AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್​ಗೆ ಟ್ರಕ್ ಡಿಕ್ಕಿ, ಚಕ್ರದಡಿ ಸಿಲುಕಿದ ಚಾಲಕನನ್ನು 500 ಮೀಟರ್ ಎಳೆದೊಯ್ದ ಟ್ರಕ್, ಸ್ಥಳದಲ್ಲೇ ಸಾವು

ಟ್ರಕ್​ ಒಂದು ಮರಳು ತುಂಬಿದ್ದ ಟ್ರ್ಯಾಕ್ಟರ್​ಗೆ ಹಿಂದಿನಿಂದ ಡಿಕ್ಕಿ ಹೊಡೆದು, ಚಾಲಕ ಮೃತಪಟ್ಟಿರುವ ಘಟನೆ ಪಂಜಾಬ್​ನಲ್ಲಿ ನಡೆದಿದೆ. ಕಲ್ಲು ತುಂಬಿದ್ದ ಟ್ರಕ್​ ಒಂದು ಮರಳು ತುಂಬಿದ್ದ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್​ ಚಾಲಕ ಕೆಳಗೆ ಬಿದ್ದಿದ್ದಾರೆ, ಅಷ್ಟಾದರೂ ಗಾಡಿ ನಿಲ್ಲಿಸದ ಟ್ರಕ್ ಚಾಲಕ ಟ್ರ್ಯಾಕ್ಟರ್​ ಚಾಲಕನ ಮೇಲೆ ಟ್ರಕ್​ ಹತ್ತಿಸಿದ್ದಾನೆ. ಚಕ್ರದಲ್ಲಿ ಸಿಲುಕಿದ್ದ ಚಾಲಕನನ್ನು 500 ಮೀಟರ್​ನಷ್ಟು ದೂರ ಎಳೆದೊಯ್ಯಲಾಗಿದೆ. ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟ್ರ್ಯಾಕ್ಟರ್​ಗೆ ಟ್ರಕ್ ಡಿಕ್ಕಿ, ಚಕ್ರದಡಿ ಸಿಲುಕಿದ ಚಾಲಕನನ್ನು 500 ಮೀಟರ್ ಎಳೆದೊಯ್ದ ಟ್ರಕ್, ಸ್ಥಳದಲ್ಲೇ ಸಾವು
ಸಾವು
ನಯನಾ ರಾಜೀವ್
|

Updated on: Aug 27, 2023 | 8:20 AM

Share

ಟ್ರಕ್​ ಒಂದು ಮರಳು ತುಂಬಿದ್ದ ಟ್ರ್ಯಾಕ್ಟರ್​ಗೆ ಹಿಂದಿನಿಂದ ಡಿಕ್ಕಿ ಹೊಡೆದು, ಚಾಲಕ ಮೃತಪಟ್ಟಿರುವ ಘಟನೆ ಪಂಜಾಬ್​ನಲ್ಲಿ ನಡೆದಿದೆ. ಕಲ್ಲು ತುಂಬಿದ್ದ ಟ್ರಕ್​ ಒಂದು ಮರಳು ತುಂಬಿದ್ದ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್​ ಚಾಲಕ ಕೆಳಗೆ ಬಿದ್ದಿದ್ದಾರೆ, ಅಷ್ಟಾದರೂ ಗಾಡಿ ನಿಲ್ಲಿಸದ ಟ್ರಕ್ ಚಾಲಕ ಟ್ರ್ಯಾಕ್ಟರ್​ ಚಾಲಕನ ಮೇಲೆ ಟ್ರಕ್​ ಹತ್ತಿಸಿದ್ದಾನೆ. ಚಕ್ರದಲ್ಲಿ ಸಿಲುಕಿದ್ದ ಚಾಲಕನನ್ನು 500 ಮೀಟರ್​ನಷ್ಟು ದೂರ ಎಳೆದೊಯ್ಯಲಾಗಿದೆ. ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೋಶಿಯಾರ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಮೇಜರ್ ಸಿಂಗ್ ಮಾತನಾಡಿ, ಶಹಪುರ್ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಇದರಿಂದ ಆಕ್ರೋಶಗೊಂಡ ಸಂಬಂಧಿಕರು ಮತ್ತು ಸ್ಥಳೀಯರು ಟ್ರಕ್ ಚಾಲಕನನ್ನು ಬಂಧಿಸುವಂತೆ ಒತ್ತಾಯಿಸಿ ಸುಮಾರು ಆರು ಗಂಟೆಗಳ ಕಾಲ ರಸ್ತೆ ತಡೆ ನಡೆಸಿದರು.

ಸ್ಟೋನ್ ಕ್ರಷರ್ ತುಂಬಿದ್ದ ಟ್ರಕ್ ಹಿಂದಿನಿಂದ ಸಂತ್ರಸ್ತ ಸುಖದೇವ್ ಸಿಂಗ್ (21) ಚಾಲನೆ ಮಾಡುತ್ತಿದ್ದ ಮರಳು ತುಂಬಿದ ಟ್ರ್ಯಾಕ್ಟರ್ ಟ್ರೈಲರ್ ಗೆ ಡಿಕ್ಕಿ ಹೊಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸಿಂಗ್ ಹೇಗೋ ಟ್ರಕ್​ನ ಚಕ್ರಕ್ಕೆ ಸಿಲುಕಿಕೊಂಡರು, ಅವರನ್ನು 500 ಮೀಟರ್​ನಷ್ಟು ದೂರ ಎಳೆದೊಯ್ಯಲಾಗಿದೆ.

ಮತ್ತಷ್ಟು ಓದಿ: ಕುಡಿದ ಅಮಲಿನಲ್ಲಿ ಹೆದ್ದಾರಿಯಲ್ಲಿ ವೇಗವಾಗಿ ಕಾರು ಓಡಿಸಿದ ಪೊಲೀಸ್​​ ಇನ್ಸ್​​ಪೆಕ್ಟರ್: ಆಟೋಗೆ ಡಿಕ್ಕಿ, ಮೂವರಿಗೆ ಗಾಯ

ಚಾಲಕನ ದೇಹವು ತುಂಡು ತುಂಡಾಗಿತ್ತು, ಬಳಿಕ ಟ್ರಕ್ ಚಾಲಕ ಟ್ರಕ್ ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ. ಇದರಿಂದ ಕೋಪಗೊಂಡ ಸ್ಥಳೀಯರು ಸುಖದೇವ್ ತಂದೆ ಜಸ್ವಿಂದರ್ ಸಿಂಗ್ ನೇತೃತ್ವದಲ್ಲಿ ಮೃತದೇಹದೊಂದಿಗೆ ಪ್ರತಿಭಟನೆ ನಡೆಸಿದ್ದು, ಆರು ಗಂಟೆಗಳ ಕಾಲ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.

ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ನಂತರ ಎಸ್ಪಿ ಮನೋಜ್ ಸಿಂಗ್ ಸಮಾಧಾನಪಡಿಸಿದ ನಂತರ ಧರಣಿ ಹಿಂಪಡೆದರು. ಆರೋಪಿ ಚಾಲಕನನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಎಸ್ಪಿ ಭರವಸೆ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ