AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಪಣಂಬೂರು ಬೀಚ್‌ನಲ್ಲಿ ಮೂವರು ಯುವಕರು ನೀರುಪಾಲು

ಮಂಗಳೂರು ಹೊರವಲಯದ ಪಣಂಬೂರು ಬೀಚ್‌ನಲ್ಲಿ ಮೂವರು ಯುವಕರು ನೀರುಪಾಲಾಗಿರುವಂತಹ ಘಟನೆ ನಡೆದಿದೆ. ಮಿಲನ್(20), ಲಿಖಿತ್(18), ನಾಗರಾಜ್(24) ಮೃತ ಯುವಕರು. ಮೀನುಗಾರರು ಹಾಗೂ ಜೀವರಕ್ಷಕ ದಳದಿಂದ ಶೋಧ ಕಾರ್ಯ ನಡೆದಿದೆ. ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಮಗಳನ್ನ ರಕ್ಷಿಸಲು ಹೋಗಿ ತಂದೆ-ತಾಯಿ ಸೇರಿದಂತೆ ಮೂವರು ನೀರುಪಾಲಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ಮಂಗಳೂರು ಪಣಂಬೂರು ಬೀಚ್‌ನಲ್ಲಿ ಮೂವರು ಯುವಕರು ನೀರುಪಾಲು
ಮೃತರು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Mar 03, 2024 | 9:37 PM

Share

ಮಂಗಳೂರು, ಮಾರ್ಚ್​​​ 3: ಮೂವರು ಯುವಕರು ನೀರುಪಾಲಾಗಿರುವಂತಹ ಘಟನೆ ಮಂಗಳೂರು ಹೊರವಲಯದ ಪಣಂಬೂರು ಬೀಚ್‌ (Panambur Beach) ನಲ್ಲಿ ನಡೆದಿದೆ. ಮಿಲನ್(20), ಲಿಖಿತ್(18), ನಾಗರಾಜ್(24) ಮೃತ ಯುವಕರು. ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಮಿಲನ್, ಕೈಕಂಬದ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಲಿಖಿತ್, ನಾಗರಾಜ್ ಕಂಪನಿಯೊಂದರಲ್ಲಿ ಸೂಪರ್‌ವೈಸರ್ ಆಗಿದ್ದ. ಮೀನುಗಾರರು ಹಾಗೂ ಜೀವರಕ್ಷಕ ದಳದಿಂದ ಶೋಧ ಕಾರ್ಯ ನಡೆದಿದೆ. ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗಳನ್ನ ರಕ್ಷಿಸಲು ಹೋಗಿ ತಂದೆ-ತಾಯಿ ಕೂಡ ನೀರುಪಾಲು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದ ಮರಿಯಪ್ಪ ಅನ್ನೂ ಈ ರೈತ ಎಂದಿನಂತೆ ಇಂದು ಬೆಳಗ್ಗೆ ಪತ್ನಿ ಮುನಿಯಮ್ಮ ಮತ್ತು ಮಗಳು ಭಾರತಿ ಜೊತೆ ತೋಟದಲ್ಲಿ ಕೃಷಿ ಕೆಲಸ ಮಾಡಲು ತೆರಳಿದ್ದರು. ಜೊತೆಗೆ ತೋಟದಲ್ಲಿ ಕೃಷಿ ಕೆಲಸ ಮಾಡಿಕೊಂಡು ಮಧ್ಯಾಹ್ನ ಶೆಡ್​ನಲ್ಲಿ ಊಟ ಸಹ ಮಾಡಿದ್ದಾರೆ. ಆದರೆ ಊಟ ಮಾಡಿದ ನಂತರ ಮಗಳು ಕೃಷಿ ಹೊಂಡದಲ್ಲಿ ಕೈ ತೊಳೆಯಲು ಹೋಗಿದ್ದು ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ.

ಇದನ್ನೂ ಓದಿ: ರಾಯಚೂರು: ಗ್ರಾಮ ದೇವಿ ಜಾತ್ರೆಗೆ ಬಂದಿದ್ದವನ ಹತ್ಯೆ! ಪಾರ್ಟಿಗೆಂದು ಹೋದವ ಮೂರು ದಿನದ ಬಳಿಕ ಶವವಾಗಿ ಪತ್ತೆ

ಹೀಗಾಗಿ ಮಗಳನ್ನ ರಕ್ಷಣೆ ಮಾಡೋಕ್ಕೆ ಅಂತ ತಂದೆ ಮರಿಯಪ್ಪ ಧಾವಿಸಿದ್ದು ಮಗಳನ್ನ ರಕ್ಷಣೆ ಮಾಡಲು ಹರಸಾಹಸ ಪಟ್ಟಿದ್ದಾರೆ. ಆದರೆ ಈ ವೇಳೆ ಮಗಳಿಗೆ ಕೊಡಲು ಯಾವುದೇ ಹಗ್ಗ ಸಿಗದ ಕಾರಣ ತಂದೆಯೆ ನೀರಿಗಿಳಿದಿದ್ದು ಕೃಷಿ ಹೊಂಡದಲ್ಲಿ ಪ್ಲಾಸ್ಟಿಕ್ ಪೇಪರ್ ಹಾಕಿದ್ದ ಕಾರಣ ಮರಿಯಪ್ಪ ಸಹ ನೀರು ಪಾಲಾಗಿದ್ದಾರೆ.

ಮಗಳು ಮತ್ತು ಪತಿ ನೀರು ಪಾಲಾಗಿದ್ದನ್ನ ಕಂಡು ದಂಡೆಯ ಮೇಲಿದ್ದ ಪತ್ನಿ ಮುನಿಯಮ್ಮ ಸಹ ನೀರಿಗಿಳಿದಿದ್ದು ಈ ವೇಳೆ ಆಕೆಯು ಸಹ ನೀರಿನಲ್ಲಿ ಮುಳುಗಿ ಸಾವನ್ನಪಿದ್ದಾಳೆ. ಜೊತೆಗೆ ಗಂಡ ಮಗಳು ನೀರುಪಾಲಾಗಿದಕ್ಕೆ ರಕ್ಷಣೆಗೆ ಧಾವಿಸುವಂತೆ ಮುನಿಯಮ್ಮ ಕಿರುಚಾಡ್ತಿದ್ದನ್ನ ಕಂಡು ಸ್ಥಳಕ್ಕೆ ಬಂದ ಸ್ಥಳಿಯರು ಮೂವರ ರಕ್ಷಣೆಗೆ ದಾವಿಸಿದ್ದಾರೆ. ಆದರೆ ಅಷ್ಟರಲ್ಲೆ ಮೂವರ ಪ್ರಾಣ ಪಕ್ಷಿ ಹಾರಿಹೋಗಿದೆ.

ಇದನ್ನೂ ಓದಿ: ನಿಶಾನಿ ಬೆಟ್ಟದಲ್ಲಿ ಕಾಡಾನೆ ದಾಳಿಗೆ ವೃದ್ಧ ಸಾವು: ಶವ ಕಂಡು ಸ್ಥಳೀಯರಿಗೆ ಮಾಹಿತಿ ನೀಡಿದ ಚಾರಣಿಗರು

ಮೃತ ಮರಿಯಪ್ಪ ಮಗಳು ಭಾರತಿ ಬುದ್ದಿಮಾಂದ್ಯೆಯಾಗಿದ್ದ ಕಾರಣ ಆಕೆ ಕೃಷಿ ಹೊಂಡದ ಬಳಿ ಕೈತೊಳೆಯಲು ಹೋಗಿದ್ದೆ ದುರಂತಕ್ಕೆ ಕಾರಣ ಅಂತ ಶಂಕಿಸಲಾಗಿದೆ. ಇನ್ನೂ ಮೃತದೇಹಗಳನ್ನ ಹೊರತೆಗೆದ ಸ್ಥಳಿಯರು ಹಾಗೂ ಪೊಲೀಸರು ಶವಾಗಾರಕ್ಕೆ ರವಾನಿಸಿ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:11 pm, Sun, 3 March 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ