ರಾಜ್ಯದಲ್ಲಿ ಗಾಂಜಾ ಮಾರುತ್ತಿದ್ದ ಅಂತರ್ ರಾಜ್ಯ ಆರೋಪಿ ಅರೆಸ್ಟ್​

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನೇ ದಿನೇ ಮಾದಕವಸ್ತುಗಳ ಹಾವಳಿ ಹೆಚ್ಚಾಗ್ತಿದೆ. ರಾಜ್ಯದಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಅಂತರ್ ರಾಜ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ಕಿರದ್ ಮಿಶಾಲ್(35) ಬಂಧಿತ ಆರೋಪಿ. ಆರೋಪಿ ಮಿಶಾಲ್ ರೈಲಿನಲ್ಲಿ ಲಗ್ಗೇಜ್ ಟ್ರಾವೆಲ್ ಬ್ಯಾಗ್ ಮುಖಾಂತರ ಕೆಜಿ ಗಟ್ಟಲೆ ಗಾಂಜಾ ತರುತ್ತಿದ್ದ. ನಿರಂತರವಾಗಿ ಕಾಲೇಜು ವಿದ್ಯಾರ್ಥಿಗಳು ಹಾಗು ಯುವಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಅಲ್ಲದೆ, ಕೆಲವು ಪ್ರತಿಷ್ಠಿತ ಏರಿಯಾಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಈ ಬಗ್ಗೆ […]

ರಾಜ್ಯದಲ್ಲಿ ಗಾಂಜಾ ಮಾರುತ್ತಿದ್ದ ಅಂತರ್ ರಾಜ್ಯ ಆರೋಪಿ ಅರೆಸ್ಟ್​
ಸಾಧು ಶ್ರೀನಾಥ್​

Updated on: Dec 16, 2019 | 1:42 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನೇ ದಿನೇ ಮಾದಕವಸ್ತುಗಳ ಹಾವಳಿ ಹೆಚ್ಚಾಗ್ತಿದೆ. ರಾಜ್ಯದಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಅಂತರ್ ರಾಜ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ಕಿರದ್ ಮಿಶಾಲ್(35) ಬಂಧಿತ ಆರೋಪಿ.

ಆರೋಪಿ ಮಿಶಾಲ್ ರೈಲಿನಲ್ಲಿ ಲಗ್ಗೇಜ್ ಟ್ರಾವೆಲ್ ಬ್ಯಾಗ್ ಮುಖಾಂತರ ಕೆಜಿ ಗಟ್ಟಲೆ ಗಾಂಜಾ ತರುತ್ತಿದ್ದ. ನಿರಂತರವಾಗಿ ಕಾಲೇಜು ವಿದ್ಯಾರ್ಥಿಗಳು ಹಾಗು ಯುವಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಅಲ್ಲದೆ, ಕೆಲವು ಪ್ರತಿಷ್ಠಿತ ಏರಿಯಾಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಾರತ್ ಹಳ್ಳಿ ಪೊಲೀಸರು, ಆರೋಪಿಯನ್ನು ಬಂಧಿಸಿ 5 ಲಕ್ಷ ಮೌಲ್ಯದ 15 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us