AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಿನ ಬಡ್ಡಿ ನೀಡುವುದಾಗಿ ನಂಬಿಸಿ ಬಡವರಿಂದ ಲಕ್ಷಾಂತರ ಹಣ ಪಡೆದು ವಂಚಿಸಿದ ಕಂಪನಿ

ಅದು ದೇಶದಲ್ಲಿ ಸುಮಾರು 85 ಶಾಖೆ ಹೊಂದಿರುವ ಕೇರಳ ಮೂಲದ ಫೈನಾನ್ಸ್ ಕಂಪನಿ. ಸದ್ಯ ಕೆಲ ದಿನಗಳಿಂದ ಕಂಪನಿ ಬಾಗಿಲು ಮುಚ್ಚಿದ್ದು, ಬಡವರು ಫೈನಾನ್ಸ್​ ಬಾಗಿಲು ಕಾಯುತ್ತಿದ್ದಾರೆ. ಕೂಲಿ ಮಾಡಿ ಹೊಟ್ಟೆ-ಬಟ್ಟೆ ಕಟ್ಟಿ ಹೆಚ್ಚಿನ ಬಡ್ಡಿ ಸಿಗುತ್ತೆ ಅಂತ ಆ ಫೈನಾನ್ಸ್​ ನಂಬಿ ಕೈ ಸುಟ್ಟುಕೊಂಡಿದ್ದಾರೆ. ಅಷ್ಟಕ್ಕೂ ಆ ಫೈನಾನ್ಸ್​ ಕಂಪನಿ ಯಾವುದು? ಏನಿದು ಸ್ಟೋರಿ? ಇಲ್ಲಿದೆ ಓದಿ...

ಹೆಚ್ಚಿನ ಬಡ್ಡಿ ನೀಡುವುದಾಗಿ ನಂಬಿಸಿ ಬಡವರಿಂದ ಲಕ್ಷಾಂತರ ಹಣ ಪಡೆದು ವಂಚಿಸಿದ ಕಂಪನಿ
ರಾಯಲ್ ಟ್ರಾವಂಕೂರ್ ಫೈನಾನ್ಸ್​​ ಕಂಪನಿ
ಅಶೋಕ್​ ಪೂಜಾರಿ
| Edited By: ವಿವೇಕ ಬಿರಾದಾರ|

Updated on: Dec 09, 2023 | 2:45 PM

Share

ಮಂಗಳೂರು, ಡಿಸೆಂಬರ್​​ 09: ಅದು ದೇಶದಲ್ಲಿ ಸುಮಾರು 85 ಶಾಖೆ ಹೊಂದಿರುವ ಕೇರಳ (Kerala) ಮೂಲದ ಫೈನಾನ್ಸ್ (Finance) ಕಂಪನಿ. ಸದ್ಯ ಕೆಲ ದಿನಗಳಿಂದ ಕಂಪನಿ ಬಾಗಿಲು ಮುಚ್ಚಿದ್ದು, ಬಡವರು ಫೈನಾನ್ಸ್​ ಬಾಗಿಲು ಕಾಯುತ್ತಿದ್ದಾರೆ. ಕೂಲಿ ಮಾಡಿ ಹೊಟ್ಟೆ-ಬಟ್ಟೆ ಕಟ್ಟಿ ಹೆಚ್ಚಿನ ಬಡ್ಡಿ ಸಿಗುತ್ತೆ ಅಂತ ಆ ಫೈನಾನ್ಸ್​ ನಂಬಿ ಕೈ ಸುಟ್ಟುಕೊಂಡಿದ್ದಾರೆ. ಅಷ್ಟಕ್ಕೂ ಆ ಫೈನಾನ್ಸ್​ ಕಂಪನಿ ಯಾವುದು? ಏನಿದು ಸ್ಟೋರಿ? ಇಲ್ಲಿದೆ ಓದಿ…

ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ಕೂಲಿ ನಾಲಿ ಮಾಡಿ ಅದೆಷ್ಟೊ ಜನರು ಬದುಕು ಕಟ್ಟಿಕೊಂಡಿದ್ದಾರೆ. ಹೀಗೆ ಕಡಿಮೆ ಸಂಪಾದನೆಯಲ್ಲೂ ಒಂದಷ್ಟು ಹಣ ಉಳಿಸಬೇಕು, ಜೊತೆಗೆ ಹೆಚ್ಚಿನ ಬಡ್ಡಿ ಸಿಗುತ್ತೆ ಅಂತ ರಾಷ್ಟ್ರಿಕೃತ ಬ್ಯಾಂಕ್ ಬಿಟ್ಟು ಫೈನಾನ್ಸ್​ ಕಂಪನಿಯಲ್ಲಿ ಹೂಡಿಕೆ ಮಾಡಿದ್ದರು. ಆದರೆ ಸದ್ಯ ಇವರಿಗೆ ಬಡ್ಡಿ ಸಿಗುವುದಿರಲಿ ಹೂಡಿರುವ ಅಸಲಿ ಹಣ ಸಿಗುವು ಡೌಟ್​ ಆಗಿದೆ. ಏಕೆಂದರೆ ಇವರು ಹೂಡಿಕೆ ಮಾಡಿರುವ ರಾಯಲ್ ಟ್ರಾವಂಕೂರ್ ಎಂಬುವ ಫೈನಾನ್ಸ್​ ಕಂಪೆನಿ ಸದ್ದಿಲ್ಲದೆ ಮುಚ್ಚಿದೆ.

ಹೌದು ರಾಯಲ್ ಟ್ರಾವಂಕೂರ್​ ಫಾರ್ಮರ್ಸ್​ ಪ್ರೊಡ್ಯೂಸರ್ ಫೈನಾನ್ಸ್​ ಕಂಪನಿ ಸದ್ಯ ಮಂಗಳೂರಿನ ಒಂದು ಬ್ರ್ಯಾಂಚ್​​​ನಲ್ಲೇ ಸರಿ ಸುಮಾರು 65 ಲಕ್ಷ ರೂ. ವಂಚನೆ ಮಾಡಿದೆ. ಕೇರಳ ಮೂಲದ ಈ ಫೈನಾನ್ಸ್​ ಕಂಪನಿ ಹೆಚ್ಚಿನ ಬಡ್ಡಿ ನೀಡುತ್ತೇವೆ ಎಂದು ಜನರಿಗೆ ನಂಬಿಸಿತ್ತು. ಹೀಗಾಗಿ ಕೂಲಿ ಕಾರ್ಮಿಕರು ಹೆಚ್ಚಾಗಿ ಈ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿ ಈಗ ಕೈ ಸುಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಸೈಟ್ ಕೊಡಿಸುವುದಾಗಿ ನಂಬಿಸಿ ವಂಚನೆ: ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಅನಿವಾಸಿ ಭಾರತೀಯ

ರಾಯಲ್​ ಟ್ರವಾಂಕೂರ್ ಫೈನಾನ್ಸ್​ ಕಂಪನಿ ದೇಶದ ಎಲ್ಲೆಡೆ ಸುಮಾರು 85 ಬ್ರ್ಯಾಂಚ್​​ಗಳನ್ನು ಹೊಂದಿದೆ. ಕರ್ನಾಟಕದ ಹಲವೆಡೆ ಈ ಫೈನಾನ್ಸ್​ ಕಂಪನಿ ಕಾರ್ಯನಿರ್ವಹಿಸುತ್ತಿದ್ದು, ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸಿದೆ. ಸದ್ಯ ರಾಜ್ಯದಲ್ಲಿ ಎಲ್ಲಾ ಕಡೆಯಲ್ಲೂ ಈ ಫೈನಾನ್ಸ್​ ಕಂಪನಿ ತನ್ನ ಕಚೇರಿಯನ್ನು ಬಂದ್ ಮಾಡಿದ್ದು ಸಿಬ್ಬಂದಿಗಳೂ ಸದ್ದಿಲ್ಲದೆ ಪರಾರಿಯಾಗಿದ್ದಾರೆ. ಕೂಲಿ ಕಾರ್ಮಿಕರು ಹಾಗೂ ದಿನಗೂಲಿ ನೌಕರರು ಹಾಗೂ ಒಂದಿಷ್ಟು ಅಂಗಡಿಯವರು ಈ ಫೈನಾನ್ಸ್​ನಲ್ಲಿ ಹಣ ಹೂಡಿಕೆ ಮಾಡಿದ್ದಾರೆ.

ಆದರೆ ಇದೀಗ ಕಂಪನಿ ಬಾಗಿಲು ಮುಂಚಿಕೊಂಡು ಹೋಗಿದ್ದು, ಫೈನಾನ್ಸ್​ ಕಂಪೆನಿ ಆರಂಭಿಸಲು ಪರವಾನಿಗೆ ನೀಡಿರುವ ಸರ್ಕಾರವೇ ತಮ್ಮ ಹಣ ವಾಪಾಸು ನೀಡಲಿ ಅಂತ ಬೇಡಿಕೆ ಇಟ್ಟಿದ್ದಾರೆ.

ತಮಗಾದ ವಂಚನೆ ಬಗ್ಗೆ ಜನರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ. ಆದರೆ ಆರಂಭದಲ್ಲಿ ಹಣ ನೀಡುವುದಾಗಿ ಹೇಳಿದ ಸಿಬ್ಬಂಧಿಗಳು ಇದೀಗ ಏಕಾ ಏಕಿ ಬಾಗಿಲು ಹಾಕಿ ಪರಾರಿಯಾಗಿದ್ದಾರೆ. ಒಟ್ಟಾರೆ ಅಧಿಕ ಬಡ್ಡಿ ನಂಬಿ ಕಷ್ಟದ ಹಣವನ್ನು ಹೂಡಿಕೆ ಮಾಡಿದ ಜನರು ಮಾತ್ರ ಈಗ ನ್ಯಾಯಕ್ಕಾಗಿ ಸರ್ಕಾರದ ಬಾಗಿಲು ತಟ್ಟುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ