AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟಾಯಂ ಮೆಡಿಕಲ್ ಕಾಲೇಜಿನಲ್ಲಿ ಅಗ್ನಿ ಅವಘಡ; ಕಸದ ರಾಶಿಯಿಂದ ಹರಡಿದ ಬೆಂಕಿ

ಕೊಟ್ಟಾಯಂ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಹಿಂಬದಿಯಲ್ಲಿದ್ದ ತ್ಯಾಜ್ಯದ ರಾಶಿಗೆ ಕಾರ್ಮಿಕರು ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ.

ಕೊಟ್ಟಾಯಂ ಮೆಡಿಕಲ್ ಕಾಲೇಜಿನಲ್ಲಿ ಅಗ್ನಿ ಅವಘಡ; ಕಸದ ರಾಶಿಯಿಂದ ಹರಡಿದ ಬೆಂಕಿ
ಕೊಟ್ಟಾಯಂನಲ್ಲಿ ಬೆಂಕಿ ಅವಘಡ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 18, 2021 | 5:52 PM

ಕೊಟ್ಟಾಯಂ: ಕೇರಳದ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕೊಟ್ಟಾಯಂ ಮೆಡಿಕಲ್ ಕಾಲೇಜಿನ ಹಿಂಭಾಗದಲ್ಲಿದ್ದ ತ್ಯಾಜ್ಯಗಳ ರಾಶಿಗೆ ಬೆಂಕಿ ತಗುಲಿದ್ದು, ಇದರಿಂದ ಸುತ್ತಲೂ ದಟ್ಟ ಹೊಗೆ ಆವರಿಸಿ, ಆಗಸದಲ್ಲೆಲ್ಲ ಬೆಂಕಿಯ ಉಂಡೆಗಳು ಏಳುತ್ತಿದ್ದವು. ಈ ಘಟನೆಯಿಂದ ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೊಟ್ಟಾಯಂ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಹಿಂಬದಿಯಲ್ಲಿದ್ದ ತ್ಯಾಜ್ಯದ ರಾಶಿಗೆ ಕಾರ್ಮಿಕರು ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ.

ಇದರಿಂದ ಮೆಡಿಕಲ್ ಕಾಲೇಜಿಗೆ ಬೆಂಕಿ ಆವರಿಸಿದ್ದು, ಕಾಲೇಜಿನಿಂದ ದೊಡ್ಡ ಪ್ರಮಾಣದ ಹೊಗೆ ಹೊರಬರುತ್ತಿದ್ದರೂ ಸಹ ಕಾಲೇಜು ಮತ್ತು ಆಸ್ಪತ್ರೆಯ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಆ ಸ್ಥಳದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ.

ಕಾಲೇಜಿನ ಸಿಬ್ಬಂದಿ ತೆಗೆದುಕೊಂಡು ಹೋಗಿದ್ದ ಬ್ಯಾಗ್ ಸೇರಿದಂತೆ ಎಲ್ಲವೂ ಬೆಂಕಿಗೆ ಆಹುತಿಯಾಗಿದೆ. ಎರಡು ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಪ್ರಯತ್ನಿಸುತ್ತಿವೆ. ಇಂದು ಮಧ್ಯಾಹ್ನ 2.30ಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಈ ಸ್ಥಳದಲ್ಲಿ ತ್ಯಾಜ್ಯವನ್ನು ಮತ್ತು ಪ್ಲಾಸ್ಟಿಕ್ ಕವರ್​ಗಳನ್ನು ಸಂಗ್ರಹಿಸಿಡಲಾಗಿತ್ತು.

ಇದನ್ನೂ ಓದಿ: ವರನಿದ್ದ ಕುದುರೆ ಗಾಡಿಗೆ ಬೆಂಕಿ! ತಪ್ಪಿತು ಬಾರಿ ದೊಡ್ಡ ಅನಾಹುತ; ವಿಡಿಯೋ ವೈರಲ್

Pakistan Bomb Blast: ಪಾಕಿಸ್ತಾನದ ಕರಾಚಿಯಲ್ಲಿ ಕಾರ್ ಬಾಂಬ್ ಸ್ಫೋಟ; 10 ಜನ ಸಾವು, 13ಕ್ಕೂ ಹೆಚ್ಚು ಮಂದಿಗೆ ಗಾಯ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ