AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಹೆಂಡತಿಯನ್ನು ಇರಿದು ಕೊಂದು, ಶವದ ಪಕ್ಕದಲ್ಲೇ ಪೊಲೀಸರಿಗೆ ಕಾದು ಕೂತ ಗಂಡ!

ಮೀರತ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ 7 ತಿಂಗಳ ಗರ್ಭಿಣಿ ಪತ್ನಿಯನ್ನು ಇರಿದು ಕೊಂದಿದ್ದಾನೆ. ನಂತರ ಪೊಲೀಸರಿಗೆ ಫೋನ್ ಮಾಡಿ, ಆಕೆಯ ಶವದ ಪಕ್ಕದಲ್ಲಿ ಪೊಲೀಸರು ಬರುವುದನ್ನೇ ಕಾದು ಕುಳಿತಿದ್ದಾನೆ. ಈ ವರ್ಷದ ಜನವರಿಯಲ್ಲಿ ಆ ದಂಪತಿ ಮದುವೆಯಾಗಿದ್ದರು. ಆದರೆ ಅವರ ಜೊತೆ ಜಗಳವಾಡಿದ್ದ ಪತ್ನಿ ಅಮ್ಹೇರಾ ಗ್ರಾಮದಲ್ಲಿರುವ ತನ್ನ ತಂಗಿ ಪಿಂಕಿಯ ಮನೆಗೆ ತೆರಳಿದ್ದರು. ಆಗ ಅಲ್ಲಿಗೆ ಹೋದ ಅವರು ಹೆಂಡತಿಯನ್ನು ಕೊಲೆ ಮಾಡಿದ್ದಾರೆ.

ಗರ್ಭಿಣಿ ಹೆಂಡತಿಯನ್ನು ಇರಿದು ಕೊಂದು, ಶವದ ಪಕ್ಕದಲ್ಲೇ ಪೊಲೀಸರಿಗೆ ಕಾದು ಕೂತ ಗಂಡ!
Sapna
ಸುಷ್ಮಾ ಚಕ್ರೆ
|

Updated on: Aug 02, 2025 | 8:06 PM

Share

ಮೀರತ್, ಆಗಸ್ಟ್ 2: ಉತ್ತರ ಪ್ರದೇಶದ (Uttar Pradesh) ಮೀರತ್‌ನಲ್ಲಿ ಆಘಾತಕಾರಿ ಘಟನೆ (Shocking News) ನಡೆದಿದ್ದು, ಒಬ್ಬ ವ್ಯಕ್ತಿ ತನ್ನ 7 ತಿಂಗಳ ಗರ್ಭಿಣಿ ಪತ್ನಿಯನ್ನು ಇರಿದು ಕೊಂದಿದ್ದಾನೆ. ನಂತರ ತಾನೇ ಪೊಲೀಸರಿಗೆ ಕರೆ ಮಾಡಿ, ಹೆಂಡತಿಯನ್ನು ಕೊಂದಿದ್ದ ರೂಂನೊಳಗೆ ಹೋಗಿ ಬೀಗ ಹಾಕಿಕೊಂಡಿದ್ದಾನೆ. ಪೊಲೀಸರು ಬರುವವರೆಗೂ ಹೆಂಡತಿಯ ಶವದ ಪಕ್ಕದಲ್ಲೇ ಕಾದು ಕುಳಿತಿದ್ದಾನೆ. ಕೊಲೆ (Murder) ಮಾಡಿದ ಆರೋಪಿಯನ್ನು ರವಿಶಂಕರ್ ಎಂದು ಗುರುತಿಸಲಾಗಿದೆ. 7 ತಿಂಗಳ ಗರ್ಭಿಣಿಯಾದ 20 ವರ್ಷದ ಪತ್ನಿ ಸಪ್ನಾ ಜೊತೆ ಜಗಳವಾಡಿದ ನಂತರ ಆಕೆಯನ್ನು ಕೊಂದಿದ್ದಾನೆ.

ಈ ವರ್ಷದ ಜನವರಿಯಲ್ಲಿ ರವಿ ಮತ್ತು ಸಪ್ನಾ ಮದುವೆಯಾಗಿದ್ದರು. ಆದರೆ ನಂತರ ಆಕೆಯ ಪತಿಯೊಂದಿಗೆ ಆಗಾಗ ಜಗಳವಾಗುತ್ತಲೇ ಇತ್ತು. ಈ ಮಧ್ಯೆ ಆಕೆ 7 ತಿಂಗಳ ಗರ್ಭಿಣಿಯಾಗಿದ್ದಳು. 2 ದಿನಗಳ ಹಿಂದೆ ಆಕೆ ಗಂಡನ ಜೊತೆ ಜಗಳವಾಡಿ ಅಮ್ಹೇರಾ ಗ್ರಾಮದಲ್ಲಿರುವ ತನ್ನ ತಂಗಿ ಪಿಂಕಿಯ ಮನೆಗೆ ಹೋಗಿದ್ದಳು. ಇಂದು ಬೆಳಿಗ್ಗೆ ರವಿ ಸಪ್ನಾಳನ್ನು ಭೇಟಿಯಾಗಲು ಅವಳಿದ್ದ ಆಕೆಯ ತಂಗಿ ಮನೆಗೆ ಹೋಗಿದ್ದ. ಮಾತನಾಡುವ ಸಲುವಾಗಿ ರವಿಶಂಕರ್ ಮತ್ತು ಸಪ್ನಾ ಮನೆಯ ಮೊದಲ ಮಹಡಿಗೆ ಹೋಗಿ ಬಾಗಿಲು ಹಾಕಿಕೊಂಡರು. ಇಬ್ಬರೂ ರೂಂಗೆ ಹೋದ ಕೆಲವೇ ಕ್ಷಣಗಳಲ್ಲಿ ಕಿರುಚಾಟ ಕೇಳಲು ಪ್ರಾರಂಭಿಸಿತು.

ಇದನ್ನೂ ಓದಿ: ಮೋಸಗಾತಿ ಹೆಂಡತಿ! 8 ಜನರನ್ನು ಮದುವೆಯಾಗಿ, 9ನೇ ವಿವಾಹವಾಗುವಾಗ ಸಿಕ್ಕಿಬಿದ್ದ ಖತರ್ನಾಕ್ ಮಹಿಳೆ

ಸಪ್ನಾ ತನ್ನ ಜೀವ ಉಳಿಸಿಕೊಳ್ಳಲು ಬೇಡಿಕೊಳ್ಳುತ್ತಿರುವುದು ಕೇಳಿಬಂದಿತು ಎಂದು ಅಕ್ಕಪಕ್ಕದವರು ಹೇಳಿದ್ದಾರೆ. ಆದರೆ ರವಿ ಕೋಪದಿಂದ ಅವಳಿಗೆ ಇರಿದಿದ್ದಾನೆ. ಸಪ್ನಾಳ ಕುಟುಂಬದ ಸದಸ್ಯರು ಮಧ್ಯಪ್ರವೇಶಿಸಲು ಪ್ರಯತ್ನಿಸಿದರು, ಆದರೆ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಸಪ್ನಾಳನ್ನು ಕೊಂದ ನಂತರ ರವಿ ಪೊಲೀಸರಿಗೆ ಕರೆ ಮಾಡಿ ಶವದ ಬಳಿ ಕುಳಿತು ಅಧಿಕಾರಿಗಳು ಬರುವವರೆಗೆ ಕಾಯುತ್ತಿದ್ದ. ಸ್ಥಳಕ್ಕೆ ಬಂದ ನಂತರ, ಸಪ್ನಾಳ ಗಂಟಲು ಸೀಳಿ ಆಕೆಗೆ ಹಲವು ಬಾರಿ ಇರಿದಿರುವುದು ಪೊಲೀಸರಿಗೆ ಕಂಡುಬಂದಿದೆ. ಅಧಿಕಾರಿಗಳು ಕೂಡಲೆ ರವಿಯನ್ನು ಬಂಧಿಸಿದ್ದಾರೆ. ಸಪ್ನಾಳ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!