AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆರೋಸಾ ಶಾಲೆ ಶಿಕ್ಷಕಿ ವಿರುದ್ಧ ಆಡಿಯೋ ವೈರಲ್ ಮಾಡಿದ ಆರೋಪ; ಮಹಿಳೆಗೆ ವಿದೇಶದಿಂದ ಬೆದರಿಕೆ ಕರೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಶ್ರೀರಾಮನಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಆಡಿಯೋ ಮಾಡಿದ ಪೋಷಕಿಗೆ ಇವರೇ ಎಂದು ಮಹಿಳೆಯ ಕುಟುಂಬ ಸಹಿತ ಫೋಟೋವನ್ನು ಕಿಡಿಗೇಡಿಗಳು ವೈರಲ್ ಮಾಡಿದ್ದಾರೆ. ಅಲ್ಲದೆ, ಪ್ರಕರಣದ ನಂತರ ವಿದೇಶದಿಂದ ನಿರಂತರವಾಗಿ ಕರೆ ಮಾಡಿ ಬೆದರಿಕೆ ಹಾಕಲಾಗುತ್ತಿದೆ. ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೆರೋಸಾ ಶಾಲೆ ಶಿಕ್ಷಕಿ ವಿರುದ್ಧ ಆಡಿಯೋ ವೈರಲ್ ಮಾಡಿದ ಆರೋಪ; ಮಹಿಳೆಗೆ ವಿದೇಶದಿಂದ ಬೆದರಿಕೆ ಕರೆ
ಜೆರೋಸಾ ಶಾಲೆ ಶಿಕ್ಷಕಿ ವಿರುದ್ಧ ಆಡಿಯೋ ವೈರಲ್ ಮಾಡಿದ ಆರೋಪ; ಮಹಿಳೆಗೆ ವಿದೇಶದಿಂದ ಬೆದರಿಕೆ ಕರೆ
ಅಶೋಕ್​ ಪೂಜಾರಿ, ಮಂಗಳೂರು
| Updated By: Rakesh Nayak Manchi|

Updated on:Feb 19, 2024 | 10:40 PM

Share

ಮಂಗಳೂರು, ಫೆ.19: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಸಂತ ಜೆರೋಸಾ ಶಾಲೆಯ (St. Gerosa School, Mangaluru) ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಶ್ರೀರಾಮನಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಆಡಿಯೋ ಮಾಡಿದ ಪೋಷಕಿಗೆ ಇವರೇ ಎಂದು ಮಹಿಳೆಯ ಕುಟುಂಬ ಸಹಿತ ಫೋಟೋವನ್ನು ಕಿಡಿಗೇಡಿಗಳು ವೈರಲ್ ಮಾಡಿದ್ದಾರೆ. ಅಲ್ಲದೆ, ಪ್ರಕರಣದ ನಂತರ ವಿದೇಶದಿಂದ ನಿರಂತರವಾಗಿ ಕರೆ ಮಾಡಿ ಬೆದರಿಕೆ ಹಾಕುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಜೆರೋಸಾ ಶಾಲೆಯ ಶಿಕ್ಷಕಿ ಧರ್ಮ ಅವಹೇಳನ ಪ್ರಕರಣ ಸಂಬಂಧ ಶಿಕ್ಷಕಿ ವಿರುದ್ಧ ಆಡಿಯೋ ವೈರಲ್ ಮಾಡಿದ್ದು ಇವರೇ ಎಂದು ಹೇಳಿ ಮಂಗಳೂರಿನ ಗರೋಡಿ‌ ನಿವಾಸಿ ಕವಿತಾ ಅವರ ಕುಟುಂಬದ ಫೋಟೋದ ಜೊತೆಗೆ ಕವಿತಾರ ನಂಬರ್​ ಕೂಡ ವೈರಲ್ ಮಾಡಿದ್ದಾರೆ. ಇದರ ಜೊತೆಗೆ ವಿದೇಶದಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು, ಕಂಕನಾಡಿ ನಗರ ಪೊಲೀಸ್ ಠಾಣೆಗೆ‌ ಕವಿತಾ ಅವರು ದೂರು ನೀಡಿದ್ದಾರೆ.

ಕವಿತಾ ಅವರ ಮಗಳು ಜೆರೋಸಾ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾಳೆ. ಸಿಸ್ಟರ್ ಪ್ರಭಾ ವಿರುದ್ಧ ಪೋಷಕರ ಪ್ರತಿಭಟನೆಯಲ್ಲೂ ಭಾಗವಹಿಸಿದ್ದಳು. ಈ ನಡುವೆ, ಜೆರೋಸಾ ಶಿಕ್ಷಕಿ ಆಡಿಯೋ ವೈರಲ್ ಮಾಡಿದ್ದು ಕವಿತಾ ಅಂತ ಆರೋಪಿಸಿ ಬೆದರಿಕೆ ಹಾಕಲಾಗುತ್ತಿದೆ. ಕತಾರ್, ದುಬೈ, ಸೌದಿ ಸೇರಿ ಹಲವೆಡೆಯಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿವೆ. ಅವಾಚ್ಯವಾಗಿ ನಿಂದಿಸಿ ವಾಟ್ಸ್​ಆ್ಯಪ್​ಗೆ ಅಶ್ಲೀಲವಾದ ಆಡಿಯೋ ಸಂದೇಶ ಕಳುಹಿಸಲಾಗುತ್ತಿದೆ.

ಕೆಲವು ವಾಟ್ಸ್​ಆ್ಯಪ್​ ಗ್ರೂಪ್​ಗೆ ಕವಿತಾ ಅವರ ನಂಬರ್ ಸೇರಿಸಿ ನಿರಂತರ ಕಿರುಕುಳ ನೀಡಲಾಗುತ್ತಿದೆ. ಆಡಿಯೋ ವೈರಲ್ ಮಾಡುತ್ತೀಯಾ ಅಂತ ನಿರಂತರ ಬೆದರಿಕೆ ಕರೆ ಮಾಡಲಾಗಿದೆ. ಆದರೆ ವೈರಲ್ ಆಗಿರುವ ಆಡಿಯೋ ತನ್ನದಲ್ಲದಿದ್ದರೂ ನಿರಂತರ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿ ಕವಿತಾ ಅವರು ಬೆದರಿಕೆ ಆಡಿಯೋ, ವಾಟ್ಸ್​ಆ್ಯಪ್ ಸ್ಕ್ರೀನ್ ಶಾಟ್​ಗಳ ಸಹಿತ ಕಂಕನಾಡಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಜೆರೋಸಾ ಶಾಲೆ ಪ್ರಕರಣ: ತನಿಖಾಧಿಕಾರಿಗೆ ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ ವಿದ್ಯಾರ್ಥಿಗಳ ಲಿಖಿತ ಹೇಳಿಕೆ ಸಲ್ಲಿಕೆ

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಕವಿತಾ, ಫೆ.15 ರಿಂದ ಬೆದರಿಕೆ ಕರೆಗಳು ಬರಲು ಆರಂಭವಾಗಿವೆ. ಈ ಎಲ್ಲಾ ಘಟನೆಗಳಿಗೆ ನಾನು ಕಾರಣ ಎಂಬ ರೀತಿಯಲ್ಲಿ ಸಂದೇಶವೊಂದನ್ನು ಸೃಷ್ಟಿ ಮಾಡಲಾಗಿದೆ. ಫೇಸ್ ಬುಕ್ ಖಾತೆಯಿಂದ ನನ್ನ ಪೋಟೋ ಬಳಸಿ ವೈರಲ್ ಮಾಡಿದ್ದಾರೆ.ರಾತ್ರಿ ಹೊತ್ತು ಹೊರದೇಶದಿಂದ ಅನಾಮಿಕ‌ ಕರೆಗಳು ಬರಲು ಆರಂಭವಾಗಿದೆ. ನನಗೆ ಕಿರುಕುಳ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಆಡಿಯೋದಲ್ಲಿ ನನ್ನ ಅಪ್ಪ ಅಮ್ಮನ ಬಗ್ಗೆ ಕೆಟ್ಟದಾಗಿ ಬೈಯಲಾಗಿದೆ. ಅತ್ಯಂತ ಕೆಟ್ಟ ಪದಗಳಲ್ಲಿ ಏನೆಲ್ಲಾ ಬೈದಿದ್ದಾರೆ. ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ತನಿಖೆ ಮಾಡುತ್ತೇವೆಂದು ಪೊಲೀಸರು ಹೇಳಿದ್ದಾರೆ. ಎಲ್ಲಾ ದಾಖಲೆಗಳನ್ನು ಸಹ ಪೊಲೀಸರಿಗೆ ನೀಡಿದ್ದೇನೆ. ನಾನು ಮೊನ್ನೆ ಮಾಧ್ಯಮಗಳ ಮುಂದೆ ಮಾತನಾಡಿದಕ್ಕೆ ಟಾರ್ಗೆಟ್ ಮಾಡಿದ್ದಾರೆ. ಸಿಸ್ಟರ್ ಪ್ರಭಾ ಆ ರೀತಿ ಪಾಠ ಮಾಡಬಾರದಿತ್ತು. ವರ್ಕ್ ಆ್ಯಂಡ್ ವರ್‌ಶಿಪ್ ಪಾಠಕ್ಕೆ ಪೂರಕವಾಗಿ ಬೇರೆ ಏನಾದರೂ ಹೇಳಬಹುದು. ಆದರೆ ರಾಮನ ಬಗ್ಗೆ, ಗೋದ್ರಾ ಘಟನೆ ಬಗ್ಗೆ ವಿವರಿಸುವ ಅಗತ್ಯವಿರಲಿಲ್ಲ ಎಂದರು.

ನಾನು ಸಹ 15 ವರ್ಷದಿಂದ ಶಿಕ್ಷಕಿಯಾಗಿದ್ದೇನೆ. ಶಾಲೆ ಅಂತಾ ಬಂದ ಮೇಲೆ ಎಲ್ಲಾ ಮಕ್ಕಳು ನಮ್ಮವರು. ಎಲ್ಲರನ್ನು ನಮ್ಮ ಮಕ್ಕಳೆಂದು ನೋಡುವಾಗ ನಿರ್ದಿಷ್ಟವಾಗಿ ರಾಮನ ಬಗ್ಗೆ, ಧರ್ಮದ ಬಗ್ಗೆ ನಿಂಧಿಸುವ ಅಗತ್ಯವಿಲ್ಲ. ಆ ಒಂದು ಕಾರಣದಿಂದ ನನಗೆ ಹಲವು ಕರೆಗಳು ಬರುತ್ತಿದೆ. ಘಟನೆ ಬಗ್ಗೆ ತನಿಖೆಗೆ ಸರ್ಕಾರದಿಂದ ನೇಮಿಸಿದ ತನಿಖಾಧಿಕಾರಿ ನನ್ನನ್ನು ಸಂಪರ್ಕಿಸಿಲ್ಲ. ಸಂಪರ್ಕ ಮಾಡಿದರೆ ಇದೆಲ್ಲಾ ವಿಚಾರವನ್ನು ಹೇಳಲು ತಯಾರಿದ್ದೇನೆ. ಶನಿವಾರ ಏಳನೇ ತರಗತಿ ಮಕ್ಕಳು ಹಾಗೂ ಪೋಷಕರನ್ನು ಕರೆದಿದ್ದಾರೆ. ಆದ ಘಟನೆ ಬಗ್ಗೆ ಹೇಳಿಕೆ ಬರೆಸಿಕೊಂಡಿದ್ದಾರೆ. ರಾಮನ ಮೇಲೆ ಭಾರ ಹಾಕಿದ್ದೇನೆ. ಅವನೇ ಸರಿಯಾದ ರೀತಿಯಲ್ಲಿ ತನಿಖೆ ಆಗುವಂತೆ ಮಾಡಬೇಕು ಎಂದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:35 pm, Mon, 19 February 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!