AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುದ್ಧಿವಂತ ಸಿನಿಮಾ ಮಾದರಿಯಲ್ಲಿ ಮಹಿಳೆಯರ ಸ್ನೇಹ ಬೆಳಸಿ, ಚಿನ್ನಾಭರಣ ದೋಚುತ್ತಿದ್ದ ಆರೋಪಿ ಅರೆಸ್ಟ್​

ಹಲವಾರು ಮಹಿಳೆಯರನ್ನು ತನ್ನ ಪ್ರೇಮದ ಬಲೆಗೆ ಬೀಳಿಸಿಕೊಂಡು, ಅವರ ಜೊತೆ ಸರಸ-ಸಲ್ಲಾಪವಾಡಿ ಕೊನೆಗೆ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ರೋಪಿ ರೋಹಿತ್ ಮಥಾಯೀಸ್ ಬಳಿಯಿಂದ 7 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಬುದ್ಧಿವಂತ ಸಿನಿಮಾ ಮಾದರಿಯಲ್ಲಿ ಮಹಿಳೆಯರ ಸ್ನೇಹ ಬೆಳಸಿ, ಚಿನ್ನಾಭರಣ ದೋಚುತ್ತಿದ್ದ ಆರೋಪಿ ಅರೆಸ್ಟ್​
ಆರೋಪಿ ರೋಹಿತ್ ಮಥಾಯೀಸ್​ನನ್ನು ಬಂಧಿಸಿದ ಪೊಲೀಸರು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ವಿವೇಕ ಬಿರಾದಾರ|

Updated on:Sep 18, 2024 | 1:30 PM

Share

ಮಂಗಳೂರು, ಸೆಪ್ಟೆಂಬರ್​ 17: ರಿಯಲ್​ ಸ್ಟಾರ್ ಉಪೇಂದ್ರ (Upendra) ಅವರ ಜನ್ಮದಿನವಿಂದು. ಅವರು ನಟನೆ ಮಾಡಿರುವ ಬುದ್ಧಿವಂತ (Buddivant) ಸಿನಿಮಾ ಸಾಕಷ್ಟು ಜನಪ್ರಿಯತೆ ಗಳಿಸಿದೆ. ಬುದ್ಧಿವಂತ ಸಿನಿಮಾದಲ್ಲಿ ನಟ ಉಪೇಂದ್ರ ಅವರು ನಿರ್ವಹಿಸಿದ ಪಾತ್ರಗಳ ರೀತಿಯಲ್ಲೇ ನಿಜ ​ಜೀವನದಲ್ಲಿ ನಡೆದಿದೆ. ಹೌದು, ಹಲವಾರು ಮಹಿಳೆಯರನ್ನು ತನ್ನ ಪ್ರೇಮದ ಬಲೆಗೆ ಬೀಳಿಸಿಕೊಂಡು, ಅವರ ಜೊತೆ ಸರಸ-ಸಲ್ಲಾಪವಾಡಿ ಕೊನೆಗೆ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಮಂಗಳೂರಿನ (Mangaluru) ಕಂಕನಾಡಿ ಪೊಲೀಸರು (Kankanvadi Police) ಬಂಧಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ನಿವಾಸಿ ನಟೋರಿಯಸ್ ಕಳ್ಳ ರೋಹಿತ್ ಮಥಾಯೀಸ್ ಬಂಧಿತ ಆರೋಪಿ.

ಆರೋಪಿ ರೋಹಿತ್ ಮಥಾಯೀಸ್ ಸಾಮಾಜಿಕ ಜಾಲತಾಣದ ಮೂಲಕ ಮಂಗಳೂರು-ಉಡುಪಿ ಭಾಗದ ಕ್ರಿಸ್ಚಿಯನ್ ಸಮುದಾಯಕ್ಕೆ ಸೇರಿದ ಅಂದವಾದ ಶ್ರೀಮಂತ ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದನು. ಅವರ ಜೊತೆ ನಿತ್ಯ ಸಂಪರ್ಕದಲ್ಲಿ ಇರುತ್ತಿದ್ದನು. ಅವರೊಂದಿಗೆ ಚಾಟ್​ ಮಾಡುತ್ತ ಮೋಡಿ ಮಾಡುತ್ತಿದ್ದನು. ಮೊದಲಿಗೆ ಅವರೊಂದಿಗೆ ಗಾಢವಾದ ಸ್ನೇಹ ಬೆಳಸುತ್ತಿದ್ದನು. ದಿನಗಳು ಕಳೆದಂತೆ ಮಹಿಳೆಯರನ್ನು ತನ್ನ ಪ್ರೀತಿಯೆಂಬ ನಾಟಕದ ಬಲೆಗೆ ಬೀಳಿಸಿಕೊಳ್ಳುತ್ತಿದ್ದನು.

ಬಳಿಕ ಅವರ ಮನೆಯ ವಿಳಾಸ ಪಡೆದು, ಹೋಗಿ-ಬಂದು ಮಾಡುತ್ತಿದ್ದನು. ನಂತರ ಅವರ ಜೊತೆ ಸರಸ ಸಲ್ಲಾಪವಾಡುತ್ತಿದ್ದನು. ಕೊನೆಗೆ ಅವರ ಮನೆಯಲ್ಲಿನ ಚಿನ್ನ ದೋಚಿ ಪರಾರಿಯಾಗುತ್ತಿದ್ದನು.

ಇದನ್ನೂ ಓದಿ: ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸ್​ ಹೆಸರಿನಲ್ಲಿ ವಿಜಯಪುರದ ಯುವಕನಿಗೆ ವಿಡಿಯೋ ಕಾಲ್​: ವಂಚನೆಗೆ ಯತ್ನ

ಆರೋಪಿ ರೋಹಿತ್ ಮಥಾಯೀಸ್ ಇತರರೊಂದಿಗೆ ಸೇರಿಕೊಂಡು 2019ರಲ್ಲಿ ನಿವೃತ್ತ ಪಿಡಿಓ ಭರತಲಕ್ಷ್ಮಿ ಹಣ ಮತ್ತು ಚಿನ್ನಾಭರಣ ದೋಚಿದ್ದನು. ಬಳಿಕ ಅವರನ್ನು ಬೆಳ್ಮಣ ಗ್ರಾಮದಲ್ಲಿನ ಮನೆಯಲ್ಲಿ ಕೊಲೆ ಮಾಡಿ, ಅವರ ಮೃತ ದೇಹವನ್ನು ಕಲ್ಯಾದ ಬಾವಿಯೊಂದರಲ್ಲಿ ಪ್ಲಾಸ್ಟಿಕ್​ನಲ್ಲಿ ಸುತ್ತಿ ಎಸೆದು ಹೋಗಿದ್ದನು. ಈ ಪ್ರಕರಣದಲ್ಲಿ ಆರೋಪಿ ರೋಹಿತ್ ಮಥಾಯೀಸ್​ನನ್ನು ಪೊಲೀಸರು ಬಂಧಿಸಿದ್ದರು. ಆರೋಪಿ ರೋಹಿತ್ ಮಥಾಯೀಸ್ ಜೈಲುವಾಸ ಅನುಭವಿಸಿ, ನಂತರ ಪ್ರಕರಣದ ವಿಚಾರಣೆಗೆ ಸಿಗದೇ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

ಮತ್ತೆ 2021ರಲ್ಲಿ ಕಂಕನಾಡಿಯ ಮಹಿಳೆಯೋರ್ವರ ಮನೆಯಿಂದ ಕಳ್ಳತನ ಮಾಡಿ ಪರಾರಿಯಾಗಿದ್ದನು. ಮತ್ತೆ ಇದೇ ರೀತಿ ಕೃತ್ಯ ಎಸಗಲು ಮುಂದಾದಾಗ ಮಾಹಿತಿ ತಿಳಿದ ಕಂಕನಾಡಿ ನಗರ ಪೊಲೀಸರು ಆರೋಪಿ ರೋಹಿತ್ ಮಥಾಯೀಸ್​ನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ರೋಹಿತ್ ಮಥಾಯೀಸ್ ಬಳಿಯಿಂದ 7 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಮಹಿಳೆಯ ಜೊತೆ ಸೇರಿ ಖೆಡ್ಡಾ ತೋಡಿದ್ದ ಪೊಲೀಸರು

ಆರೋಪಿ ರೋಹಿತ್ ಮಥಾಯೀಸ್ ಸಾಮಾಜಿಕ ಜಾಲತಾಣದ ಮೂಲಕ ಇಸ್ರೇಲ್​ನಲ್ಲಿ ವಾಸವಿದ್ದ ಮಹಿಳೆಯನ್ನು ತನ್ನ ಬಲೆಗೆ ಬೀಳಿಸಿಕೊಂಡಿದ್ದನು. ಈತನ ಜೊತೆ ಲಿವಿಂಗ್​ ಟುಗೆದರ್​ನಲ್ಲಿ ಇರಲು ಮಹಿಳೆ ಇಸ್ರೇಲ್ ಬಿಟ್ಟು ಮಂಗಳೂರಿಗೆ ಬಂದಿದ್ದಳು. ಆರೋಪಿ ರೋಹಿತ್ ಮಥಾಯೀಸ್ ಜೊತೆ ಲಿವಿಂಗ್​ ಟುಗೆದರ್ ಇರಲು ನಿರ್ಧರಿಸಿರುವ ಬಗ್ಗೆ ಮಹಿಳೆ ತನ್ನ ಸ್ನೇಹಿತನಿಗೆ ತಿಳಿಸಿದ್ದಳು. ಮಹಿಳೆಯ ಸ್ನೇಹಿತನಿಗೆ ಆರೋಪಿ ರೋಹಿತ್ ಮಥಾಯೀಸ್ ವಂಚಕ ಎಂದು ಮೊದಲೇ ಗೊತ್ತಿತ್ತು.

ಬಳಿಕ, ಈ ವಿಚಾರವನ್ನು ಮಹಿಳೆಗೆ ತಿಳಿಸಿ, ನಂತರ ಪೊಲೀಸರ ಗಮನಕ್ಕೂ ತಂದಿದ್ದನು. ಈತನನ್ನು ಪೊಲೀಸ್​ ಖೆಡ್ಡಾಕ್ಕೆ ಕೆಡವಲು ಪೊಲೀಸರೊಂದಿಗೆ ಸೇರಿ ಇಸ್ರೇಲ್​ ಮಹಿಳೆ, “ನನ್ನ ಬಳಿ ಇರುವ ಚಿನ್ನವನ್ನು ನಿನಗೆ ಕೊಡುವೆ. ಅದನ್ನು ಅಡಮಾನವಿಟ್ಟು ಹಣ ಕೊಡಿಸು ಎಂದಿದ್ದಾಳೆ” ಇದನ್ನು ನಂಬಿದ ಆರೋಪಿ ರೋಹಿತ್ ಮಥಾಯೀಸ್ ಮಹಿಳೆಯನ್ನು ಭೇಟಿ ಮಾಡಲು ಮಂಗಳೂರಿಗೆ ಬಂದಿದ್ದಾನೆ. ಆಗ ಪೊಲೀಸರು ಆರೋಪಿ ರೋಹಿತ್ ಮಥಾಯೀಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:36 am, Wed, 18 September 24

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!