AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಈಜಲು ತೆರಳಿದ್ದ ಇಬ್ಬರು ಯುವಕರು ಸಮುದ್ರಪಾಲು: ಓರ್ವನ ರಕ್ಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲ ಬಳಿಯ ಅರಬ್ಬಿ ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೃತರು ಚಿಕ್ಕಮಗಳೂರು ಮೂಲದವರು ಎನ್ನಲಾಗಿದೆ. ಉಳ್ಳಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. 

ಮಂಗಳೂರು: ಈಜಲು ತೆರಳಿದ್ದ ಇಬ್ಬರು ಯುವಕರು ಸಮುದ್ರಪಾಲು: ಓರ್ವನ ರಕ್ಷಣೆ
ಉಳ್ಳಾಲ ಬೀಚ್​
ಅಶೋಕ್​ ಪೂಜಾರಿ
| Edited By: |

Updated on: Dec 29, 2023 | 5:24 PM

Share

ಮಂಗಳೂರು, ಡಿಸೆಂಬರ್​ 29: ಅರಬ್ಬಿ ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವಂತಹ (death) ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲ ಬಳಿ ನಡೆದಿದೆ. ಸಲ್ಮಾನ್(19), ಬಶೀರ್(23) ಮೃತರು. ಯುವಕ ಸೈಫ್ ಆಲಿನನ್ನು ಸ್ಥಳೀಯ ಜೀವರಕ್ಷಕ ತಂಡ ರಕ್ಷಣೆ ಮಾಡಿದೆ. ಚಿಕ್ಕಮಗಳೂರು ಮೂಲದ ಮೂವರು ಉಳ್ಳಾಲ ದರ್ಗಾಗೆ ಬಂದಿದ್ದಾಗ ಘಟನೆ ಸಂಭವಿಸಿದೆ. ಉಳ್ಳಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಚಿಂತಾಮಣಿ ಡೇರಿ ಪಕ್ಕದ ಹೆಚ್​ಪಿ ಪೆಟ್ರೋಲ್ ಬಂಕ್​ನಲ್ಲಿ ನಡೆದಿದೆ. ಆರ್.ಆರ್.ಬಾರ್ ಕ್ಯಾಷಿಯರ್​ ಹೇಮಂತ್​ನಿಂದ ರವಿ(31) ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಚಿಂತಾಮಣಿ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಎರಡು ಕಾರುಗಳ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಂಚಲ ಬಳಿ ನಡೆದಿದೆ.

ಇದನ್ನೂ ಓದಿ: ಅಪ್ರಾಪ್ತೆ ಪುಸಲಾಯಿಸಿ ಕರೆದೊಯ್ದು ಐವರಿಂದ ಅತ್ಯಾಚಾರ ಆರೋಪ: ಮೂವರ ಬಂಧನ

ಮಂಗಲಾ ಭರಮನಾಯ್ಕರ್(50), ಚಾಲಕ ಶ್ರೀಶೈಲ(40) ಮೃತರು. ನಾಲ್ವರಿಗೆ ಗಾಯ, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮುರಗೋಡ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮನಬಂದಂತೆ ಕೊಚ್ಚಿ ಯುವಕನ ಕೊಲೆ

ರಾಯಚೂರು: ನೀಲವಂಜಿ ಗ್ರಾಮದ ಬಳಿ ಮನಬಂದಂತೆ ಕೊಚ್ಚಿ ಯುವಕನ ಕೊಲೆ ಮಾಡಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ಹುಬ್ಬಳ್ಳಿ: ಮದಾರಾಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ನಿರಂತರ ಅತ್ಯಾಚಾರವೆಸಗಿದ್ದ ಆರೋಪಿಯ ಬಂಧನ

ಮಾಕಂಡಯ್ಯ(28) ಮೃತ ಯುವಕ. ಕಾಲು ಮುರಿದು ಮನಬಂದಂತೆ ಕೊಚ್ಚಿ ದುಷ್ಕರ್ಮಿಗಳಿಂದ ಕೊಲೆ ಮಾಡಲಾಗಿದೆ. ದೇವದುರ್ಗ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ದಾಖಲಾಗಿದೆ.

ಹೈವೆ ಪಕ್ಕದಲ್ಲಿ ಯುವಕನ ಹತ್ಯೆ

ತುಮಕೂರು: ಹೈವೆ ಪಕ್ಕದಲ್ಲಿ ಯುವಕನ ಹತ್ಯೆ ಮಾಡಿರುವಂತಹ ಘಟನೆ ತುಮಕೂರು ತಾಲೂಕು ಬೆಳಧರ ಗ್ರಾಮದಲ್ಲಿ ನಡೆದಿದೆ. ನಿನ್ನೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅಹೋಬಲ ಅಗ್ರಹಾರ ಗ್ರಾಮದ ಹನುಮಂತರಾಜು ಮೃತ ದುರ್ದೈವಿ. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು