AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಗಳಿ ನಿದ್ರೆಗೆ ತೊಂದರೆ ಮಾಡಿದ ನಾಯಿಮರಿಗಳನ್ನು ಜೀವಂತವಾಗಿ ಸುಟ್ಟು ಹಾಕಿದ ಮಹಿಳೆಯರು!

ಮೀರತ್‌ನಲ್ಲಿ ತಮ್ಮ ನಿದ್ರೆಗೆ ಭಂಗ ತಂದಿದ್ದಕ್ಕಾಗಿ ಇಬ್ಬರು ಮಹಿಳೆಯರು ನಿರ್ದಯವಾಗಿ 5 ನಾಯಿಮರಿಗಳನ್ನು ಜೀವಂತವಾಗಿ ಸುಟ್ಟು ಹಾಕಿದರು. ಈ ಪ್ರಕರಣದಲ್ಲಿ ಆ ಮಹಿಳೆಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಬೊಗಳಿ ನಿದ್ರೆಗೆ ತೊಂದರೆ ಮಾಡಿದ ನಾಯಿಮರಿಗಳನ್ನು ಜೀವಂತವಾಗಿ ಸುಟ್ಟು ಹಾಕಿದ ಮಹಿಳೆಯರು!
ನಾಯಿ ಮರಿ
ಸುಷ್ಮಾ ಚಕ್ರೆ
|

Updated on: Nov 09, 2024 | 9:58 PM

Share

ಮೀರತ್: ಬೀದಿ ಬದಿಯ ನಾಯಿಮರಿಗಳ ಮೇಲೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಆರೋಪದ ಮೇಲೆ ಇಬ್ಬರು ಮಹಿಳೆಯರ ವಿರುದ್ಧ ಮೀರತ್‌ನ ಕಂಕೇರಖೇಡಾ ಪ್ರದೇಶದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯರ ಪ್ರಕಾರ, ಅದೇ ನೆರೆಹೊರೆಯ ನಿವಾಸಿಗಳಾದ ಮಹಿಳೆಯರು ನಾಯಿಮರಿಗಳ ಬೊಗಳುವಿಕೆಯಿಂದ ಹತಾಶೆಗೊಂಡಿದ್ದರು. ಅದೇ ಕಾರಣಕ್ಕೆ ನಾಯಿಮರಿಗಳನ್ನು ಜೀವಂತವಾಗಿ ಸುಟ್ಟುಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಅನಿಮಲ್ ಕೇರ್ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಅಂಶುಮಾಲಿ ವಶಿಷ್ಠ್ ನೀಡಿದ ಹೇಳಿಕೆ ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ಜಿತೇಂದ್ರ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.

ಕಂಕೇರಖೇಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಇಬ್ಬರು ಆರೋಪಿಗಳಾದ ಶೋಭಾ ಮತ್ತು ಆರತಿ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 325ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆ ದೂರಿನ ಪ್ರಕಾರ, ರೋಹ್ಟಾ ರಸ್ತೆಯ ಸಂತ ನಗರ ಕಾಲೋನಿಯಲ್ಲಿ ನವೆಂಬರ್ 5ರಂದು ಈ ಘಟನೆ ನಡೆದಿದೆ.

ಇದನ್ನೂ ಓದಿ: ಶರ್ಟ್​ನಲ್ಲಿ ಸಿಲುಕಿದ್ದ ನೊಣದಿಂದ ಸಿಕ್ಕಿಬಿದ್ದ ಕೊಲೆ ಆರೋಪಿ

ಇತ್ತೀಚೆಗಷ್ಟೇ ಬೀದಿ ನಾಯಿಯೊಂದು 5 ನಾಯಿ ಮರಿಗಳಿಗೆ ಜನ್ಮ ನೀಡಿತ್ತು. ಅವು ರಾತ್ರಿ ವೇಳೆ ಕೂಗುತ್ತಿದ್ದವು. ಇದರಿಂದ ಕಿರಿಕಿರಿಯಾಗಿದ್ದ ಮಹಿಳೆಯರು ಆ ನಾಯಿಮರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ನಾಯಿ ಮರಿಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ