AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್​ಗೆ ಟ್ರಕ್ ಡಿಕ್ಕಿ, ಚಕ್ರದಡಿ ಸಿಲುಕಿದ ಚಾಲಕನನ್ನು 500 ಮೀಟರ್ ಎಳೆದೊಯ್ದ ಟ್ರಕ್, ಸ್ಥಳದಲ್ಲೇ ಸಾವು

ಟ್ರಕ್​ ಒಂದು ಮರಳು ತುಂಬಿದ್ದ ಟ್ರ್ಯಾಕ್ಟರ್​ಗೆ ಹಿಂದಿನಿಂದ ಡಿಕ್ಕಿ ಹೊಡೆದು, ಚಾಲಕ ಮೃತಪಟ್ಟಿರುವ ಘಟನೆ ಪಂಜಾಬ್​ನಲ್ಲಿ ನಡೆದಿದೆ. ಕಲ್ಲು ತುಂಬಿದ್ದ ಟ್ರಕ್​ ಒಂದು ಮರಳು ತುಂಬಿದ್ದ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್​ ಚಾಲಕ ಕೆಳಗೆ ಬಿದ್ದಿದ್ದಾರೆ, ಅಷ್ಟಾದರೂ ಗಾಡಿ ನಿಲ್ಲಿಸದ ಟ್ರಕ್ ಚಾಲಕ ಟ್ರ್ಯಾಕ್ಟರ್​ ಚಾಲಕನ ಮೇಲೆ ಟ್ರಕ್​ ಹತ್ತಿಸಿದ್ದಾನೆ. ಚಕ್ರದಲ್ಲಿ ಸಿಲುಕಿದ್ದ ಚಾಲಕನನ್ನು 500 ಮೀಟರ್​ನಷ್ಟು ದೂರ ಎಳೆದೊಯ್ಯಲಾಗಿದೆ. ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟ್ರ್ಯಾಕ್ಟರ್​ಗೆ ಟ್ರಕ್ ಡಿಕ್ಕಿ, ಚಕ್ರದಡಿ ಸಿಲುಕಿದ ಚಾಲಕನನ್ನು 500 ಮೀಟರ್ ಎಳೆದೊಯ್ದ ಟ್ರಕ್, ಸ್ಥಳದಲ್ಲೇ ಸಾವು
ಸಾವು
ನಯನಾ ರಾಜೀವ್
|

Updated on: Aug 27, 2023 | 8:20 AM

Share

ಟ್ರಕ್​ ಒಂದು ಮರಳು ತುಂಬಿದ್ದ ಟ್ರ್ಯಾಕ್ಟರ್​ಗೆ ಹಿಂದಿನಿಂದ ಡಿಕ್ಕಿ ಹೊಡೆದು, ಚಾಲಕ ಮೃತಪಟ್ಟಿರುವ ಘಟನೆ ಪಂಜಾಬ್​ನಲ್ಲಿ ನಡೆದಿದೆ. ಕಲ್ಲು ತುಂಬಿದ್ದ ಟ್ರಕ್​ ಒಂದು ಮರಳು ತುಂಬಿದ್ದ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್​ ಚಾಲಕ ಕೆಳಗೆ ಬಿದ್ದಿದ್ದಾರೆ, ಅಷ್ಟಾದರೂ ಗಾಡಿ ನಿಲ್ಲಿಸದ ಟ್ರಕ್ ಚಾಲಕ ಟ್ರ್ಯಾಕ್ಟರ್​ ಚಾಲಕನ ಮೇಲೆ ಟ್ರಕ್​ ಹತ್ತಿಸಿದ್ದಾನೆ. ಚಕ್ರದಲ್ಲಿ ಸಿಲುಕಿದ್ದ ಚಾಲಕನನ್ನು 500 ಮೀಟರ್​ನಷ್ಟು ದೂರ ಎಳೆದೊಯ್ಯಲಾಗಿದೆ. ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೋಶಿಯಾರ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಮೇಜರ್ ಸಿಂಗ್ ಮಾತನಾಡಿ, ಶಹಪುರ್ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಇದರಿಂದ ಆಕ್ರೋಶಗೊಂಡ ಸಂಬಂಧಿಕರು ಮತ್ತು ಸ್ಥಳೀಯರು ಟ್ರಕ್ ಚಾಲಕನನ್ನು ಬಂಧಿಸುವಂತೆ ಒತ್ತಾಯಿಸಿ ಸುಮಾರು ಆರು ಗಂಟೆಗಳ ಕಾಲ ರಸ್ತೆ ತಡೆ ನಡೆಸಿದರು.

ಸ್ಟೋನ್ ಕ್ರಷರ್ ತುಂಬಿದ್ದ ಟ್ರಕ್ ಹಿಂದಿನಿಂದ ಸಂತ್ರಸ್ತ ಸುಖದೇವ್ ಸಿಂಗ್ (21) ಚಾಲನೆ ಮಾಡುತ್ತಿದ್ದ ಮರಳು ತುಂಬಿದ ಟ್ರ್ಯಾಕ್ಟರ್ ಟ್ರೈಲರ್ ಗೆ ಡಿಕ್ಕಿ ಹೊಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸಿಂಗ್ ಹೇಗೋ ಟ್ರಕ್​ನ ಚಕ್ರಕ್ಕೆ ಸಿಲುಕಿಕೊಂಡರು, ಅವರನ್ನು 500 ಮೀಟರ್​ನಷ್ಟು ದೂರ ಎಳೆದೊಯ್ಯಲಾಗಿದೆ.

ಮತ್ತಷ್ಟು ಓದಿ: ಕುಡಿದ ಅಮಲಿನಲ್ಲಿ ಹೆದ್ದಾರಿಯಲ್ಲಿ ವೇಗವಾಗಿ ಕಾರು ಓಡಿಸಿದ ಪೊಲೀಸ್​​ ಇನ್ಸ್​​ಪೆಕ್ಟರ್: ಆಟೋಗೆ ಡಿಕ್ಕಿ, ಮೂವರಿಗೆ ಗಾಯ

ಚಾಲಕನ ದೇಹವು ತುಂಡು ತುಂಡಾಗಿತ್ತು, ಬಳಿಕ ಟ್ರಕ್ ಚಾಲಕ ಟ್ರಕ್ ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ. ಇದರಿಂದ ಕೋಪಗೊಂಡ ಸ್ಥಳೀಯರು ಸುಖದೇವ್ ತಂದೆ ಜಸ್ವಿಂದರ್ ಸಿಂಗ್ ನೇತೃತ್ವದಲ್ಲಿ ಮೃತದೇಹದೊಂದಿಗೆ ಪ್ರತಿಭಟನೆ ನಡೆಸಿದ್ದು, ಆರು ಗಂಟೆಗಳ ಕಾಲ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.

ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ನಂತರ ಎಸ್ಪಿ ಮನೋಜ್ ಸಿಂಗ್ ಸಮಾಧಾನಪಡಿಸಿದ ನಂತರ ಧರಣಿ ಹಿಂಪಡೆದರು. ಆರೋಪಿ ಚಾಲಕನನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಎಸ್ಪಿ ಭರವಸೆ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ