Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಹುಟ್ಟುಹಬ್ಬದ ಮರುದಿನವೇ ವೈದ್ಯಕೀಯ ವಿದ್ಯಾರ್ಥಿ ಶವವಾಗಿ ಪತ್ತೆ, ಕೊಲೆ ಎಂದ ಪೋಷಕರು

ಕಾನ್ಪುರದ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಹುಟ್ಟುಹಬ್ಬದ ಮರುದಿನವೇ ಶವವಾಗಿ ಪತ್ತೆಯಾಗಿದ್ದಾನೆ. ಕಾಲೇಜಿನ ಹಾಸ್ಟೆಲ್‌ನ ನೆಲಮಾಳಿಗೆಯಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಪೊಲೀಸರ ಪ್ರಕಾರ, 24 ವರ್ಷದ ಯುವಕನಿಗೆ ಭಾರವಾದ ವಸ್ತುವಿನಿಂದ ತಿವಿದಿರುವ ಅನೇಕ ಗಾಯಗಳಾಗಿವೆ. ವಿದ್ಯಾರ್ಥಿಯ ದೇಹದ ಬಳಿ ಒಡೆದ ಮದ್ಯದ ಬಾಟಲಿ ಹಾಗೂ ಸಿಗರೇಟ್ ಬಾಕ್ಸ್ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಹುಟ್ಟುಹಬ್ಬದ ಮರುದಿನವೇ ವೈದ್ಯಕೀಯ ವಿದ್ಯಾರ್ಥಿ ಶವವಾಗಿ ಪತ್ತೆ, ಕೊಲೆ ಎಂದ ಪೋಷಕರು
ಸಾವುImage Credit source: India Today
Follow us
ನಯನಾ ರಾಜೀವ್
|

Updated on: Nov 28, 2023 | 8:47 AM

ಕಾನ್ಪುರದ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಹುಟ್ಟುಹಬ್ಬದ ಮರುದಿನವೇ ಶವವಾಗಿ ಪತ್ತೆಯಾಗಿದ್ದಾನೆ. ಕಾಲೇಜಿನ ಹಾಸ್ಟೆಲ್‌ನ ನೆಲಮಾಳಿಗೆಯಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಪೊಲೀಸರ ಪ್ರಕಾರ, 24 ವರ್ಷದ ಯುವಕನಿಗೆ ಭಾರವಾದ ವಸ್ತುವಿನಿಂದ ತಿವಿದಿರುವ ಅನೇಕ ಗಾಯಗಳಾಗಿವೆ. ವಿದ್ಯಾರ್ಥಿಯ ದೇಹದ ಬಳಿ ಒಡೆದ ಮದ್ಯದ ಬಾಟಲಿ ಹಾಗೂ ಸಿಗರೇಟ್ ಬಾಕ್ಸ್ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ, ನವೆಂಬರ್ 25 ಮತ್ತು 26 ರ ಮಧ್ಯರಾತ್ರಿಯಲ್ಲಿ ಹೊರಗಿನವರು ಹಾಸ್ಟೆಲ್‌ಗೆ ಪ್ರವೇಶಿಸಿದ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಪೊಲೀಸರು ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾಹಿಲ್, ರೂಮ್‌ಮೇಟ್ ಮತ್ತು ಇತರ ಹಾಸ್ಟೆಲ್ ನಿವಾಸಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ತನ್ನ ಮಗನನ್ನು ಕೊಲೆ ಮಾಡಲಾಗಿದೆ ಎಂದು ವಿದ್ಯಾರ್ಥಿಯ ತಂದೆ ಆರೋಪಿಸಿದ್ದಾರೆ. ಅವರು ಪೊಲೀಸರಿಗೆ ಕೊಲೆ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಹಾಸ್ಟೆಲ್‌ನಲ್ಲಿದ್ದ ಯಾರೋ ವಿದ್ಯಾರ್ಥಿಯನ್ನು ಕೊಂದಿದ್ದಾರೆ ಎಂದು ಅವರ ತಂದೆ ಆರೋಪಿಸಿದ್ದಾರೆ. ಮೂಲಗಳ ಪ್ರಕಾರ, ಹುಟ್ಟುಹಬ್ಬದ ಪಾರ್ಟಿಯಲ್ಲಿ ಕುಡಿದ ಅಮಲಿನಲ್ಲಿ ಆಕಸ್ಮಿಕವಾಗಿ ಬಾಲ್ಕನಿಯಿಂದ ಬಿದ್ದಿರುವ ಸಾಧ್ಯತೆಯ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ಆನೇಕಲ್​: ಒಂದೂವರೆ ಗುಂಟೆ ಜಾಗಕ್ಕಾಗಿ ಅಣ್ಣನ ಹತ್ಯೆಗೆ ಸುಪಾರಿ ನೀಡಿದ ಸಹೋದರು

ಸಾಹಿಲ್ ಎಂದಿಗೂ ಯಾರೊಂದಿಗೂ ಜಗಳವಾಡುತ್ತಿರಲಿಲ್ಲ ಆತ ತುಂಬಾ ಒಳ್ಳೆಯ ಸ್ವಭಾವದ ವ್ಯಕ್ತಿ, ರೋ ಅವನನ್ನು ಕೊಲೆ ಮಾಡಿದ್ದರೆಂದು ನಾವು ನಂಬುವುದಿಲ್ಲ ಎಂದು ಹಾಸ್ಟೆಲ್​ನಲ್ಲಿರುವ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ಬಾಲ್ಕನಿ ಗೋಡೆಯ ಎತ್ತರ ಸಾಕಷ್ಟು ಕಡಿಮೆ ಇರುವ ಕಾರಣ ಸಾಹಿಲ್ ಪಾನಮತ್ತರಾಗಿ ಬಾಲ್ಕನಿಯಿಂದ ಕೆಳಗೆ ಬಿದ್ದಿರುವ ಸಾಧ್ಯತೆ ಇದೆ ಎಂದು ಹಾಸ್ಟೆಲ್​ನ ಮತ್ತೊಬ್ಬರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ