ಪಾರ್ಕಿಂಗ್​​ ವಿಚಾರಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ: ಎಂಟು ಜನರಿಂದ ಹಲ್ಲೆ ಆರೋಪ

ಮಂಗಳೂರು ನಗರದ ರಾವ್ ಆಂಡ್​​ ರಾವ್ ಸರ್ಕಲ್ ಬಳಿ ಪಾರ್ಕಿಂಗ್​​ ವಿಚಾರಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ ಮಾಡಿದ್ದು, ತೀವೃ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಹೋಟೆಲ್​​​ ಮಾಲೀಕನ ತಮ್ಮ ಹಾಗೂ ಇತರರಿಂದ ಕಲ್ಲು, ಕೈಯಿಂದ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ. ಸಹೋದರಿಬ್ಬರ ತಲೆಗೆ, ತುಟಿಗೆ ಗಾಯಗಳಾಗಿದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. 

ಪಾರ್ಕಿಂಗ್​​ ವಿಚಾರಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ: ಎಂಟು ಜನರಿಂದ ಹಲ್ಲೆ ಆರೋಪ
ಹಲ್ಲೆ ನಡೆಸಿದ ಆರೋಪ
Edited By:

Updated on: Jan 24, 2024 | 6:32 PM

ಮಂಗಳೂರು, ಜನವರಿ 24: ಪಾರ್ಕಿಂಗ್​​ (parking) ವಿಚಾರಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ ಮಾಡಿದ್ದು, ತೀವೃ ಗಾಯಗಳಾಗಿರುವಂತಹ ಘಟನೆ ನಗರದ ರಾವ್ ಆಂಡ್​​ ರಾವ್ ಸರ್ಕಲ್ ಬಳಿ ನಡೆದಿದೆ. ಫಾರೂಕ್ ಮತ್ತು ಇತರೆ ಎಂಟು ಮಂದಿಯಿಂದ ಉಲ್ಲಾಸ್ ರಾವ್, ಹರ್ಷಿತ್ ರಾವ್ ಸಹೋದರರ ಮೇಲೆ ಹಲ್ಲೆ ನಡೆಸಿದ ಆರೋಪ ಮಾಡಲಾಗಿದೆ. ಎಂಪಾಯರ್ ಹೊಟೇಲ್​​ಗೆ ಊಟಕ್ಕೆಂದು ಸಹೋದರರು ಹೋಗಿದ್ದಾರೆ. ಹೋಟೆಲ್​​​ ಮಾಲೀಕನ ತಮ್ಮ ಹಾಗೂ ಇತರರಿಂದ ಕಲ್ಲು, ಕೈಯಿಂದ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ. ಸಹೋದರಿಬ್ಬರ ತಲೆಗೆ, ತುಟಿಗೆ ಗಾಯಗಳಾಗಿದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬಿಜಿ ಕೆರೆ ಬಳಿ ಲಾರಿಗೆ ಸರ್ಕಾರಿ ಬಸ್ ಡಿಕ್ಕಿ: ನಾಲ್ವರಿಗೆ ಗಾಯ

ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ಬಳಿ ಲಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಬಸ್ ನಲ್ಲಿದ್ದ ನಾಲ್ವರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಗಾಯಾಳುಗಳು ಮೊಳಕಾಲ್ಮೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಮಂಡ್ಯ: ಶಿಕ್ಷಕಿ ಕೊಲೆಯಾದ 30 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಪೊಲೀಸರು

ರಾ.ಹೆ 150ಎ ರಲ್ಲಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಅನಾಹುತ ತಪ್ಪಿದೆ. ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದೇವಸ್ಥಾನದ ಬೀಗ ಹೊಡೆದು ಕಳ್ಳತನ

ಮಂಡ್ಯ: ಮದ್ದೂರು ತಾಲೂಕಿನ ಕೆ.ಕೋಡಿಹಳ್ಳಿಯ ಬನ್ನೂರಮ್ಮ ದೇವಸ್ಥಾನದ ಬೀಗ ಮುರಿದು ಹುಂಡಿಯಲ್ಲಿದ್ದ ಹಣ, ಚಿನ್ನಾಭರಣ ದೋಚಿ ಪರಾರಿ‌ ಆಗಿರುವಂತಹ ಘಟನೆ ನಡೆದಿದೆ. ಕಳ್ಳತನದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. 2019ರಿಂದ ಇದುವರೆಗೆ ದೇವಾಲಯದಲ್ಲಿ 6 ಬಾರಿ ಕಳ್ಳತನ ಮಾಡಲಾಗಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಕಂಡುಬಂದಿದೆ.

ಸ್ಕೂಟಿಯಲ್ಲಿ ಇಟ್ಟಿದ್ದ 1 ಲಕ್ಷ 40 ಸಾವಿರ ರೂ. ಹಣ ಕದ್ದ ಖದೀಮ 

ಬೆಳಗಾವಿ: ಸ್ಕೂಟಿಯಲ್ಲಿ ಇಟ್ಟಿದ್ದ 1ಲಕ್ಷ 40 ಸಾವಿರ ರೂ. ಹಣವನ್ನ ಕಳ್ಳತನ ಮಾಡಿರುವಂತಹ ಘಟನೆ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ನಡೆದಿದೆ. ಎಪಿಎಂಸಿ ರಾಜದೀಪ ತರಕಾರಿ ಅಂಗಡಿ ಮುಂದೆ ನಿಲ್ಲಿಸಿದ್ದ ಸ್ಕೂಟಿಯಲ್ಲಿನ ಹಣವನ್ನು ಎಗರಸಲಾಗಿದೆ.

ಇದನ್ನೂ ಓದಿ: ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿದ ಯುವತಿಯ ಅಣ್ಣ; ಅವಳೊಂದಿಗೆ ತಾಯಿಯನ್ನೂ ಕೆರೆಗೆ ನೂಕಿ ಕೊಂದುಬಿಟ್ಟನೇ?

ಅಂಗಡಿಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಕಳ್ಳನ ಕರಾಮತ್ತು ಸೆರೆಯಾಗಿದೆ. ತರಕಾರಿ ವ್ಯಾಪಾರಿ ರಾಜು ಎಂಬುವವರಿಗೆ ಹಣ ಸೇರಿದೆ. ಸ್ಥಳಕ್ಕೆ ಎಪಿಎಂಸಿ ಪೋಲಿಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೈಕ್​ಗೆ ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸಾವು

ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಚಿಕ್ಕಬಿದರಕಲ್ಲು ಬಳಿ ಬೈಕ್​​ಗೆ ಕ್ಯಾಂಟರ್ ಡಿಕ್ಕಿಯಾಗಿ ಬೈಕ್​​ ಸವಾರ ಜಗದೀಶ್ (42) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಮಧ್ಯೆ, ಕ್ಯಾಂಟರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:31 pm, Wed, 24 January 24

ಅಶೋಕ್​ ಪೂಜಾರಿ, ಮಂಗಳೂರು

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Follow Us