AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur: ಹೆಂಡತಿ ಮಕ್ಕಳಿದ್ದರೂ ಪಕ್ಕದ ಮನೆಯಾಕೆ ಜೊತೆ ಮದುವೆಗೆ ಪ್ಲಾನ್, ಪ್ರಶ್ನಿಸಿದ ಯುವತಿಯ ತಾಯಿಗೆ ಚಾಕು ಇರಿತ

ತನಗೆ ಹೆಂಡತಿ ಮಕ್ಕಳಿದ್ದರೂ ಈತನ ಪಕ್ಕದ ಮನೆಯ ಕಾಲೇಜು ಯುವತಿಯನ್ನು ಪುಸಲಾಯಿಸಿ ಮದುವೆಯಾಗಲು ಪ್ಲಾನ್ ಮಾಡಿದ್ದ. ಈ ವಿಚಾರ ತಿಳಿದು ಪ್ರಶ್ನಿಸಿದ ಯುವತಿಯ ತಾಯಿಗೆ ವಿವಾಹಿತ ಪುರುಷ ಚಾಕು ಇರಿದ ಘಟನೆ ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

Chikkaballapur: ಹೆಂಡತಿ ಮಕ್ಕಳಿದ್ದರೂ ಪಕ್ಕದ ಮನೆಯಾಕೆ ಜೊತೆ ಮದುವೆಗೆ ಪ್ಲಾನ್, ಪ್ರಶ್ನಿಸಿದ ಯುವತಿಯ ತಾಯಿಗೆ ಚಾಕು ಇರಿತ
ಚಿಕ್ಕಬಳ್ಳಾಪುರದಲ್ಲಿ ಮಹಿಳೆಗೆ ಚಾಕು ಇರಿದ ಆರೋಪಿ ಲಕ್ಷ್ಮೀನರಸಿಂಹಪ್ಪ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jul 24, 2023 | 8:32 PM

Share

ಚಿಕ್ಕಬಳ್ಳಾಪುರ, ಜುಲೈ 24: ತನಗೆ ಹೆಂಡತಿ ಮತ್ತು ಇಬ್ಬರು ಮಕ್ಕಳಿದ್ದರೂ ಈತನಿಗೆ ಪಕ್ಕದ ಮನೆಯ ಯುವತಿ ಮೇಲೆ ಕಣ್ಣು ಬಿದ್ದಿದೆ. ಅದರಂತೆ ಯುವತಿಯನ್ನು ಪುಸಲಾಯಿಸಿ ಮದುವೆಗೆ ಪ್ಲಾನ್ ಮಾಡಿಕೊಂಡಿದ್ದಾನೆ. ಈ ವಿಚಾರ ತಿಳಿದ ಯುವತಿಯ ತಾಯಿ ಬೈದು ಬುದ್ಧಿವಾದ ಹೇಳಿದ್ದಾರೆ. ಇದರಿಂದ ಕುಪಿತನಾದ ವಿವಾಹಿತ ಪುರುಷ, ಆಕೆಗೆ ಚಾಕು ಇರಿದಿದ್ದಾನೆ (knife stab). ಈ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಆದೆನ್ನಗಾರಹಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ.

ಆದೆನ್ನಗಾರಹಳ್ಳಿ ಗ್ರಾಮದ ಟಿಪ್ಪರ್ ಚಾಲಕ ಲಕ್ಷ್ಮೀನರಸಿಂಹಪ್ಪ (30) ವಿವಾಹಿತನಾಗಿದ್ದು, ಸಂಸಾರಕ್ಕೆ ಸಾಕ್ಷಿಯಾಗಿ ಇಬ್ಬರು ಮಕ್ಕಳಿದ್ದಾರೆ. ಆದರೂ ಎದುರು ಮನೆಯ 19 ವರ್ಷದ ಪದವಿ ವಿದ್ಯಾರ್ಥಿನಿಯ ಮೇಲೆ ಕಣ್ಣು ಹಾಕಿದ್ದಾನೆ. ಪ್ರೀತಿ ಪ್ರೇಮದ ಹೆಸರಿನಲ್ಲಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿದ್ದಾನೆ. ಹೆಂಡರು ಮಕ್ಕಳು ಇದ್ದರೂ ವಿದ್ಯಾರ್ಥಿನಿಗೆ ಚಿನ್ನ ರನ್ನ ಅಂತ ರಮಿಸಿ ಮದುವೆ ಮಾಡಿಕೊಳ್ಳುವ ತಯಾರಿಯಲ್ಲಿದ್ದ.

ಇದನ್ನೂ ಓದಿ: ಪ್ರೀತಿಸಿ, ಗರ್ಭಿಣಿಯಾಗಿಸಿ ಕೈಕೊಟ್ಟ ಮಹಾಶಯ: ವರನಿಗೆ ಥಳಿಸಿ ಶಿಡ್ಲಘಟ್ಟದ ಪ್ರವಾಸಿ ಮಂದಿರದಲ್ಲಿ ಸಿನಿಮೀಯ ರೀತಿಯಲ್ಲಿ ಮದುವೆ!

ಈ ವಿಚಾರ ತಿಳಿದ ಯುವತಿಯ ಪೋಷಕರು ಲಕ್ಷ್ಮೀನರಸಿಂಹಪ್ಪಗೆ ಬೈಯ್ದು ಬುದ್ಧಿವಾದ ಹೇಳಿದ್ದಾರೆ. ಇದರಿಂದ ಕೆರಳಿದ ಲಕ್ಷ್ಮೀನರಸಿಂಹಪ್ಪ ಯುವತಿಯ ಮನೆಗೆ ನುಗ್ಗಿ ಆಕೆಯ ತಾಯಿಗೆ ಚಾಕುವಿನಿಂದ ಇರಿದು ಕೊಲೆ ಯತ್ನ ಮಾಡಿದ್ದಾನೆ.

ಪಕ್ರರಣ ಸಂಬಂಧ ಗಾಯಾಳು ಮಹಿಳೆ ನೀಡಿದ ದೂರಿನ ಮೇರೆಗೆ ಪೆರೇಸಂದ್ರ ಠಾಣೆ ಪೊಲೀಸರು ದೂರು ದಾಖಲಿಸಿ ಆರೋಪಿ ಲಕ್ಷ್ಮೀನರಸಿಂಹಪ್ಪನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇತ್ತ ಯುವತಿಯ ತಾಯಿ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:32 pm, Mon, 24 July 23

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!