AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಹೆಂಡತಿಯನ್ನು ಇರಿದು ಕೊಂದು, ಶವದ ಪಕ್ಕದಲ್ಲೇ ಪೊಲೀಸರಿಗೆ ಕಾದು ಕೂತ ಗಂಡ!

ಮೀರತ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ 7 ತಿಂಗಳ ಗರ್ಭಿಣಿ ಪತ್ನಿಯನ್ನು ಇರಿದು ಕೊಂದಿದ್ದಾನೆ. ನಂತರ ಪೊಲೀಸರಿಗೆ ಫೋನ್ ಮಾಡಿ, ಆಕೆಯ ಶವದ ಪಕ್ಕದಲ್ಲಿ ಪೊಲೀಸರು ಬರುವುದನ್ನೇ ಕಾದು ಕುಳಿತಿದ್ದಾನೆ. ಈ ವರ್ಷದ ಜನವರಿಯಲ್ಲಿ ಆ ದಂಪತಿ ಮದುವೆಯಾಗಿದ್ದರು. ಆದರೆ ಅವರ ಜೊತೆ ಜಗಳವಾಡಿದ್ದ ಪತ್ನಿ ಅಮ್ಹೇರಾ ಗ್ರಾಮದಲ್ಲಿರುವ ತನ್ನ ತಂಗಿ ಪಿಂಕಿಯ ಮನೆಗೆ ತೆರಳಿದ್ದರು. ಆಗ ಅಲ್ಲಿಗೆ ಹೋದ ಅವರು ಹೆಂಡತಿಯನ್ನು ಕೊಲೆ ಮಾಡಿದ್ದಾರೆ.

ಗರ್ಭಿಣಿ ಹೆಂಡತಿಯನ್ನು ಇರಿದು ಕೊಂದು, ಶವದ ಪಕ್ಕದಲ್ಲೇ ಪೊಲೀಸರಿಗೆ ಕಾದು ಕೂತ ಗಂಡ!
Sapna
ಸುಷ್ಮಾ ಚಕ್ರೆ
|

Updated on: Aug 02, 2025 | 8:06 PM

Share

ಮೀರತ್, ಆಗಸ್ಟ್ 2: ಉತ್ತರ ಪ್ರದೇಶದ (Uttar Pradesh) ಮೀರತ್‌ನಲ್ಲಿ ಆಘಾತಕಾರಿ ಘಟನೆ (Shocking News) ನಡೆದಿದ್ದು, ಒಬ್ಬ ವ್ಯಕ್ತಿ ತನ್ನ 7 ತಿಂಗಳ ಗರ್ಭಿಣಿ ಪತ್ನಿಯನ್ನು ಇರಿದು ಕೊಂದಿದ್ದಾನೆ. ನಂತರ ತಾನೇ ಪೊಲೀಸರಿಗೆ ಕರೆ ಮಾಡಿ, ಹೆಂಡತಿಯನ್ನು ಕೊಂದಿದ್ದ ರೂಂನೊಳಗೆ ಹೋಗಿ ಬೀಗ ಹಾಕಿಕೊಂಡಿದ್ದಾನೆ. ಪೊಲೀಸರು ಬರುವವರೆಗೂ ಹೆಂಡತಿಯ ಶವದ ಪಕ್ಕದಲ್ಲೇ ಕಾದು ಕುಳಿತಿದ್ದಾನೆ. ಕೊಲೆ (Murder) ಮಾಡಿದ ಆರೋಪಿಯನ್ನು ರವಿಶಂಕರ್ ಎಂದು ಗುರುತಿಸಲಾಗಿದೆ. 7 ತಿಂಗಳ ಗರ್ಭಿಣಿಯಾದ 20 ವರ್ಷದ ಪತ್ನಿ ಸಪ್ನಾ ಜೊತೆ ಜಗಳವಾಡಿದ ನಂತರ ಆಕೆಯನ್ನು ಕೊಂದಿದ್ದಾನೆ.

ಈ ವರ್ಷದ ಜನವರಿಯಲ್ಲಿ ರವಿ ಮತ್ತು ಸಪ್ನಾ ಮದುವೆಯಾಗಿದ್ದರು. ಆದರೆ ನಂತರ ಆಕೆಯ ಪತಿಯೊಂದಿಗೆ ಆಗಾಗ ಜಗಳವಾಗುತ್ತಲೇ ಇತ್ತು. ಈ ಮಧ್ಯೆ ಆಕೆ 7 ತಿಂಗಳ ಗರ್ಭಿಣಿಯಾಗಿದ್ದಳು. 2 ದಿನಗಳ ಹಿಂದೆ ಆಕೆ ಗಂಡನ ಜೊತೆ ಜಗಳವಾಡಿ ಅಮ್ಹೇರಾ ಗ್ರಾಮದಲ್ಲಿರುವ ತನ್ನ ತಂಗಿ ಪಿಂಕಿಯ ಮನೆಗೆ ಹೋಗಿದ್ದಳು. ಇಂದು ಬೆಳಿಗ್ಗೆ ರವಿ ಸಪ್ನಾಳನ್ನು ಭೇಟಿಯಾಗಲು ಅವಳಿದ್ದ ಆಕೆಯ ತಂಗಿ ಮನೆಗೆ ಹೋಗಿದ್ದ. ಮಾತನಾಡುವ ಸಲುವಾಗಿ ರವಿಶಂಕರ್ ಮತ್ತು ಸಪ್ನಾ ಮನೆಯ ಮೊದಲ ಮಹಡಿಗೆ ಹೋಗಿ ಬಾಗಿಲು ಹಾಕಿಕೊಂಡರು. ಇಬ್ಬರೂ ರೂಂಗೆ ಹೋದ ಕೆಲವೇ ಕ್ಷಣಗಳಲ್ಲಿ ಕಿರುಚಾಟ ಕೇಳಲು ಪ್ರಾರಂಭಿಸಿತು.

ಇದನ್ನೂ ಓದಿ: ಮೋಸಗಾತಿ ಹೆಂಡತಿ! 8 ಜನರನ್ನು ಮದುವೆಯಾಗಿ, 9ನೇ ವಿವಾಹವಾಗುವಾಗ ಸಿಕ್ಕಿಬಿದ್ದ ಖತರ್ನಾಕ್ ಮಹಿಳೆ

ಸಪ್ನಾ ತನ್ನ ಜೀವ ಉಳಿಸಿಕೊಳ್ಳಲು ಬೇಡಿಕೊಳ್ಳುತ್ತಿರುವುದು ಕೇಳಿಬಂದಿತು ಎಂದು ಅಕ್ಕಪಕ್ಕದವರು ಹೇಳಿದ್ದಾರೆ. ಆದರೆ ರವಿ ಕೋಪದಿಂದ ಅವಳಿಗೆ ಇರಿದಿದ್ದಾನೆ. ಸಪ್ನಾಳ ಕುಟುಂಬದ ಸದಸ್ಯರು ಮಧ್ಯಪ್ರವೇಶಿಸಲು ಪ್ರಯತ್ನಿಸಿದರು, ಆದರೆ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಸಪ್ನಾಳನ್ನು ಕೊಂದ ನಂತರ ರವಿ ಪೊಲೀಸರಿಗೆ ಕರೆ ಮಾಡಿ ಶವದ ಬಳಿ ಕುಳಿತು ಅಧಿಕಾರಿಗಳು ಬರುವವರೆಗೆ ಕಾಯುತ್ತಿದ್ದ. ಸ್ಥಳಕ್ಕೆ ಬಂದ ನಂತರ, ಸಪ್ನಾಳ ಗಂಟಲು ಸೀಳಿ ಆಕೆಗೆ ಹಲವು ಬಾರಿ ಇರಿದಿರುವುದು ಪೊಲೀಸರಿಗೆ ಕಂಡುಬಂದಿದೆ. ಅಧಿಕಾರಿಗಳು ಕೂಡಲೆ ರವಿಯನ್ನು ಬಂಧಿಸಿದ್ದಾರೆ. ಸಪ್ನಾಳ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ