AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಮಣಿಪುರದ ದಂಪತಿ ಮೇಲೆ ಜನರ ಗುಂಪಿನಿಂದ ಹಲ್ಲೆ

ದಿಲ್ಲಿಯ ಸನ್‌ಲೈಟ್‌ ಕಾಲೋನಿಯಲ್ಲಿ ರಾತ್ರಿ ವೇಳೆ ಮಣಿಪುರದ ದಂಪತಿ ಮತ್ತು ಇತರ ಇಬ್ಬರ ಮೇಲೆ ಎಂಟು-ಒಂಬತ್ತು ಜನರ ಗುಂಪೊಂದು ರಸ್ತೆಯಲ್ಲಿ ಹಲ್ಲೆ ನಡೆಸಿದೆ. ಗುರುವಾರ ನಡೆದ ಘಟನೆಯನ್ನು ರಸ್ತೆಯ ಬಾಲ್ಕನಿಯಲ್ಲಿ ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ. ನಾವು ಸತ್ತು ಹೋಗ್ತೀವಿ ಎಂದೇ ಅಂದುಕೊಂಡೆವು ಎಂದು ಸಂತ್ರಸ್ತರು ಪೊಲೀಸ್ ಠಾಣೆ ಮುಂದೆ ಕಣ್ಣೀರು ಹಾಕಿದ್ದಾರೆ.

ದೆಹಲಿಯಲ್ಲಿ ಮಣಿಪುರದ ದಂಪತಿ ಮೇಲೆ ಜನರ ಗುಂಪಿನಿಂದ ಹಲ್ಲೆ
ಮಣಿಪುರ ದಂಪತಿ ಮೇಲೆ ಹಲ್ಲೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Dec 02, 2023 | 5:39 PM

Share

ದೆಹಲಿ ಡಿಸೆಂಬರ್ 02 : ಆಗ್ನೇಯ ದೆಹಲಿಯ ಸನ್‌ಲೈಟ್‌ ಕಾಲೋನಿಯಲ್ಲಿ ರಾತ್ರಿ ವೇಳೆ ಮಣಿಪುರದ (Manipur) ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರ ಮೇಲೆ ಎಂಟು-ಒಂಬತ್ತು ಜನರ ಗುಂಪೊಂದು ರಸ್ತೆಯಲ್ಲಿ ಹಲ್ಲೆ ನಡೆಸಿದೆ. ಗುರುವಾರ ನಡೆದ ಘಟನೆಯನ್ನು ರಸ್ತೆಯ ಬಾಲ್ಕನಿಯಲ್ಲಿ ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್ ಮಾಡಲಾಗಿದೆ. ಶುಕ್ರವಾರ ರಾತ್ರಿ ಹಲವಾರು ಅಪರಿಚಿತ ಆರೋಪಿಗಳ ವಿರುದ್ಧ ಪ್ರಥಮ ಮಾಹಿತಿ ವರದಿ (FIR) ದಾಖಲಿಸಲಾಗಿದೆ ಎಂದು ಸನ್‌ಲೈಟ್ ಕಾಲೋನಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್‌ಡಿಟಿವಿ ಎಫ್‌ಐಆರ್ ಪ್ರತಿಯನ್ನು ನೋಡಿದ್ದು ಆರೋಪಗಳಲ್ಲಿ ಲೈಂಗಿಕ ದೌರ್ಜನ್ಯವೂ ಸೇರಿದೆ ಎಂದು ವರದಿ ಮಾಡಿದೆ.

ಶುಕ್ರವಾರ ತಡರಾತ್ರಿ ಎಫ್‌ಐಆರ್ ದಾಖಲಿಸಿದ ನಂತರ ದೂರುದಾರರು ಸನ್‌ಲೈಟ್ ಕಾಲೋನಿ ಪೊಲೀಸ್ ಠಾಣೆಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸಿಸಿಟಿವಿ ದೃಶ್ಯಾವಳಿಗಳಲ್ಲಿ ಇಬ್ಬರು ಆರೋಪಿಗಳ ಮುಖಗಳು ಸ್ಪಷ್ಟವಾಗಿ ಕಂಡುಬರುತ್ತವೆ ಎಂದಿದ್ದಾರೆ. ಮೊಬೈಲ್ ದೃಶ್ಯಗಳಲ್ಲಿ ಒಬ್ಬ ಪುರುಷ, ಅವನ ಹೆಂಡತಿ, ಅವನ ಸಹೋದರಿ ಮತ್ತು ಕುಟುಂಬದ ಸ್ನೇಹಿತ ಈ ನಾಲ್ವರಿಗೆ ಜನರ ಮೇಲೆ ಗುಂಪೊಂದು ಹಲ್ಲೆ ನಡೆಸುತ್ತಿರುವುದನ್ನು ತೋರಿಸುತ್ತದೆ.

“ನನ್ನ ಹೆಂಡತಿ ಮತ್ತು ನಾನು ಮತ್ತು ನನ್ನ ಸಹೋದರಿ ರಾತ್ರಿ 11 ಗಂಟೆಗೆ ಊಟದ ನಂತರ ಸ್ನೇಹಿತನನ್ನು ಮನೆಗೆ ಬಿಡುತ್ತಿದ್ದಾಗ ಇಬ್ಬರು ಪುರುಷರು ಮತ್ತು ಮಹಿಳೆ ನಮ್ಮ ಬಳಿಗೆ ಬಂದರು, ಅವರ ಮೊಬೈಲ್ ಬ್ಯಾಟರಿ ಡೆಡ್ ಆಗಿದೆ. ಮುನಿರ್ಕಾಗೆ (ದಕ್ಷಿಣ ದೆಹಲಿಯಲ್ಲಿ) ಕ್ಯಾಬ್ ಬುಕ್ ಮಾಡಲು ಅವರಿಗೆ ಸಹಾಯ ಬೇಕು ಎಂದು ಹೇಳಿದರು.

“ನಾವು ಸಹಾಯ ಮಾಡಲು ಒಪ್ಪಿಕೊಂಡೆವು. ಕ್ಯಾಬ್ ಬುಕ್ ಮಾಡುವಾಗ, ಸಹಾಯ ಕೇಳಿದ ವ್ಯಕ್ತಿ ನನ್ನ ಹೆಂಡತಿ ಮತ್ತು ಸಹೋದರಿಯ ವಿರುದ್ಧ ಅಸಭ್ಯ ಮಾತುಗಳನ್ನಾಡಿದ್ದಾರೆ. ನಾವು ಅವರ ವರ್ತನೆಯನ್ನು ವಿರೋಧಿಸಿದಾಗ ಅವರು ರೊಚ್ಚಿಗೆದ್ದರು.ಅವರ ಎಂಟು-ಒಂಬತ್ತು ಸ್ನೇಹಿತರನ್ನು ಕರೆದು ನಮಗೆ ಹೊಡೆಯಲು ಪ್ರಾರಂಭಿಸಿದರು ಎಂದು ಸಂತ್ರಸ್ತರು ಹೇಳಿದ್ದಾರೆ.

ಇದನ್ನೂ ಓದಿ: ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಮಣಿಪುರದ ಯುಎನ್‌ಎಲ್‌ಎಫ್: ಅಮಿತ್ ಶಾ

ಆ ಜನರ ಗುಂಪು ನನ್ನ ಕೂದಲನ್ನು ಎಳೆದುಕೊಂಡು, ನೆಲದ ಮೇಲೆ ಒದ್ದು ತನ್ನನ್ನು ಎಳೆಯಲು ಪ್ರಯತ್ನಿಸಿದೆ ಎಂದು ಅವರ ಪತ್ನಿ ಆರೋಪಿಸಿದ್ದಾರೆ. “ನಾನು ಸತ್ತೆ ಎಂದು ನಾನು ಭಾವಿಸಿದೆ, ನಾವೆಲ್ಲರೂ ಸತ್ತು ಹೋಗುತ್ತಿದ್ದೆವು ಆದರೆ ಅವರು ಹೊಡೆಯುವುದನ್ನು ನಿಲ್ಲಿಸಲಿಲ್ಲ,ಯಾರೂ ಅವರನ್ನು ತಡೆಯಲಿಲ್ಲ” ಎಂದು ಮಹಿಳೆ ಹೇಳಿದ್ದಾರೆ.

ಅವರು ಕ್ಯಾಬ್ ಕಾಯ್ದಿರಿಸಲು ಸಹಾಯ ಕೇಳಿದಾಗ ನಾವು ನಡೆದುಕೊಂಡು ಹೋಗುತ್ತಿದ್ದೆವು. ನೋಡಿ ಅವರು ನಮ್ಮ ಜತೆ ಮಾಡಿದ್ದು ಎಂದು ಮಹಿಳೆ ಪೊಲೀಸ್ ಠಾಣೆಯ ಮುಂದೆ ಕಣ್ಣೀರಾಗಿದ್ದಾರೆ. ಪೊಲೀಸರು ಆ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚಲು ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್