ಮದುವೆಯಾಗುವುದಾಗಿ ನಂಬಿಸಿ ₹ 28 ಲಕ್ಷ ವಂಚಿಸಿದ್ದ ಆರೋಪಿ ಅರೆಸ್ಟ್​

ಧಾರವಾಡ: ಮದುವೆಯಾಗುವುದಾಗಿ ನಂಬಿಸಿ ಯುವತಿ ಕುಟುಂಬಕ್ಕೆ 28 ಲಕ್ಷ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಗಳಿಗೆ ವರ ಹುಡುಕಲು ಮಾಸ ಪತ್ರಿಕೆಯೊಂದರಲ್ಲಿ ಹಳೇ ಹುಬ್ಬಳ್ಳಿಯ ನಿವಾಸಿ ಜಾನಕಿಬಾಯಿ ಜಾಹೀರಾತು ನೀಡಿದ್ದರು. ಜಾಹೀರಾತು ನೋಡಿ ಮೈಸೂರು ಮೂಲದ ಪುಟ್ಟಯ್ಯ ಎಂಬಾತ ಮದುವೆಯಾಗುವುದಾಗಿ ಹೇಳಿದ್ದಾನೆ. ತಾನು ಕೆಪಿಟಿಸಿಎಲ್ ಇಂಜಿನಿಯರ್ ಎಂದು ನಂಬಿಸಿ, ಹುಬ್ಬಳ್ಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಹಣಕ್ಕೆ ಬೇಡಿಕೆಯಿಟ್ಟಿದ್ದಾನೆ. 28 ಲಕ್ಷ ಹಣ ಪಡೆದ ಆರೋಪಿ ನಂತರ ಪೋನ್ ಸ್ವಿಚ್  ಆಫ್ ಮಾಡಿಕೊಂಡಿದ್ದಾನೆ. ಈ ಕುರಿತು […]

ಮದುವೆಯಾಗುವುದಾಗಿ ನಂಬಿಸಿ ₹ 28 ಲಕ್ಷ ವಂಚಿಸಿದ್ದ ಆರೋಪಿ ಅರೆಸ್ಟ್​
ಸಾಧು ಶ್ರೀನಾಥ್​

Updated on: Nov 30, 2019 | 11:44 AM

ಧಾರವಾಡ: ಮದುವೆಯಾಗುವುದಾಗಿ ನಂಬಿಸಿ ಯುವತಿ ಕುಟುಂಬಕ್ಕೆ 28 ಲಕ್ಷ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮಗಳಿಗೆ ವರ ಹುಡುಕಲು ಮಾಸ ಪತ್ರಿಕೆಯೊಂದರಲ್ಲಿ ಹಳೇ ಹುಬ್ಬಳ್ಳಿಯ ನಿವಾಸಿ ಜಾನಕಿಬಾಯಿ ಜಾಹೀರಾತು ನೀಡಿದ್ದರು. ಜಾಹೀರಾತು ನೋಡಿ ಮೈಸೂರು ಮೂಲದ ಪುಟ್ಟಯ್ಯ ಎಂಬಾತ ಮದುವೆಯಾಗುವುದಾಗಿ ಹೇಳಿದ್ದಾನೆ. ತಾನು ಕೆಪಿಟಿಸಿಎಲ್ ಇಂಜಿನಿಯರ್ ಎಂದು ನಂಬಿಸಿ, ಹುಬ್ಬಳ್ಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಹಣಕ್ಕೆ ಬೇಡಿಕೆಯಿಟ್ಟಿದ್ದಾನೆ.

28 ಲಕ್ಷ ಹಣ ಪಡೆದ ಆರೋಪಿ ನಂತರ ಪೋನ್ ಸ್ವಿಚ್  ಆಫ್ ಮಾಡಿಕೊಂಡಿದ್ದಾನೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಯುವತಿ ತಾಯಿ ಜಾನಕಿ ದೂರು ನೀಡಿದ್ದರು. ಸದ್ಯ ವಂಚಕನನ್ನ ಬಂಧಿಸಿರೋ ಹಳೇ ಹುಬ್ಬಳ್ಳಿ ಪೊಲೀಸರು, ಆರೋಪಿಯಿಂದ 18 ಲಕ್ಷ ರೂ. ಜಪ್ತಿ ಮಾಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us