AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharmasthala: ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳ್ಳರ ಕೈಚಳಕ, ಒಂದೇ ದಿನ 3 ಬೈಕ್ ಕಳವು

Mangaluru Crime News; ಧರ್ಮಸ್ಥಳ ದೇಗುಲಕ್ಕೆ ಆಗಮಿಸಿದ್ದ ಕೊಪ್ಪಳದ ಯಾತ್ರಾರ್ಥಿಯೊಬ್ಬರ ಬೈಕ್ ಸೇರಿದಂತೆ ಧರ್ಮಸ್ಥಳ ಆಸುಪಾಸಿನಲ್ಲಿ ಕೆಲವು ದಿನಗಳ ಹಿಂದೆ ಒಂದೇ ದಿನ ರಾತ್ರಿ 3 ಬೈಕ್ ಕಳವಾದ ಪ್ರಕರಣ ವರದಿಯಾಗಿದೆ. ಒಂದೇ ಕಳ್ಳರ ತಂಡ ಮೂರೂ ಕೃತ್ಯಗಳನ್ನು ಎಸಗಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

Dharmasthala: ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳ್ಳರ ಕೈಚಳಕ, ಒಂದೇ ದಿನ 3 ಬೈಕ್ ಕಳವು
ಬೈಕ್ ಕಳವು (ಸಾಂದರ್ಭಿಕ ಚಿತ್ರ)
Ganapathi Sharma
|

Updated on: Feb 19, 2024 | 7:29 AM

Share

ಧರ್ಮಸ್ಥಳ, ಫೆಬ್ರವರಿ 19: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ (Dharmasthala) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ದಿನ ಮೂರು ಬೈಕ್ ಕಳ್ಳತನ (Bike Stolen) ಮಾಡಲಾಗಿದೆ. ಫೆಬ್ರವರಿ 14 ರಂದು ಬುಧವಾರ ರಾತ್ರಿ ಮೂರು ಬೈಕ್‌ಗಳನ್ನು ಕಳವು ಮಾಡಲಾಗಿದ್ದು, ಇದರಲ್ಲಿ ಧರ್ಮಸ್ಥಳ ದೇಗುಲಕ್ಕೆ (Dharmasthala Temple) ಯಾತ್ರಾರ್ಥಿಯಾಗ ಬಂದ ಕೊಪ್ಪಳದ ವ್ಯಕ್ತಿಯೊಬ್ಬರ ಬೈಕ್ ಸಹ ಸೇರಿದೆ. ಇದು ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಭಕ್ತರಲ್ಲಿ ಸಹ ಆತಂಕಕ್ಕೆ ಕಾರಣವಾಗಿದೆ. ಜತೆಗೆ, ಧರ್ಮಸ್ಥಳ ಸುತ್ತಮುತ್ತಲ ನಿವಾಸಿಗಳಲ್ಲಿ ಕೂಡ ಭೀತಿಗೆ ಕಾರಣವಾಗಿದೆ.

ಮೊದಲ ಘಟನೆಯಲ್ಲಿ ಧರ್ಮಸ್ಥಳ ಗ್ರಾಮದ ನಿವಾಸಿ ಬೇಬಿ ಎಂಬವರ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಬೇಬಿ ಅವರು ಬೆಳಗ್ಗೆ ಎದ್ದು ನೋಡಿದಾಗ ಬೈಕ್ ನಿಲ್ಲಿಸಿದ್ದ ಸ್ಥಳದಿಂದ ಬೈಕ್ ಕಾಣೆಯಾಗಿತ್ತು.

ಎರಡನೇ ಘಟನೆಯಲ್ಲಿ, ಸುಳ್ಯದ ನಿವಾಸಿ ಅಖಿಲೇಶ್ ಎಂಬುವರು ಬೈಕ್ ಕಳೆದುಕೊಂಡಿದ್ದಾರೆ. ಧರ್ಮಸ್ಥಳದ ಗಡಿಭಾಗದ ಕಲ್ಮಂಜ ಗ್ರಾಮದ ಮದ್ಮಾಳ್​ ಕಟ್ಟೆಯಲ್ಲಿರುವ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಸಂಬಂಧಿಕರ ಮನೆ ಬಳಿ ಬೈಕ್ ನಿಲ್ಲಿಸಿದ್ದರು. ಆದರೆ, ಬೆಳಗ್ಗೆ ಪರಿಶೀಲಿಸಿದಾಗ ಕಾಣೆಯಾಗಿದೆ. ಬೈಕಿನ ಮೌಲ್ಯ 65,000 ರೂಪಾಯಿ ಎಂದು ಅಂದಾಜಿಸಲಾಗಿದೆ.

ಮತ್ತೊಂದು ಘಟನೆಯಲ್ಲಿ ಕೊಪ್ಪಳದಿಂದ ಧರ್ಮಸ್ಥಳಕ್ಕೆ ಆಗಮಿಸಿದ್ದ ಯಾತ್ರಾರ್ಥಿ ಬಸವರಾಜ್ ಎಂಬುವರು ಬೈಕ್ ಕಳೆದುಕೊಂಡಿದ್ದಾರೆ. ಧರ್ಮಸ್ಥಳದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕಿಯೋಸ್ಕ್ ಬಳಿ ಬೈಕ್ ನಿಲ್ಲಿಸಿ ಪಕ್ಕದಲ್ಲೇ ಮಲಗಿದ್ದರು. ಆದರೆ, ಬೆಳಗ್ಗೆ ಎದ್ದು ನೋಡಿದಾಗ ಬೈಕ್ ಕಳ್ಳತನವಾಗಿರುವುದು ಕಂಡು ಬೆಚ್ಚಿಬಿದ್ದಿದ್ದಾರೆ.

ಒಂದೇ ಕಳ್ಳರ ತಂಡವೇ ದಾಳಿ ಮಾಡಿರಬೇಕು ಮತ್ತು ಮೂರು ಬೈಕ್‌ಗಳನ್ನು ಪ್ರತ್ಯೇಕ ಘಟನೆಗಳಲ್ಲಿ ಕಳ್ಳತನ ಮಾಡಿರಬೇಕು ಎಂದು ಪೊಲೀಸರು ಶಂಕಿಸಿರುವುದಾಗಿ ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಇದನ್ನೂ ಓದಿ: ಮಂಗಳೂರು: ಹರೇಕಳದಲ್ಲಿ ಹಾಕಿದ ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸರಿಂದ ನೋಟಿಸ್

1 ಲಕ್ಷ ರೂ ಎಗರಿಸಿದ್ದ ಹೋಟೆಲ್ ಕ್ಯಾಷಿಯರ್: ಸಿಸಿಟಿವಿ ದೃಶ್ಯ ಬಯಲು

ಬೆಂಗಳೂರಿನ ಹೋಟೇಲೊಂದರ ಮಾಲೀಕರು ಕ್ಯಾಷ್ ಕೌಂಟರ್​ನಲ್ಲಿಟ್ಟದ್ದ 1 ಲಕ್ಷ ರೂಪಾಯಿ ನಗದು ಕಳವು ಪ್ರಕರಣದ ಸಿಸಿಟಿವಿ ದೃಶ್ಯಾವಳಿ ಪತ್ತೆಯಾಗಿದ್ದು, ಹೋಟೆಲ್ ಕ್ಯಾಷಿಯರ್ ಆಗಿ ಕೆಲಸಕ್ಕೆ ಸೇರಿದ್ದ ವ್ಯಕ್ತಿಯೇ ಕೃತ್ಯ ಎಸಗಿರುವುದು ತಿಳಿದುಬಂದಿದೆ. ಕ್ಯಾಷಿಯರ್ ರವಿಕುಮಾರ್ ಎಂಬಾತನೇ ಕೃತ್ಯ ಎಸಗಿದ್ದಾನೆ. ಆರೋಪಿಯು ಕ್ಯಾಷ್ ಕೌಂಟರ್​ನಲ್ಲಿ ಕುಳಿತುಕೊಂಡೇ ಹಣವನ್ನು ಪ್ಯಾಂಟ್ ಜೇಬಿಗಿಳಿಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಕಂಡುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ