ಮಂಗಳೂರು ಪಣಂಬೂರು ಬೀಚ್‌ನಲ್ಲಿ ಮೂವರು ಯುವಕರು ನೀರುಪಾಲು

ಮಂಗಳೂರು ಹೊರವಲಯದ ಪಣಂಬೂರು ಬೀಚ್‌ನಲ್ಲಿ ಮೂವರು ಯುವಕರು ನೀರುಪಾಲಾಗಿರುವಂತಹ ಘಟನೆ ನಡೆದಿದೆ. ಮಿಲನ್(20), ಲಿಖಿತ್(18), ನಾಗರಾಜ್(24) ಮೃತ ಯುವಕರು. ಮೀನುಗಾರರು ಹಾಗೂ ಜೀವರಕ್ಷಕ ದಳದಿಂದ ಶೋಧ ಕಾರ್ಯ ನಡೆದಿದೆ. ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಮಗಳನ್ನ ರಕ್ಷಿಸಲು ಹೋಗಿ ತಂದೆ-ತಾಯಿ ಸೇರಿದಂತೆ ಮೂವರು ನೀರುಪಾಲಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ಮಂಗಳೂರು ಪಣಂಬೂರು ಬೀಚ್‌ನಲ್ಲಿ ಮೂವರು ಯುವಕರು ನೀರುಪಾಲು
ಮೃತರು
Edited By:

Updated on: Mar 03, 2024 | 9:37 PM

ಮಂಗಳೂರು, ಮಾರ್ಚ್​​​ 3: ಮೂವರು ಯುವಕರು ನೀರುಪಾಲಾಗಿರುವಂತಹ ಘಟನೆ ಮಂಗಳೂರು ಹೊರವಲಯದ ಪಣಂಬೂರು ಬೀಚ್‌ (Panambur Beach) ನಲ್ಲಿ ನಡೆದಿದೆ. ಮಿಲನ್(20), ಲಿಖಿತ್(18), ನಾಗರಾಜ್(24) ಮೃತ ಯುವಕರು. ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಮಿಲನ್, ಕೈಕಂಬದ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಲಿಖಿತ್, ನಾಗರಾಜ್ ಕಂಪನಿಯೊಂದರಲ್ಲಿ ಸೂಪರ್‌ವೈಸರ್ ಆಗಿದ್ದ. ಮೀನುಗಾರರು ಹಾಗೂ ಜೀವರಕ್ಷಕ ದಳದಿಂದ ಶೋಧ ಕಾರ್ಯ ನಡೆದಿದೆ. ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗಳನ್ನ ರಕ್ಷಿಸಲು ಹೋಗಿ ತಂದೆ-ತಾಯಿ ಕೂಡ ನೀರುಪಾಲು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದ ಮರಿಯಪ್ಪ ಅನ್ನೂ ಈ ರೈತ ಎಂದಿನಂತೆ ಇಂದು ಬೆಳಗ್ಗೆ ಪತ್ನಿ ಮುನಿಯಮ್ಮ ಮತ್ತು ಮಗಳು ಭಾರತಿ ಜೊತೆ ತೋಟದಲ್ಲಿ ಕೃಷಿ ಕೆಲಸ ಮಾಡಲು ತೆರಳಿದ್ದರು. ಜೊತೆಗೆ ತೋಟದಲ್ಲಿ ಕೃಷಿ ಕೆಲಸ ಮಾಡಿಕೊಂಡು ಮಧ್ಯಾಹ್ನ ಶೆಡ್​ನಲ್ಲಿ ಊಟ ಸಹ ಮಾಡಿದ್ದಾರೆ. ಆದರೆ ಊಟ ಮಾಡಿದ ನಂತರ ಮಗಳು ಕೃಷಿ ಹೊಂಡದಲ್ಲಿ ಕೈ ತೊಳೆಯಲು ಹೋಗಿದ್ದು ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ.

ಇದನ್ನೂ ಓದಿ: ರಾಯಚೂರು: ಗ್ರಾಮ ದೇವಿ ಜಾತ್ರೆಗೆ ಬಂದಿದ್ದವನ ಹತ್ಯೆ! ಪಾರ್ಟಿಗೆಂದು ಹೋದವ ಮೂರು ದಿನದ ಬಳಿಕ ಶವವಾಗಿ ಪತ್ತೆ

ಹೀಗಾಗಿ ಮಗಳನ್ನ ರಕ್ಷಣೆ ಮಾಡೋಕ್ಕೆ ಅಂತ ತಂದೆ ಮರಿಯಪ್ಪ ಧಾವಿಸಿದ್ದು ಮಗಳನ್ನ ರಕ್ಷಣೆ ಮಾಡಲು ಹರಸಾಹಸ ಪಟ್ಟಿದ್ದಾರೆ. ಆದರೆ ಈ ವೇಳೆ ಮಗಳಿಗೆ ಕೊಡಲು ಯಾವುದೇ ಹಗ್ಗ ಸಿಗದ ಕಾರಣ ತಂದೆಯೆ ನೀರಿಗಿಳಿದಿದ್ದು ಕೃಷಿ ಹೊಂಡದಲ್ಲಿ ಪ್ಲಾಸ್ಟಿಕ್ ಪೇಪರ್ ಹಾಕಿದ್ದ ಕಾರಣ ಮರಿಯಪ್ಪ ಸಹ ನೀರು ಪಾಲಾಗಿದ್ದಾರೆ.

ಮಗಳು ಮತ್ತು ಪತಿ ನೀರು ಪಾಲಾಗಿದ್ದನ್ನ ಕಂಡು ದಂಡೆಯ ಮೇಲಿದ್ದ ಪತ್ನಿ ಮುನಿಯಮ್ಮ ಸಹ ನೀರಿಗಿಳಿದಿದ್ದು ಈ ವೇಳೆ ಆಕೆಯು ಸಹ ನೀರಿನಲ್ಲಿ ಮುಳುಗಿ ಸಾವನ್ನಪಿದ್ದಾಳೆ. ಜೊತೆಗೆ ಗಂಡ ಮಗಳು ನೀರುಪಾಲಾಗಿದಕ್ಕೆ ರಕ್ಷಣೆಗೆ ಧಾವಿಸುವಂತೆ ಮುನಿಯಮ್ಮ ಕಿರುಚಾಡ್ತಿದ್ದನ್ನ ಕಂಡು ಸ್ಥಳಕ್ಕೆ ಬಂದ ಸ್ಥಳಿಯರು ಮೂವರ ರಕ್ಷಣೆಗೆ ದಾವಿಸಿದ್ದಾರೆ. ಆದರೆ ಅಷ್ಟರಲ್ಲೆ ಮೂವರ ಪ್ರಾಣ ಪಕ್ಷಿ ಹಾರಿಹೋಗಿದೆ.

ಇದನ್ನೂ ಓದಿ: ನಿಶಾನಿ ಬೆಟ್ಟದಲ್ಲಿ ಕಾಡಾನೆ ದಾಳಿಗೆ ವೃದ್ಧ ಸಾವು: ಶವ ಕಂಡು ಸ್ಥಳೀಯರಿಗೆ ಮಾಹಿತಿ ನೀಡಿದ ಚಾರಣಿಗರು

ಮೃತ ಮರಿಯಪ್ಪ ಮಗಳು ಭಾರತಿ ಬುದ್ದಿಮಾಂದ್ಯೆಯಾಗಿದ್ದ ಕಾರಣ ಆಕೆ ಕೃಷಿ ಹೊಂಡದ ಬಳಿ ಕೈತೊಳೆಯಲು ಹೋಗಿದ್ದೆ ದುರಂತಕ್ಕೆ ಕಾರಣ ಅಂತ ಶಂಕಿಸಲಾಗಿದೆ. ಇನ್ನೂ ಮೃತದೇಹಗಳನ್ನ ಹೊರತೆಗೆದ ಸ್ಥಳಿಯರು ಹಾಗೂ ಪೊಲೀಸರು ಶವಾಗಾರಕ್ಕೆ ರವಾನಿಸಿ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:11 pm, Sun, 3 March 24

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us