AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಯಾಗಿದ್ದ ಆಂಟಿ ಜತೆ ಲವ್ವಿಡವ್ವಿ: ಕರೆ ಸ್ವೀಕರಿಸಲಿಲ್ಲ ಎಂದು ಮನೆಗೆ ಹೋದ ಯುವಕ ಆಸ್ಪತ್ರೆ ಸೇರಿದ

ಬೆಳಗಾವಿಯ ಗೋಕಾಕ್ ಪಟ್ಟಣದ ನಿವಾಸಿ ಬೆಂಗಳೂರಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ, ಅದೇ ಗೋಕಾಕ್​ನಲ್ಲಿ ಮದುವೆಯಾಗಿದ್ದ ಆಂಟಿ ಜೊತೆ ಲವ್ವಿಡವ್ವಿ ಇಟ್ಟಿಕೊಂಡಿದ್ದು, ಆಕೆ ಫೋನ್ ರಿಸೀವ್ ಮಾಡಿಲ್ಲವೆಂದು ನೇರವಾಗಿ ಮನೆಗೆ ಬೆಂಗಳೂರಿನಿಂದ ಗೋಕಾಕ್​ಗೆ ಬಂದಿದ್ದಾನೆ. ಹೀಗೆ ಬಂದವನು ಈಗ ಬಿಮ್ಸ್ ಐಸಿಯುನಲ್ಲಿ ಒದ್ದಾಡುತ್ತಿದ್ದಾನೆ. ಅಷ್ಟಕ್ಕೂ ಈತನ ಈ ಗತಿಗೆ ಕಾರಣ ಅಂಟಿ ಲವ್ ಸ್ಟೋರಿ.

ಮದ್ವೆಯಾಗಿದ್ದ ಆಂಟಿ ಜತೆ ಲವ್ವಿಡವ್ವಿ: ಕರೆ ಸ್ವೀಕರಿಸಲಿಲ್ಲ ಎಂದು ಮನೆಗೆ ಹೋದ ಯುವಕ ಆಸ್ಪತ್ರೆ ಸೇರಿದ
ಪ್ರಾತಿನಿಧಿಕ ಚಿತ್ರImage Credit source: Vecteezy
Sahadev Mane
| Edited By: |

Updated on: Dec 29, 2024 | 10:26 AM

Share

ಬೆಳಗಾವಿ, (ಡಿಸೆಂಬರ್ 29): ಮದುವೆಯಾಗಿದ್ದ ಆಂಟಿ ಜೊತೆ ಲವ್ವಿಡವ್ವಿ ಇಟ್ಟುಕೊಂಡಿದ್ದ ಯುವಕ ಇದೀಗ ಆಸ್ಪತ್ರೆ ಸೇರಿದ್ದಾನೆ. ಹೌದು… ಗೋಕಾಕ್​ನ ಸಂಗಮೇಶ್ವರದ ನಿವಾಸಿ ಆನಂದ್​, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಆನಂದ್, ಗೋಕಾಕ್​ನ ಆಂಟಿ ಜೊತೆ ಲವ್ವಿಡವ್ವಿ ಇಟ್ಟುಕೊಂಡಿದ್ದು, ಬಳಿಕ ಆಕೆ ಫೋನ್ ಕರೆ ಸ್ವೀಕರಿಸಿಲ್ಲವೆಂದು ಮನೆಗೆ ಬಂದಿದ್ದಾನೆ. ಆಗ ವೇಳೆ ಮಾತಿನ ಚಕಮಕಿಯಾಗಿ ಆಂಟಿಯೇ ಯುವಕನಿಗೆ ಚಾಕುವಿನಿಂದ ಇರಿದ್ದಿದ್ದಾಳೆ. ಇದರಿಂದ ಗಾಯಗೊಂಡಿರುವ ಯುವಕ ಆನಂದ್ ಬೆಳಗಾವಿಯ ಬಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮಹಿಳೆ ಹೆಸರು ಶೋಭಾ. ಗೋಕಾಕ್​ನ ಸಂಗಮೇಶ್ವರದ ನಿವಾಸಿ. ಈ ಹಿಂದೆ ಓರ್ವನನ್ನ ಮದ್ವೆಯಾಗಿ ಆತನಿಂದ ದೂರಾಗಿದ್ದ ಶೋಭ, ಮಂಜುನಾಥ್​ ಎಂಬಾತನನ್ನ 2ನೇ ಮದ್ವೆ ಆಗಿದ್ದಳು. ಆದರೂ ಒಂದೂವರೆ ವರ್ಷದಿಂದ ಈ ಆನಂದ್​ ಜತೆ ಲವ್ವಿಡವ್ವಿ ಆಟವಾಡುತ್ತಿದ್ದಳು. 15 ದಿನಗಳಿಂದ ಆನಂದ್​ನ ಫೋನ್ ಸ್ವೀಕರಿಸುತ್ತಿರಲಿಲ್ವಂತೆ. ಇದರಿಂದ ಸಿಟ್ಟಿಗೆದ್ದ ಆನಂದ್, ಮೊನ್ನೆ ನೇರವಾಗಿ ಗೋಕಾಕ್​​ನಲ್ಲಿದ್ದ ಶೋಭಾ ಮನೆಗೆ ಹೋಗಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಸ್ವಾಮಿ ಆತ್ಮಹತ್ಯೆ

ಆಗ ಗಂಡನ ಜತೆ ಶೋಭಳನ್ನ ನೋಡಿ ಕೆರಳಿದ ಆನಂದ್​​​ ಚಾಕು ತೆಗೆದು ಆಕೆ ಕೈ ಮತ್ತು ಹಣೆಗೆ ಇರಿದಿದ್ದಾನೆ. ಇಷ್ಟಾಗ್ತಿದ್ದಂತೆ ಶೋಭಾ ಮತ್ತು ಆಕೆ ಪತಿ ಅವನ ಕೈಯಿಂದ ಚಾಕು ಕಸಿದುಕೊಂಡು ಆನಂದ್​​​​ನ ತಲೆ, ಹೊಟ್ಟೆ, ಎದೆಗೆ ಇರಿದಿದ್ದಾರೆ.

ಆನಂದ್, ಶೋಭಾ ಇಬ್ಬರಿಗೂ ಗಾಯವಾಗಿದ್ದು, ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಗ್ಗೆ ಗೋಕಾಕ್ ನಗರ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಿಸಿದ್ದಾರೆ. ಏನೇಹೇಳಿ, ಮದುವೆಯಾಗಿ ನೆಮ್ಮದಿಯಿಂದ ಇರಬೇಕಿದ್ದ ಮಹಿಳೆ ಈಗ ಯುವಕನ ನೆಮ್ಮದಿಯನ್ನೂ ಕಸಿದು ಆಸ್ಪತ್ರೆ ಸೇರುವಂತೆ ಮಾಡಿದ್ದಾಳೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ