AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕಿಂಗ್​​ ವಿಚಾರಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ: ಎಂಟು ಜನರಿಂದ ಹಲ್ಲೆ ಆರೋಪ

ಮಂಗಳೂರು ನಗರದ ರಾವ್ ಆಂಡ್​​ ರಾವ್ ಸರ್ಕಲ್ ಬಳಿ ಪಾರ್ಕಿಂಗ್​​ ವಿಚಾರಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ ಮಾಡಿದ್ದು, ತೀವೃ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಹೋಟೆಲ್​​​ ಮಾಲೀಕನ ತಮ್ಮ ಹಾಗೂ ಇತರರಿಂದ ಕಲ್ಲು, ಕೈಯಿಂದ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ. ಸಹೋದರಿಬ್ಬರ ತಲೆಗೆ, ತುಟಿಗೆ ಗಾಯಗಳಾಗಿದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. 

ಪಾರ್ಕಿಂಗ್​​ ವಿಚಾರಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ: ಎಂಟು ಜನರಿಂದ ಹಲ್ಲೆ ಆರೋಪ
ಹಲ್ಲೆ ನಡೆಸಿದ ಆರೋಪ
ಅಶೋಕ್​ ಪೂಜಾರಿ
| Edited By: |

Updated on:Jan 24, 2024 | 6:32 PM

Share

ಮಂಗಳೂರು, ಜನವರಿ 24: ಪಾರ್ಕಿಂಗ್​​ (parking) ವಿಚಾರಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ ಮಾಡಿದ್ದು, ತೀವೃ ಗಾಯಗಳಾಗಿರುವಂತಹ ಘಟನೆ ನಗರದ ರಾವ್ ಆಂಡ್​​ ರಾವ್ ಸರ್ಕಲ್ ಬಳಿ ನಡೆದಿದೆ. ಫಾರೂಕ್ ಮತ್ತು ಇತರೆ ಎಂಟು ಮಂದಿಯಿಂದ ಉಲ್ಲಾಸ್ ರಾವ್, ಹರ್ಷಿತ್ ರಾವ್ ಸಹೋದರರ ಮೇಲೆ ಹಲ್ಲೆ ನಡೆಸಿದ ಆರೋಪ ಮಾಡಲಾಗಿದೆ. ಎಂಪಾಯರ್ ಹೊಟೇಲ್​​ಗೆ ಊಟಕ್ಕೆಂದು ಸಹೋದರರು ಹೋಗಿದ್ದಾರೆ. ಹೋಟೆಲ್​​​ ಮಾಲೀಕನ ತಮ್ಮ ಹಾಗೂ ಇತರರಿಂದ ಕಲ್ಲು, ಕೈಯಿಂದ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ. ಸಹೋದರಿಬ್ಬರ ತಲೆಗೆ, ತುಟಿಗೆ ಗಾಯಗಳಾಗಿದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬಿಜಿ ಕೆರೆ ಬಳಿ ಲಾರಿಗೆ ಸರ್ಕಾರಿ ಬಸ್ ಡಿಕ್ಕಿ: ನಾಲ್ವರಿಗೆ ಗಾಯ

ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ಬಳಿ ಲಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಬಸ್ ನಲ್ಲಿದ್ದ ನಾಲ್ವರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಗಾಯಾಳುಗಳು ಮೊಳಕಾಲ್ಮೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಮಂಡ್ಯ: ಶಿಕ್ಷಕಿ ಕೊಲೆಯಾದ 30 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಪೊಲೀಸರು

ರಾ.ಹೆ 150ಎ ರಲ್ಲಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಅನಾಹುತ ತಪ್ಪಿದೆ. ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದೇವಸ್ಥಾನದ ಬೀಗ ಹೊಡೆದು ಕಳ್ಳತನ

ಮಂಡ್ಯ: ಮದ್ದೂರು ತಾಲೂಕಿನ ಕೆ.ಕೋಡಿಹಳ್ಳಿಯ ಬನ್ನೂರಮ್ಮ ದೇವಸ್ಥಾನದ ಬೀಗ ಮುರಿದು ಹುಂಡಿಯಲ್ಲಿದ್ದ ಹಣ, ಚಿನ್ನಾಭರಣ ದೋಚಿ ಪರಾರಿ‌ ಆಗಿರುವಂತಹ ಘಟನೆ ನಡೆದಿದೆ. ಕಳ್ಳತನದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. 2019ರಿಂದ ಇದುವರೆಗೆ ದೇವಾಲಯದಲ್ಲಿ 6 ಬಾರಿ ಕಳ್ಳತನ ಮಾಡಲಾಗಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಕಂಡುಬಂದಿದೆ.

ಸ್ಕೂಟಿಯಲ್ಲಿ ಇಟ್ಟಿದ್ದ 1 ಲಕ್ಷ 40 ಸಾವಿರ ರೂ. ಹಣ ಕದ್ದ ಖದೀಮ 

ಬೆಳಗಾವಿ: ಸ್ಕೂಟಿಯಲ್ಲಿ ಇಟ್ಟಿದ್ದ 1ಲಕ್ಷ 40 ಸಾವಿರ ರೂ. ಹಣವನ್ನ ಕಳ್ಳತನ ಮಾಡಿರುವಂತಹ ಘಟನೆ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ನಡೆದಿದೆ. ಎಪಿಎಂಸಿ ರಾಜದೀಪ ತರಕಾರಿ ಅಂಗಡಿ ಮುಂದೆ ನಿಲ್ಲಿಸಿದ್ದ ಸ್ಕೂಟಿಯಲ್ಲಿನ ಹಣವನ್ನು ಎಗರಸಲಾಗಿದೆ.

ಇದನ್ನೂ ಓದಿ: ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿದ ಯುವತಿಯ ಅಣ್ಣ; ಅವಳೊಂದಿಗೆ ತಾಯಿಯನ್ನೂ ಕೆರೆಗೆ ನೂಕಿ ಕೊಂದುಬಿಟ್ಟನೇ?

ಅಂಗಡಿಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಕಳ್ಳನ ಕರಾಮತ್ತು ಸೆರೆಯಾಗಿದೆ. ತರಕಾರಿ ವ್ಯಾಪಾರಿ ರಾಜು ಎಂಬುವವರಿಗೆ ಹಣ ಸೇರಿದೆ. ಸ್ಥಳಕ್ಕೆ ಎಪಿಎಂಸಿ ಪೋಲಿಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೈಕ್​ಗೆ ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸಾವು

ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಚಿಕ್ಕಬಿದರಕಲ್ಲು ಬಳಿ ಬೈಕ್​​ಗೆ ಕ್ಯಾಂಟರ್ ಡಿಕ್ಕಿಯಾಗಿ ಬೈಕ್​​ ಸವಾರ ಜಗದೀಶ್ (42) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಮಧ್ಯೆ, ಕ್ಯಾಂಟರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:31 pm, Wed, 24 January 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ