AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಪತ್ನಿ, ಮಗನನ್ನು ಕೊಂದು ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ಭೀಕರ ಘಟನೆ ನಡೆದಿದೆ. ಕಾರ್ತಿಕ್ ಭಟ್ ಎಂಬಾತ ತನ್ನ ಪತ್ನಿ ಪ್ರಿಯಾಂಕಾ ಮತ್ತು ನಾಲ್ಕು ವರ್ಷದ ಮಗ ಹೃದಯ್ ಅನ್ನು ಚೂರಿಯಿಂದ ಇರಿದು ಕೊಂದು ನಂತರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಸಮಸ್ಯೆ ಕಾರಣ ಎಂದು ಶಂಕಿಸಲಾಗಿದೆ.

ಮಂಗಳೂರು: ಪತ್ನಿ, ಮಗನನ್ನು ಕೊಂದು ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ
ಮಂಗಳೂರು: ಪತ್ನಿ, ಮಗನನ್ನು ಕೊಂದು ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Nov 09, 2024 | 6:20 PM

Share

ಮಂಗಳೂರು, ನವೆಂಬರ್​ 09: ಪತ್ನಿ ಮತ್ತು ಮಗನನ್ನು ಚೂರಿಯಿಂದ ಇರಿದು ಕೊಂದು (Kills) ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. ಪತ್ನಿ ಪ್ರಿಯಾಂಕಾ(28), ಪುತ್ರ ಹೃದಯ್(4) ಕೊಲೆ ಮಾಡಿ ಕಾರ್ತಿಕ್ ಭಟ್(32) ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಸಮಸ್ಯೆಯಿಂದ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮುಲ್ಕಿ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಹಕಾರಿ ಬ್ಯಾಂಕ್​ನಲ್ಲಿ ಉದ್ಯೋಗ ಮಾಡಿಕೊಂಡಿದ್ದ ಕಾರ್ತಿಕ್ ಭಟ್​ ನಿನ್ನೆಯೇ ಪತ್ನಿ, ಮಗನನ್ನು ಕೊಂದು ಬಳಿಕ ತಾವು ಮುಲ್ಕಿ ಹೊರವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ತಿಕ್ ಫ್ಲ್ಯಾಟ್ ಬಳಿಗೆ ಪೊಲೀಸರು ಬಂದಾಗ ಪತ್ನಿ, ಪುತ್ರನ ಶವ ಪತ್ತೆ ಆಗಿದೆ.

ಕೌಟುಂಬಿಕ ಸಮಸ್ಯೆಯಿಂದ ಹತ್ಯೆ ಮಾಡಿರುವ ಶಂಕೆ

ಸೊಸೆ ಮತ್ತು ಮೊಮ್ಮಗನ ಮೃತದೇಹ ಮನೆಯಲ್ಲಿದ್ದರೂ ವೃದ್ಧ ಅತ್ತೆ ಮಾವನಿಗೆ ಗೊತ್ತೆ ಆಗಿಲ್ಲ. ಕಾರ್ತಿಕ್ ಪತ್ನಿಗೆ ತನ್ನ ಮಾವ ಅತ್ತೆಯೊಂದಿಗೆ ಮನಸ್ತಾಪವಿದ್ದ ಮಾಹಿತಿ ಇದೆ. ಮನೆಯ ಕೋಣೆಯಲ್ಲಿ ಮತೃ ಕಾರ್ತಿಕ್ ಕುಟುಂಬ ಪ್ರತ್ಯೇಕವಾಗಿದ್ದು, ಇಡೀ ದಿನ ಮನೆಯ ಕೋಣೆಯಲ್ಲೇ ಇರುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಊರಿಗೆ ಹೋಗಿ ಬರುವಷ್ಟರಲ್ಲಿ ವ್ಯಾಪಾರಿಗೆ ಕಾದಿತ್ತು ಶಾಕ್​: ಮನೆಯಲ್ಲಿದ್ದ 15 ಕೋಟಿ ಮೌಲ್ಯದ ಚಿನ್ನ ಕಳವು

ಇನ್ನು ಮೃತ ಕಾರ್ತಿಕ್ ತಂದೆ ಜನಾರ್ದನ ಭಟ್​ ಪಕ್ಷಿಕೆರೆ ಜಂಕ್ಷನ್​ಲ್ಲಿ ಹೋಟೆಲ್ ನಡೆಸುತ್ತಿದ್ದರು. ನಿನ್ನೆ ಬೆಳಗ್ಗೆಯೂ ಮನೆಯಿಂದ ಹೋಟೆಲ್​ಗೆ ತೆರಳಿದ್ದರು. ಈ ವೇಳೆ ಹೆಂಡತಿ ಮತ್ತು ಮಗುವನ್ನು ಕೋಣೆಯೊಳಗೆ ಕಾರ್ತಿಕ್ ಹತ್ಯೆ ಮಾಡಿದ್ದಾರೆ.

ನಿನ್ನೆ ರಾತ್ರಿಯೂ ಮಗ, ಸೊಸೆ ಮತ್ತು ಮೊಮ್ಮಗ ಕೋಣೆಯಲ್ಲಿಯೇ ಇದ್ದಾರೆಂದು ಮಾವ ಜನಾರ್ದನ ಭಾವಿಸಿದ್ದರು. ಇಂದು ಬೆಳಗ್ಗೆ ಕೂಡ ಎಂದಿನಂತೆ ಅವರು ಹೋಟೆಲ್​ಗೆ ತೆರಳಿದ್ದಾರೆ. ಮಧ್ಯಾಹ್ನ ಕಾರ್ತಿಕ್ ವಿಳಾಸ ಹುಡುಕಿಕೊಂಡು ಪಕ್ಷಿಕೆರೆಯ ಮನೆಗೆ ಪೊಲೀಸರು ಬಂದಿದ್ದಾರೆ. ಮನೆಯ ಕೋಣೆಯ ಬಾಗಿಲು ತೆರೆದಾಗ ಕಾರ್ತಿಕ್ ಪತ್ನಿ, ಮಗ ಮೃತದೇಹ ಪತ್ತೆ ಆಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ