AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಅವಳಿ ಕೊಲೆ ಕೇಸ್​ನಲ್ಲಿ ಮೃತಪಟ್ಟಿದ್ದ ಮಹಿಳೆ ಪತಿ ಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

ಮಂಗಳೂರು(Mangaluru)ಹೊರವಲಯದ ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ ಇಂದು(ಏ.06) ಮಧ್ಯಾಹ್ನದ ವೇಳೆ ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ್ದ ಪಂಜಿಮೊಗರು ಜೋಡಿ ಕೊಲೆ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಮಹಿಳೆಯ ಪತಿಯ ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಮಂಗಳೂರು: ಅವಳಿ ಕೊಲೆ ಕೇಸ್​ನಲ್ಲಿ ಮೃತಪಟ್ಟಿದ್ದ ಮಹಿಳೆ ಪತಿ ಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು
ಚಾಕು ಇರಿತಕ್ಕೊಳಗಾದ ವ್ಯಕ್ತಿ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 06, 2024 | 6:58 PM

Share

ದಕ್ಷಿಣ ಕನ್ನಡ, ಏ.06: ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ್ದ ಪಂಜಿಮೊಗರು ಜೋಡಿ ಕೊಲೆ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಮಹಿಳೆಯ ಪತಿಯ ಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರು(Mangaluru)ಹೊರವಲಯದ ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ ಇಂದು(ಏ.06) ಮಧ್ಯಾಹ್ನದ ವೇಳೆ ನಡೆದಿದೆ. ಹಮೀದ್  ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳು ಹಮೀದ್​ನನ್ನು ಕೂಡಲೇ  ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಂಗಳೂರಿನ ಖ್ಯಾತ ಈಜುಪಟು ಜಾವೇದ್ ಎಂಬಾತನಿಂದ ಕೃತ್ಯ ಶಂಕೆ

ಇನ್ನು ಪ್ರಕರಣ ದಾಖಲಿಸಿಕೊಂಡ ಉಳ್ಳಾಲ ಪೊಲೀಸರು ಆರೋಪಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ. ಮೇಲ್ನೋಟಕ್ಕೆ ಹಣದ ವಿಚಾರವಾಗಿ ಕೃತ್ಯ ನಡೆದಿರುವ ಬಗ್ಗೆ ಅನುಮಾನ ಮೂಡಿದ್ದು, ಮಂಗಳೂರಿನ ಖ್ಯಾತ ಈಜುಪಟು ಜಾವೇದ್​ ಎಂಬಾತನಿಂದ ಕೃತ್ಯ ನಡೆದ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ:ಕೊಲೆ ಯತ್ನ ಪ್ರಕರಣ ಆರೋಪಿ ಪ್ರೈವೇಟ್ ಜೆಟ್​ ಮೂಲಕ ಎಸ್ಕೇಪ್, ಬೆಂಗಳೂರು ಪೊಲೀಸರು ಬರಿಗೈನಲ್ಲಿ ವಾಪಸ್

13 ವರ್ಷದ ಹಿಂದೆ ನಡೆದಿತ್ತು ಪಂಜಿಮೊಗರು ಜೋಡಿ ಕೊಲೆ

ಪಂಜಿಮೊಗರಿನಲ್ಲಿ 2011ರ ಜೂ.28ರಂದು ಮಧ್ಯಾಹ್ನ ಚೂರಿಯಿಂದ ತಿವಿದು ತಾಯಿ ರಜಿಯಾ ಮತ್ತು ಆಕೆಯ ಪುಟ್ಟ ಮಗು ಫಾತಿಮಾ ಜುವಾ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಈ ಘಟನೆ ಕರಾವಳಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಆದರೆ, ಈ ಘಟನೆ ನಡೆದು 13 ವರ್ಷ ಕಳೆದರೂ ಹತ್ಯೆ ಆರೋಪಿಗಳು ಪತ್ತೆಯಾಗಿಲ್ಲ. ಈ ಕುರಿತು ಸ್ಥಳೀಯ ಪೊಲೀಸರ ಜೊತೆ ಸಿಐಡಿ ತನಿಖೆ ನಡೆದರೂ ಹಂತಕರು ಸಿಕ್ಕಿಲ್ಲ.

ಮೃತ ರಜಿಯಾಳ ಪತಿ, ಸದ್ಯ ಕೊಲೆ ಯತ್ನಕ್ಕೆ ಒಳಗಾದ ಹಮೀದ್ ಪಿ.ಎಂ. ವಿರುದ್ದವೂ ಆರೋಪ ಕೇಳಿ ಬಂದಿತ್ತು. ಪತಿ‌ ಹಮೀದ್ ಮನೆಯಿಂದ ಹೊರ ಹೋದ 30 ನಿಮಿಷದ ಬಳಿಕ ಹತ್ಯೆಯಾಗಿತ್ತು. ಆದರೆ, ಸ್ಥಳೀಯ ಪೊಲೀಸರು ಹಾಗೂ ಸಿಐಡಿ ತನಿಖೆ ವೇಳೆ ಹಮೀದ್ ಕೈವಾಡ ಇಲ್ಲ ಎಂದಾಗಿತ್ತು. ಅಲ್ಲದೇ ಪತಿ ಹಮೀದ್ ಮಂಪರು ಪರೀಕ್ಷೆಗೂ ಆಗ್ರಹಿಸಿದ್ದರು. ಇದೀಗ ಉಳ್ಳಾಲದಲ್ಲಿ ಹಮೀದ್​​ಗೆ ಚೂರಿ ಇರಿದು ಹತ್ಯೆಗೆ ಯತ್ನಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Sat, 6 April 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ