AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ

ಕಾಲೇಜಿನಲ್ಲಿಯೇ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ.

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ
ಮೃತ ವಿದ್ಯಾರ್ಥಿ
ಕಿರಣ್ ಹನುಮಂತ್​ ಮಾದಾರ್
|

Updated on: Apr 29, 2023 | 9:12 AM

Share

ಬೆಂಗಳೂರು: ಕಾಲೇಜಿನಲ್ಲಿಯೇ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ(Student). ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಸುಮಾರು ನಿನ್ನೆ ರಾತ್ರಿ 9.30 ಕ್ಕೆ ಈ ವೇಳೆ ಭಾಸ್ಕರ್​ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು, ಈ ಕುರಿತು ಪೊಲೀಸರು ಕಾಲೇಜು ಸಿಸಿಟಿವಿ ಪರಿಶೀಲಿಸುತ್ತಿದ್ದಾರೆ.

ಎಣ್ಣೆ ನಶೆಯಲ್ಲಿ ಕಿರಿಕ್: ಅತ್ತಿಗೆ, ಅಣ್ಣನ ಮಗನನ್ನ ಕತ್ತರಿಸಿ ಕೊಂದ ಬಾಮೈದ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲುಕಿನ ಹೆಗಡಹಳ್ಳಿ ಭೀಕರ ಡಬಲ್ ಮರ್ಡರ್​​ಗೆ ಸಾಕ್ಷಿಯಾಗಿದೆ. ಹೌದು ಏ.27 ರ ಮದ್ಯಾಹ್ನ ಶಾಂತಮ್ಮ ಹಾಗೂ ಯಶವಂತ್ ಎಂಬುವವರು ಗದ್ದೆಗೆ ನೀರು ಹಾಯಿಸಲು ತೆರಳಿದ್ದಾರೆ. ಇದೇ ವೇಳೆ ಗದ್ದೆ ಬಳಿ ಬಂದ ಮೈದುನ ಸತೀಶ್​ ಎಂಬಾತ ನೀರಿನ ವಿಚಾರಕ್ಕೆ ಕಿರಿಕ್ ತೆಗೆದಿದ್ದಾನೆ. ಶಾಂತಮ್ಮ ಹಾಗೂ ಸತೀಶ್​ನಿಗೂ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ, ರೊಚ್ಚಿಗೆದ್ದ ಸತೀಶ ಮಿಷನ್ ಮನೆಯಲ್ಲಿದ್ದ ಕುಡುಗೋಲು ತೆಗೆದುಕೊಂಡು ಬಂದು ಏಕಾಏಕಿ ದಾಳಿ ಮಾಡಿದ್ದಾನೆ. ಹೌದು ಶಾಂತಮ್ಮಳ ತಲೆ ಎದೆ ಕತ್ತು ಹಾಗೂ ಹೊಟ್ಟೆ ಭಾಗಕ್ಕೆ ಮನಸೋ ಇಚ್ಛೆ ಕೊಚ್ಚಿ ಹಾಕಿದ್ದಾನೆ. ಕುಡುಗೋಲಿನ ಏಟಿಗೆ ಶಾಂತಮ್ಮ ಅರಚಾಡುತ್ತ ಕೆಳಗೆ ಬಿದ್ದು ಪ್ರಾಣ ಬಿಟ್ಟಿದ್ದಾಳೆ. ಅಮ್ಮನ ಚೀರಾಟ, ಕೂಗಾಟ ಕೇಳಿದ ಮಗ ಯಶವಂತ್ ಓಡೋಡಿ ಬಂದು, ತಾಯಿ ಸಹಾಯಕ್ಕೆ ಮುಂದಾಗಿದ್ದಾನೆ. ಈ ವೇಳೆ ಯಶವಂತ್ ಮೇಲೆಯೂ ದಾಳಿ ನಡೆಸಿದ ಸತೀಶ ಆತನನ್ನು ಕೊಚ್ಚಿ ಕೊಂದಿದ್ದಾನೆ.

ಇದನ್ನೂ ಓದಿ:ಶಿವಮೊಗ್ಗ: ಹಿಂದೂ ಯುವಕನ ಬರ್ಬರ ಹತ್ಯೆ, ನಾಲ್ವರು ಹಂತಕರು ಅಂದರ್

ಇನ್ನು ಆರೋಪಿ ಕೊಲೆ ಮಾಡಿದ ಬಳಿಕ ಸಿದಾ ಮನೆಗೆ ಬಂದ ಸತೀಶ ಸ್ನಾನ ಮಾಡಿದ್ದಾನೆ. ಬಳಿಕ ತನ್ನ ಹೆಂಡತಿ ಮಕ್ಕಳನ್ನ ತವರು ಮನೆಗೆ ಕಳುಹಿಸಿದ್ದಾನೆ. ಆದಾದ ಬಳಿಕ ನೇರವಾಗಿ ಪಾಂಡವಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪಾಂಡವಪುರ ಪೊಲೀಸರು. ಆರೋಪಿಯನ್ನ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಅದೇನೆ ಹೇಳಿ ಕ್ಷುಲ್ಲಕ ಕಾರಣಕ್ಕೆ ಸ್ವಂತ ಅತ್ತಿಗೆ ಹಾಗೂ ಆಕೆಯ ಮಗನನ್ನ ಕೊಚ್ಚಿ ಕೊಂದಿದ್ದು ಮಾತ್ರ ನಿಜಕ್ಕೂ ದುರಂತವೇ ಸರಿ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು