತಿಳಿಸಿದ್ದಾಳೆ. ವಿಚಾರ ತಿಳಿದು ಯುವತಿ ಸಂಬಂಧಿಕರು ಬಸ್ಸನ್ನು ಬಲ್ಲಾಳ್‌ ಬಾಗ್ ಎಂಬಲ್ಲಿ ತಡೆದಿದ್ದಾರೆ. ಬಳಿಕ ಆತನನ್ನು ಬಸ್​ನಿಂದ ಕೆಳಗಿಳಿಸಿ ವಿಚಾರಿಸಿ, ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕನಿಗೆ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ