AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಯಾಗಿದ್ದ ಆಂಟಿ ಜತೆ ಲವ್ವಿಡವ್ವಿ: ಕರೆ ಸ್ವೀಕರಿಸಲಿಲ್ಲ ಎಂದು ಮನೆಗೆ ಹೋದ ಯುವಕ ಆಸ್ಪತ್ರೆ ಸೇರಿದ

ಬೆಳಗಾವಿಯ ಗೋಕಾಕ್ ಪಟ್ಟಣದ ನಿವಾಸಿ ಬೆಂಗಳೂರಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ, ಅದೇ ಗೋಕಾಕ್​ನಲ್ಲಿ ಮದುವೆಯಾಗಿದ್ದ ಆಂಟಿ ಜೊತೆ ಲವ್ವಿಡವ್ವಿ ಇಟ್ಟಿಕೊಂಡಿದ್ದು, ಆಕೆ ಫೋನ್ ರಿಸೀವ್ ಮಾಡಿಲ್ಲವೆಂದು ನೇರವಾಗಿ ಮನೆಗೆ ಬೆಂಗಳೂರಿನಿಂದ ಗೋಕಾಕ್​ಗೆ ಬಂದಿದ್ದಾನೆ. ಹೀಗೆ ಬಂದವನು ಈಗ ಬಿಮ್ಸ್ ಐಸಿಯುನಲ್ಲಿ ಒದ್ದಾಡುತ್ತಿದ್ದಾನೆ. ಅಷ್ಟಕ್ಕೂ ಈತನ ಈ ಗತಿಗೆ ಕಾರಣ ಅಂಟಿ ಲವ್ ಸ್ಟೋರಿ.

ಮದ್ವೆಯಾಗಿದ್ದ ಆಂಟಿ ಜತೆ ಲವ್ವಿಡವ್ವಿ: ಕರೆ ಸ್ವೀಕರಿಸಲಿಲ್ಲ ಎಂದು ಮನೆಗೆ ಹೋದ ಯುವಕ ಆಸ್ಪತ್ರೆ ಸೇರಿದ
ಪ್ರಾತಿನಿಧಿಕ ಚಿತ್ರImage Credit source: Vecteezy
ಸಹದೇವ್​ ಮಾನೆ
| Edited By: |

Updated on: Dec 29, 2024 | 10:26 AM

Share

ಬೆಳಗಾವಿ, (ಡಿಸೆಂಬರ್ 29): ಮದುವೆಯಾಗಿದ್ದ ಆಂಟಿ ಜೊತೆ ಲವ್ವಿಡವ್ವಿ ಇಟ್ಟುಕೊಂಡಿದ್ದ ಯುವಕ ಇದೀಗ ಆಸ್ಪತ್ರೆ ಸೇರಿದ್ದಾನೆ. ಹೌದು… ಗೋಕಾಕ್​ನ ಸಂಗಮೇಶ್ವರದ ನಿವಾಸಿ ಆನಂದ್​, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಆನಂದ್, ಗೋಕಾಕ್​ನ ಆಂಟಿ ಜೊತೆ ಲವ್ವಿಡವ್ವಿ ಇಟ್ಟುಕೊಂಡಿದ್ದು, ಬಳಿಕ ಆಕೆ ಫೋನ್ ಕರೆ ಸ್ವೀಕರಿಸಿಲ್ಲವೆಂದು ಮನೆಗೆ ಬಂದಿದ್ದಾನೆ. ಆಗ ವೇಳೆ ಮಾತಿನ ಚಕಮಕಿಯಾಗಿ ಆಂಟಿಯೇ ಯುವಕನಿಗೆ ಚಾಕುವಿನಿಂದ ಇರಿದ್ದಿದ್ದಾಳೆ. ಇದರಿಂದ ಗಾಯಗೊಂಡಿರುವ ಯುವಕ ಆನಂದ್ ಬೆಳಗಾವಿಯ ಬಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮಹಿಳೆ ಹೆಸರು ಶೋಭಾ. ಗೋಕಾಕ್​ನ ಸಂಗಮೇಶ್ವರದ ನಿವಾಸಿ. ಈ ಹಿಂದೆ ಓರ್ವನನ್ನ ಮದ್ವೆಯಾಗಿ ಆತನಿಂದ ದೂರಾಗಿದ್ದ ಶೋಭ, ಮಂಜುನಾಥ್​ ಎಂಬಾತನನ್ನ 2ನೇ ಮದ್ವೆ ಆಗಿದ್ದಳು. ಆದರೂ ಒಂದೂವರೆ ವರ್ಷದಿಂದ ಈ ಆನಂದ್​ ಜತೆ ಲವ್ವಿಡವ್ವಿ ಆಟವಾಡುತ್ತಿದ್ದಳು. 15 ದಿನಗಳಿಂದ ಆನಂದ್​ನ ಫೋನ್ ಸ್ವೀಕರಿಸುತ್ತಿರಲಿಲ್ವಂತೆ. ಇದರಿಂದ ಸಿಟ್ಟಿಗೆದ್ದ ಆನಂದ್, ಮೊನ್ನೆ ನೇರವಾಗಿ ಗೋಕಾಕ್​​ನಲ್ಲಿದ್ದ ಶೋಭಾ ಮನೆಗೆ ಹೋಗಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಸ್ವಾಮಿ ಆತ್ಮಹತ್ಯೆ

ಆಗ ಗಂಡನ ಜತೆ ಶೋಭಳನ್ನ ನೋಡಿ ಕೆರಳಿದ ಆನಂದ್​​​ ಚಾಕು ತೆಗೆದು ಆಕೆ ಕೈ ಮತ್ತು ಹಣೆಗೆ ಇರಿದಿದ್ದಾನೆ. ಇಷ್ಟಾಗ್ತಿದ್ದಂತೆ ಶೋಭಾ ಮತ್ತು ಆಕೆ ಪತಿ ಅವನ ಕೈಯಿಂದ ಚಾಕು ಕಸಿದುಕೊಂಡು ಆನಂದ್​​​​ನ ತಲೆ, ಹೊಟ್ಟೆ, ಎದೆಗೆ ಇರಿದಿದ್ದಾರೆ.

ಆನಂದ್, ಶೋಭಾ ಇಬ್ಬರಿಗೂ ಗಾಯವಾಗಿದ್ದು, ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಗ್ಗೆ ಗೋಕಾಕ್ ನಗರ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಿಸಿದ್ದಾರೆ. ಏನೇಹೇಳಿ, ಮದುವೆಯಾಗಿ ನೆಮ್ಮದಿಯಿಂದ ಇರಬೇಕಿದ್ದ ಮಹಿಳೆ ಈಗ ಯುವಕನ ನೆಮ್ಮದಿಯನ್ನೂ ಕಸಿದು ಆಸ್ಪತ್ರೆ ಸೇರುವಂತೆ ಮಾಡಿದ್ದಾಳೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ