AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕರ್ಣಾಟಕ ಬ್ಯಾಂಕ್​ನಲ್ಲಿ ಕೋಟ್ಯಂತರ ನಗದು, ಚಿನ್ನಾಭರಣ ದೋಚಿದ್ದ ಮೂವರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಭಾರೀ ಕಳ್ಳತನ ನಡೆದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಂತರ ನಗದು ಮತ್ತು ಚಿನ್ನಾಭರಣ ದೋಚಿದ್ದ ಮೂವರವನ್ನು ಪುತ್ತೂರು ಉಪವಿಭಾಗದ ಪೊಲೀಸರ ತಂಡ ಬಂಧಿಸಿದೆ.

ಮಂಗಳೂರು: ಕರ್ಣಾಟಕ ಬ್ಯಾಂಕ್​ನಲ್ಲಿ ಕೋಟ್ಯಂತರ ನಗದು, ಚಿನ್ನಾಭರಣ ದೋಚಿದ್ದ ಮೂವರ ಬಂಧನ
ಬಂಧಿತರು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Mar 11, 2024 | 5:00 PM

Share

ಮಂಗಳೂರು, ಮಾರ್ಚ್​ 11: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ (Karnataka Bank) ಶಾಖೆಯಲ್ಲಿ ಭಾರೀ ಕಳ್ಳತನ ನಡೆದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಂತರ ನಗದು ಮತ್ತು ಚಿನ್ನಾಭರಣ ದೋಚಿದ್ದ ಮೂವರವನ್ನು ಪುತ್ತೂರು ಉಪವಿಭಾಗದ ಪೊಲೀಸರ ತಂಡ ಬಂಧಿಸಿದೆ. ಬಂಟ್ವಾಳದ ಮಹಮ್ಮದ್ ರಫೀಕ್ ( 35 ), ಮಂಜೇಶ್ವರದ ಇಬ್ರಾಹಿಂ ಕಲಂದರ್ (41) ಹಾಗೂ ಮಂಜೇಶ್ವರದ ದಯಾನಂದ ಎಸ್ (37) ಬಂಧಿತರು. ಘಟನೆ ನಡೆದು ಒಂದು ತಿಂಗಳ ಬಳಿಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸುಮಾರು 20 ವರ್ಷ ಹಳೇ ಕಟ್ಟಡದಲ್ಲಿ ಕರ್ನಾಟಕ ಬ್ಯಾಂಕ್ ಶಾಖೆ ಕಾರ್ಯನಿರ್ವಹಿಸುತ್ತಿತ್ತು. ಬ್ಯಾಂಕ್ ಸುತ್ತಲೂ ಪೊದೆಯಿದ್ದರಿಂದ ಕಿಟಕಿ ಮುರಿದು ಒಳನುಗ್ಗಿ ಕಳವು ಮಾಡಲಾಗಿತ್ತು.

ದುಷ್ಕರ್ಮಿಗಳಿಂದ ಬ್ಯಾಂಕ್​​ ದರೋಡೆಗೆ ಯತ್ನ

ಕೊಪ್ಪಳ: ದುಷ್ಕರ್ಮಿಗಳು ಬ್ಯಾಂಕ್​​ನಲ್ಲಿ ದರೋಡೆ ಮಾಡಲು ಯತ್ನಿಸಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್​​ನ ಶೆಟರ್ ಗಳನ್ನು ಮುರಿದು ದುಷ್ಕರ್ಮಿಗಳು ಒಳಹೋಗಲು ಯತ್ನಿಸಿದ್ದರು.

ಇದನ್ನೂ ಓದಿ: ಮಂಗಳೂರಿನಲ್ಲೊಂದು ಅಮಾನವೀಯ ಘಟನೆ: ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಿಂದ ಹೊಡೆದ ಸೊಸೆ, ಬಂಧನ

ಬ್ಯಾಂಕ್​​ನಲ್ಲಿರುವ ಸಿಸಿಟಿವಿಗಳನ್ನು ಹಾಳು ಮಾಡಿದ್ದರು. ಆದರೆ ಒಳಹೋಗಲು ಆಗದೇ ಇದ್ದಾಗ ಅಲ್ಲಿಂದ ಕಾಲ್ಕಿತ್ತಿದ್ದರು. ಈ ಬಗ್ಗೆ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದ್ದು, ದರೋಡೆಕೋರರ ಗ್ಯಾಂಗ್ ಪತ್ತೆ ಮಾಡಲು ಮುಂದಾಗಿದೆ.

ಪೋನ್ ಪೇ ಮಾಡಿಸಿಕೊಳ್ಳೊ ನೆಪದಲ್ಲಿ ಪೋನ್ ಸೇರಿದಂತೆ ಚಿನ್ನದ ಸರ ಕಳ್ಳತನ

ಚಿಕ್ಕಬಳ್ಳಾಪುರ: ತಮ್ಮ ಸ್ನೇಹಿತನಿಗೆ ಪೋನ್ ಪೇನಲ್ಲಿ ಅರ್ಜೆಂಟಾಗಿ ಹಣ ಕಳಿಸಬೇಕು, ನಾವು ಕ್ಯಾಶ್ ಕೊಡ್ತಿವಿ ನೀವು ಅವರಿಗೆ ಹಣ ಕಳುಹಿಸಿ ಅಂತ ನಂಬಿಸಿ ಹಣ ವರ್ಗಾವಣೆ ಮಾಡುವ ಸಮಯದಲ್ಲಿ ನಂಬಿದ ವ್ಯಕ್ತಿಯ ಪೋನ್ ಹಾಗೂ ಆತನ 24 ಗ್ರಾಮ್ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದಂತಹ ಘಟನೆ ಇತ್ತೀಚೆಗೆ ನಡೆದಿತ್ತು.

ಇದನ್ನೂ ಓದಿ: ಶಿವರಾತ್ರಿಯಂದು ಡ್ಯಾನ್ಸ್ ಮಾಡುವಾಗ ಮೈ ಟಚ್ ಆಗಿದ್ದಕ್ಕೆ ಕೊಲೆ; ಮೂವರು ಆರೋಪಿಗಳು ಅರೆಸ್ಟ್

ಚಿಕ್ಕಬಳ್ಳಾಪುರ ತಾಲೂಕು ಯರಗಾನಹಳ್ಳಿ ಗ್ರಾಮದ ಬಳಿ ತೋಟದಲ್ಲಿದ್ದ ಚಂದ್ರಶೇಖರ್ ಎನ್ನುವವರನ್ನು ನಂಬಿಸಿ ಕಳ್ಳತನ ಮಾಡಲಾಗಿತ್ತು. ಇದರಿಂದ ನೊಂದ ಚಂದ್ರಶೇಖರ್ ನ್ಯಾಯಕ್ಕಾಗಿ ಚಿಕ್ಕ ಗ್ರಾಮಾಂತರ ಪೊಲೀಸರ ಮೊರೆ ಹೋಗಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:29 pm, Mon, 11 March 24

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು