Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಪತ್ನಿ, ಮಗನನ್ನು ಕೊಂದು ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ಭೀಕರ ಘಟನೆ ನಡೆದಿದೆ. ಕಾರ್ತಿಕ್ ಭಟ್ ಎಂಬಾತ ತನ್ನ ಪತ್ನಿ ಪ್ರಿಯಾಂಕಾ ಮತ್ತು ನಾಲ್ಕು ವರ್ಷದ ಮಗ ಹೃದಯ್ ಅನ್ನು ಚೂರಿಯಿಂದ ಇರಿದು ಕೊಂದು ನಂತರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಸಮಸ್ಯೆ ಕಾರಣ ಎಂದು ಶಂಕಿಸಲಾಗಿದೆ.

ಮಂಗಳೂರು: ಪತ್ನಿ, ಮಗನನ್ನು ಕೊಂದು ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ
ಮಂಗಳೂರು: ಪತ್ನಿ, ಮಗನನ್ನು ಕೊಂದು ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Nov 09, 2024 | 6:20 PM

ಮಂಗಳೂರು, ನವೆಂಬರ್​ 09: ಪತ್ನಿ ಮತ್ತು ಮಗನನ್ನು ಚೂರಿಯಿಂದ ಇರಿದು ಕೊಂದು (Kills) ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. ಪತ್ನಿ ಪ್ರಿಯಾಂಕಾ(28), ಪುತ್ರ ಹೃದಯ್(4) ಕೊಲೆ ಮಾಡಿ ಕಾರ್ತಿಕ್ ಭಟ್(32) ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಸಮಸ್ಯೆಯಿಂದ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮುಲ್ಕಿ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಹಕಾರಿ ಬ್ಯಾಂಕ್​ನಲ್ಲಿ ಉದ್ಯೋಗ ಮಾಡಿಕೊಂಡಿದ್ದ ಕಾರ್ತಿಕ್ ಭಟ್​ ನಿನ್ನೆಯೇ ಪತ್ನಿ, ಮಗನನ್ನು ಕೊಂದು ಬಳಿಕ ತಾವು ಮುಲ್ಕಿ ಹೊರವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ತಿಕ್ ಫ್ಲ್ಯಾಟ್ ಬಳಿಗೆ ಪೊಲೀಸರು ಬಂದಾಗ ಪತ್ನಿ, ಪುತ್ರನ ಶವ ಪತ್ತೆ ಆಗಿದೆ.

ಕೌಟುಂಬಿಕ ಸಮಸ್ಯೆಯಿಂದ ಹತ್ಯೆ ಮಾಡಿರುವ ಶಂಕೆ

ಸೊಸೆ ಮತ್ತು ಮೊಮ್ಮಗನ ಮೃತದೇಹ ಮನೆಯಲ್ಲಿದ್ದರೂ ವೃದ್ಧ ಅತ್ತೆ ಮಾವನಿಗೆ ಗೊತ್ತೆ ಆಗಿಲ್ಲ. ಕಾರ್ತಿಕ್ ಪತ್ನಿಗೆ ತನ್ನ ಮಾವ ಅತ್ತೆಯೊಂದಿಗೆ ಮನಸ್ತಾಪವಿದ್ದ ಮಾಹಿತಿ ಇದೆ. ಮನೆಯ ಕೋಣೆಯಲ್ಲಿ ಮತೃ ಕಾರ್ತಿಕ್ ಕುಟುಂಬ ಪ್ರತ್ಯೇಕವಾಗಿದ್ದು, ಇಡೀ ದಿನ ಮನೆಯ ಕೋಣೆಯಲ್ಲೇ ಇರುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಊರಿಗೆ ಹೋಗಿ ಬರುವಷ್ಟರಲ್ಲಿ ವ್ಯಾಪಾರಿಗೆ ಕಾದಿತ್ತು ಶಾಕ್​: ಮನೆಯಲ್ಲಿದ್ದ 15 ಕೋಟಿ ಮೌಲ್ಯದ ಚಿನ್ನ ಕಳವು

ಇನ್ನು ಮೃತ ಕಾರ್ತಿಕ್ ತಂದೆ ಜನಾರ್ದನ ಭಟ್​ ಪಕ್ಷಿಕೆರೆ ಜಂಕ್ಷನ್​ಲ್ಲಿ ಹೋಟೆಲ್ ನಡೆಸುತ್ತಿದ್ದರು. ನಿನ್ನೆ ಬೆಳಗ್ಗೆಯೂ ಮನೆಯಿಂದ ಹೋಟೆಲ್​ಗೆ ತೆರಳಿದ್ದರು. ಈ ವೇಳೆ ಹೆಂಡತಿ ಮತ್ತು ಮಗುವನ್ನು ಕೋಣೆಯೊಳಗೆ ಕಾರ್ತಿಕ್ ಹತ್ಯೆ ಮಾಡಿದ್ದಾರೆ.

ನಿನ್ನೆ ರಾತ್ರಿಯೂ ಮಗ, ಸೊಸೆ ಮತ್ತು ಮೊಮ್ಮಗ ಕೋಣೆಯಲ್ಲಿಯೇ ಇದ್ದಾರೆಂದು ಮಾವ ಜನಾರ್ದನ ಭಾವಿಸಿದ್ದರು. ಇಂದು ಬೆಳಗ್ಗೆ ಕೂಡ ಎಂದಿನಂತೆ ಅವರು ಹೋಟೆಲ್​ಗೆ ತೆರಳಿದ್ದಾರೆ. ಮಧ್ಯಾಹ್ನ ಕಾರ್ತಿಕ್ ವಿಳಾಸ ಹುಡುಕಿಕೊಂಡು ಪಕ್ಷಿಕೆರೆಯ ಮನೆಗೆ ಪೊಲೀಸರು ಬಂದಿದ್ದಾರೆ. ಮನೆಯ ಕೋಣೆಯ ಬಾಗಿಲು ತೆರೆದಾಗ ಕಾರ್ತಿಕ್ ಪತ್ನಿ, ಮಗ ಮೃತದೇಹ ಪತ್ತೆ ಆಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ