AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಂಡಿ ಕೊಡಿಸುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಬಾಲಕಿ ತಂದೆಗೆ ಪರಿಚಿತನಾಗಿರುವ ಬಂಧಿತ ಆರೋಪಿಯು ಬಾಲಕಿಯನ್ನು ಮನೆಯಿಂದ ತಿಂಡಿ ಕೊಡಿಸುವ ನೆಪದಲ್ಲಿ ಕರೆತಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನ ಕೃತ್ಯದಿಂದ ಗಾಬರಿಗೊಂಡ ಬಾಲಕಿ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿ ಕೂಗಿಕೊಂಡಿದ್ದಾಳೆ.

ತಿಂಡಿ ಕೊಡಿಸುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಆರೀಫ್
TV9 Web
| Updated By: Skanda|

Updated on: Sep 13, 2021 | 2:57 PM

Share

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೇರಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸುಮಾರು ಐದು ವರ್ಷ ಪ್ರಾಯದ ಬಾಲಕಿಗೆ ತಿಂಡಿ ಕೊಡಿಸುವ ನೆಪದಲ್ಲಿ ಕಿರುಕುಳ ನೀಡಿದ ವ್ಯಕ್ತಿಯನ್ನು ಉಳ್ಳಾಲ ಪೊಲೀಸ್​ ಠಾಣೆ ಸಿಬ್ಬಂದಿ ವಶಕ್ಕೆ ಒಪ್ಪಿಸಲಾಗಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬಂಧಿತ ಆರೋಪಿಯನ್ನು ಆರೀಫ್ ಪಾಷಾ (30 ವರ್ಷ) ಎಂದು ಗುರುತಿಸಲಾಗಿದ್ದು, ಮೂಲತಃ ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿಯಾದ ಆತ ಸದ್ಯ ಮಂಗಳೂರಿನ ಕಲ್ಕಟ್ಟದಲ್ಲಿ ವಾಸಿಸುತ್ತಿದ್ದ ಎಂದು ತಿಳಿದುಬಂದಿದೆ. ಜೀವನ ನಡೆಸಲು ಕೆಲಸ ಅರಸಿ ಬಂದಿದ್ದ ಆರೀಫ್ ಪಾಷಾ ಕೂಲಿ ಕಾರ್ಮಿಕನಾಗಿದ್ದು, ಬಾಲಕಿಯ ತಂದೆಗೆ ಪರಿಚಿತನಾಗಿರುವ ಕಾರಣ ಅದನ್ನೇ ದುರ್ಬಳಕೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಬಾಲಕಿ ತಂದೆಗೆ ಪರಿಚಿತನಾಗಿರುವ ಬಂಧಿತ ಆರೋಪಿಯು ಬಾಲಕಿಯನ್ನು ಮನೆಯಿಂದ ತಿಂಡಿ ಕೊಡಿಸುವ ನೆಪದಲ್ಲಿ ಕರೆತಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನ ಕೃತ್ಯದಿಂದ ಗಾಬರಿಗೊಂಡ ಬಾಲಕಿ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಳೆ. ಅದೇ ಸಂದರ್ಭ ಆ ದಾರಿಯಲ್ಲಿ ಬರುತ್ತಿದ್ದ ಸಾಮಾಜಿಕ ಕಾರ್ಯಕರ್ತ ತಲಪಾಡಿಯ ಯಶು ಪಕಳ ದಂಪತಿ ಬೈಕ್ ನಿಲ್ಲಿಸಿದ್ದಾರೆ. ಕಾಪಾಡಿ ಕಾಪಾಡಿ ಅನ್ನುತ್ತಿದ್ದ ಬಾಲಕಿಯನ್ನು ಗಮನಿಸಿ ಏನಾಯಿತೆಂದು ಪ್ರಶ್ನಿಸಿದಾಗ ಪುಟ್ಟ ಬಾಲಕಿ ನಡೆದ ಕೃತ್ಯವನ್ನು ವಿವರಿಸಿದ್ದಾಳೆ.

ಬಾಲಕಿ ವಿಷಯ ತಿಳಿಸುತ್ತಿದ್ದಂತೆ ಸ್ಥಳೀಯರಿಗೆ ಮಾಹಿತಿ ನೀಡಿದ ಸಾಮಾಜಿಕ ಕಾರ್ಯಕರ್ತ ಯಶು ಪಕಳ ಅಲ್ಲಿದ್ದವರ ಸಹಕಾರದೊಂದಿಗೆ ಆರೋಪಿ ಆರೀಫ್ ಪಾಷಾನನ್ನು ತಕ್ಷಣ ಹಿಡಿದಿದ್ದಾರೆ. ಬಳಿಕ ಉಳ್ಳಾಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿ ಅವರ ವಶಕ್ಕೆ ಆತನನ್ನು ಒಪ್ಪಿಸಿದ್ದಾರೆ. ಸದ್ಯ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಫೇಸ್‌ಬುಕ್ ಖಾತೆ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ: ಬಂಟ್ವಾಳ ಪೊಲೀಸರಿಂದ ಆರೋಪಿಯ ಬಂಧನ 

Crime News: ಕೊಟ್ಟಿಗೆಗೆ ನುಗ್ಗಿ ಹಸುಗಳ ಮೇಲೆ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ; ಬೇಸತ್ತು ದನಗಳನ್ನೇ ಮಾರುತ್ತಿದ್ದಾರೆ ರೈತರು

(Mangaluru man sexually abused small girl detained by police with the help of public)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ