AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಯಾಗಿದ್ದ ಆಂಟಿ ಜತೆ ಲವ್ವಿಡವ್ವಿ: ಕರೆ ಸ್ವೀಕರಿಸಲಿಲ್ಲ ಎಂದು ಮನೆಗೆ ಹೋದ ಯುವಕ ಆಸ್ಪತ್ರೆ ಸೇರಿದ

ಬೆಳಗಾವಿಯ ಗೋಕಾಕ್ ಪಟ್ಟಣದ ನಿವಾಸಿ ಬೆಂಗಳೂರಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ, ಅದೇ ಗೋಕಾಕ್​ನಲ್ಲಿ ಮದುವೆಯಾಗಿದ್ದ ಆಂಟಿ ಜೊತೆ ಲವ್ವಿಡವ್ವಿ ಇಟ್ಟಿಕೊಂಡಿದ್ದು, ಆಕೆ ಫೋನ್ ರಿಸೀವ್ ಮಾಡಿಲ್ಲವೆಂದು ನೇರವಾಗಿ ಮನೆಗೆ ಬೆಂಗಳೂರಿನಿಂದ ಗೋಕಾಕ್​ಗೆ ಬಂದಿದ್ದಾನೆ. ಹೀಗೆ ಬಂದವನು ಈಗ ಬಿಮ್ಸ್ ಐಸಿಯುನಲ್ಲಿ ಒದ್ದಾಡುತ್ತಿದ್ದಾನೆ. ಅಷ್ಟಕ್ಕೂ ಈತನ ಈ ಗತಿಗೆ ಕಾರಣ ಅಂಟಿ ಲವ್ ಸ್ಟೋರಿ.

ಮದ್ವೆಯಾಗಿದ್ದ ಆಂಟಿ ಜತೆ ಲವ್ವಿಡವ್ವಿ: ಕರೆ ಸ್ವೀಕರಿಸಲಿಲ್ಲ ಎಂದು ಮನೆಗೆ ಹೋದ ಯುವಕ ಆಸ್ಪತ್ರೆ ಸೇರಿದ
ಪ್ರಾತಿನಿಧಿಕ ಚಿತ್ರImage Credit source: Vecteezy
Sahadev Mane
| Edited By: |

Updated on: Dec 29, 2024 | 10:26 AM

Share

ಬೆಳಗಾವಿ, (ಡಿಸೆಂಬರ್ 29): ಮದುವೆಯಾಗಿದ್ದ ಆಂಟಿ ಜೊತೆ ಲವ್ವಿಡವ್ವಿ ಇಟ್ಟುಕೊಂಡಿದ್ದ ಯುವಕ ಇದೀಗ ಆಸ್ಪತ್ರೆ ಸೇರಿದ್ದಾನೆ. ಹೌದು… ಗೋಕಾಕ್​ನ ಸಂಗಮೇಶ್ವರದ ನಿವಾಸಿ ಆನಂದ್​, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಆನಂದ್, ಗೋಕಾಕ್​ನ ಆಂಟಿ ಜೊತೆ ಲವ್ವಿಡವ್ವಿ ಇಟ್ಟುಕೊಂಡಿದ್ದು, ಬಳಿಕ ಆಕೆ ಫೋನ್ ಕರೆ ಸ್ವೀಕರಿಸಿಲ್ಲವೆಂದು ಮನೆಗೆ ಬಂದಿದ್ದಾನೆ. ಆಗ ವೇಳೆ ಮಾತಿನ ಚಕಮಕಿಯಾಗಿ ಆಂಟಿಯೇ ಯುವಕನಿಗೆ ಚಾಕುವಿನಿಂದ ಇರಿದ್ದಿದ್ದಾಳೆ. ಇದರಿಂದ ಗಾಯಗೊಂಡಿರುವ ಯುವಕ ಆನಂದ್ ಬೆಳಗಾವಿಯ ಬಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮಹಿಳೆ ಹೆಸರು ಶೋಭಾ. ಗೋಕಾಕ್​ನ ಸಂಗಮೇಶ್ವರದ ನಿವಾಸಿ. ಈ ಹಿಂದೆ ಓರ್ವನನ್ನ ಮದ್ವೆಯಾಗಿ ಆತನಿಂದ ದೂರಾಗಿದ್ದ ಶೋಭ, ಮಂಜುನಾಥ್​ ಎಂಬಾತನನ್ನ 2ನೇ ಮದ್ವೆ ಆಗಿದ್ದಳು. ಆದರೂ ಒಂದೂವರೆ ವರ್ಷದಿಂದ ಈ ಆನಂದ್​ ಜತೆ ಲವ್ವಿಡವ್ವಿ ಆಟವಾಡುತ್ತಿದ್ದಳು. 15 ದಿನಗಳಿಂದ ಆನಂದ್​ನ ಫೋನ್ ಸ್ವೀಕರಿಸುತ್ತಿರಲಿಲ್ವಂತೆ. ಇದರಿಂದ ಸಿಟ್ಟಿಗೆದ್ದ ಆನಂದ್, ಮೊನ್ನೆ ನೇರವಾಗಿ ಗೋಕಾಕ್​​ನಲ್ಲಿದ್ದ ಶೋಭಾ ಮನೆಗೆ ಹೋಗಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಸ್ವಾಮಿ ಆತ್ಮಹತ್ಯೆ

ಆಗ ಗಂಡನ ಜತೆ ಶೋಭಳನ್ನ ನೋಡಿ ಕೆರಳಿದ ಆನಂದ್​​​ ಚಾಕು ತೆಗೆದು ಆಕೆ ಕೈ ಮತ್ತು ಹಣೆಗೆ ಇರಿದಿದ್ದಾನೆ. ಇಷ್ಟಾಗ್ತಿದ್ದಂತೆ ಶೋಭಾ ಮತ್ತು ಆಕೆ ಪತಿ ಅವನ ಕೈಯಿಂದ ಚಾಕು ಕಸಿದುಕೊಂಡು ಆನಂದ್​​​​ನ ತಲೆ, ಹೊಟ್ಟೆ, ಎದೆಗೆ ಇರಿದಿದ್ದಾರೆ.

ಆನಂದ್, ಶೋಭಾ ಇಬ್ಬರಿಗೂ ಗಾಯವಾಗಿದ್ದು, ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಗ್ಗೆ ಗೋಕಾಕ್ ನಗರ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಿಸಿದ್ದಾರೆ. ಏನೇಹೇಳಿ, ಮದುವೆಯಾಗಿ ನೆಮ್ಮದಿಯಿಂದ ಇರಬೇಕಿದ್ದ ಮಹಿಳೆ ಈಗ ಯುವಕನ ನೆಮ್ಮದಿಯನ್ನೂ ಕಸಿದು ಆಸ್ಪತ್ರೆ ಸೇರುವಂತೆ ಮಾಡಿದ್ದಾಳೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​