ಮಂಗಳೂರು: ಇಡಿ ಹೆಸರು ಹೇಳಿಕೊಂಡು ದಾಳಿ ಮಾಡಿ 30 ಲಕ್ಷ ರೂ. ದರೋಡೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಉದ್ಯಮಿ ಸುಲೈಮಾನ್ ಹಾಜಿ ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳೆಂದು ನಟಿಸಿದ ಖದೀಮರು ದಾಳಿ ಮಾಡಿ 30 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ಘಟನೆಯಿಂದಾಗಿ ಪ್ರದೇಶದಲ್ಲಿ ಆತಂಕ ಹೆಚ್ಚಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮಂಗಳೂರು: ಇಡಿ ಹೆಸರು ಹೇಳಿಕೊಂಡು ದಾಳಿ ಮಾಡಿ 30 ಲಕ್ಷ ರೂ. ದರೋಡೆ
ಆರೋಪಿಗಳು ದರೋಡೆ ಮಾಡಿದ ಮನೆ
Edited By: ವಿವೇಕ ಬಿರಾದಾರ

Updated on: Jan 04, 2025 | 11:14 AM

ಮಂಗಳೂರು, ಜನವರಿ 04: ಜಾರಿ ನಿರ್ದೇಶನಾಲಯದ (ED) ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿದ ಖದೀಮರು 30 ಲಕ್ಷ ರೂ. ಕದ್ದು ಪರಾರಿಯಾಗಿದ್ದಾರೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಘಟನೆ ನಡೆದಿದೆ.

ಸುಲೈಮಾನ್ ಹಾಜಿ ಎಂಬುವರು ಸಿಂಗಾರಿ ಬೀಡಿ ಎಂಬ ಹೆಸರಿನ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ತಮಿಳುನಾಡು ಮೂಲದ ಖದೀಮರ ತಂಡ ಸುಲೈಮಾನ್ ಹಾಜಿ ಅವರ ಮನೆಗೆ ಕಾರ್​ನಲ್ಲಿ ಆಗಮಿಸಿದೆ. ನಾವು ಇಡಿ ಅಧಿಕಾರಿಗಳು ಎಂದು ಸುಲೈಮಾನ್ ಹಾಜಿ ಅವರನ್ನು ನಂಬಿಸಿ ಸುಮಾರು ಎರಡು ಗಂಟೆಗಳವರೆಗೆ ಮನೆಯಲ್ಲ ಪರಿಶೀಲಿಸಿದ್ದಾರೆ. ಕೊನೆಗೆ ಮನೆಯಲ್ಲಿದ್ದ ಸುಮಾರು 30 ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ.

ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸೈಬರ್ ವಂಚಕರಿಗೆ ಭಾರತದಿಂದ 500ಕ್ಕೂ ಹೆಚ್ಚು ಸಿಮ್ ಪೂರೈಸಿದ್ದ ಆರೋಪಿ ಬಂಧನ

ತೋಟದ ಮನೆಗೆ ನುಗ್ಗಿ ದರೋಡೆ

ವೃದ್ದ ದಂಪತಿ ಇದ್ದ ತೋಟದ ಮನೆಗೆ ನುಗ್ಗಿ ದರೋಡೆ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ದೊಡ್ಡಮಧುರೆ ಗ್ರಾಮದಲ್ಲಿ ನಡೆದಿದೆ. ವೃದ್ದ ದಂಪತಿಗಳಿದ್ದ ತೋಟದ ಮನೆಯನ್ನು ಟಾರ್ಗೆಟ್ ಮಾಡಿತ್ತು. ಮೊಲ ಹಿಡಿಯುವ ನೆಪದಲ್ಲಿ ಕಳ್ಳರ ಗ್ಯಾಂಗ್ ಶುಕ್ರವಾರ ತೋಟಕ್ಕೆ ಬಂದಿತ್ತು. ರಾತ್ರಿ ನಿವಾಸದೊಳಗೆ ನುಗ್ಗಿದೆ.

ಮನೆಯಲ್ಲಿದ್ದ ಚನ್ನೇಗೌಡ (75) ಅವರ ಮೇಲೆ ಹಲ್ಲೆ ಮಾಡಿ, ಬಳಿಕ ಒಡವೆ, ಮೊಬೈಲ್, ಹಣ ದೋಚಿ ದರೋಡೆಕೂರರು ಪರಾರಿಯಾಗಿದ್ದಾರೆ. ದರೋಡೆಕೋರರು ಸುಮಾರು ಎರಡು ಲಕ್ಷ ಮೌಲ್ಯದ ಒಡವೆ ಮತ್ತು ಹಣ ದೋಚಿರುವ ಶಂಕೆ ವ್ಯಕ್ತವಾಗಿದೆ.

ಗಾಯಗೊಂಡ ಚನ್ನೆಗೌಡ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದರೋಡೆ ಸುದ್ದಿ ತಿಳಿದು ದೊಡ್ಡಮಧುರೆ ಗ್ರಾಮದ ಜನರಲ್ಲಿ ಆತಂಕ ಮೂಡಿದೆ. ಘಟನಾ ಸ್ಥಳಕ್ಕೆ ಅಮೃತೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us