AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಕುರಿಗಳ್ಳರ ಹಾವಳಿ: ಕುರಿಗಾಹಿಗಳ ಪ್ರಜ್ಞೆ ತಪ್ಪಿಸಿ ಕುರಿಗಳ ಕಳ್ಳತನ

ಕೊಪ್ಪಳ ಜಿಲ್ಲೆಯಲ್ಲಿ ಕುರಿ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ. ಕುರಿಗಳನ್ನು ಕಳ್ಳತನ ಮಾಡುವ ಗ್ಯಾಂಗ್​ನಿಂದ ಕುರಿಗಾಹಿಗಳು ಕಂಗಾಲಾಗಿದ್ದಾರೆ. ಕುರಿಗಾಹಿಗಳಿಗೆ ಕೆಮಿಕಲ್ ಸ್ಪ್ರೇ ಹಾಕಿ ಪ್ರಜ್ಞೆ ತಪ್ಪಿಸಿ ಕುರಿಗಳನ್ನು ಕಳ್ಳತನ ಮಾಡಲಾಗುತ್ತಿದೆ. ಗಂಗಾವತಿ ತಾಲೂಕಿನ ಅಯೋದ್ಯಾ ಕ್ರಾಸ್, ಮಲ್ಲಾಪುರ ಸೇರಿ ಹಲವಡೆ ಕಳ್ಳತನ ನಡೆದಿದ್ದು, ಎರಡು ದಿನಗಳ ಹಿಂದೆ ರೈತರೊಬ್ಬರ 25ಕ್ಕೂ ಹೆಚ್ಚು ಕುರಿಗಳನ್ನು ಕಳ್ಳತನ ಮಾಡಲಾಗಿದೆ.

ಕೊಪ್ಪಳದಲ್ಲಿ ಕುರಿಗಳ್ಳರ ಹಾವಳಿ: ಕುರಿಗಾಹಿಗಳ ಪ್ರಜ್ಞೆ ತಪ್ಪಿಸಿ ಕುರಿಗಳ ಕಳ್ಳತನ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಕುರಿಗಳ ಕಳ್ಳತನ
ಸಂಜಯ್ಯಾ ಚಿಕ್ಕಮಠ
| Updated By: Rakesh Nayak Manchi|

Updated on: Dec 16, 2023 | 8:12 AM

Share

ಕೊಪ್ಪಳ, ಡಿ.16: ಜಿಲ್ಲೆಯಲ್ಲಿ (Koppal) ಕುರಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಜೀವನೋಪಾಯಕ್ಕೆಂದು ಸಾಕುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕುರಿಗಳನ್ನು ಕಳ್ಳತನ (Sheep Theft) ಮಾಡುವ ಖದೀಮ ಗ್ಯಾಂಗ್​ನಿಂದ ಕುರಿಗಾಹಿಗಳು ಕಂಗಾಲಾಗಿದ್ದಾರೆ. ರಾತ್ರಿ ವೇಳೆ ಕುರಿಗಾಹಿಗಳು ಹಾಗೂ ನಾಯಿಗಳಿಗೆ ಕೆಮಿಕಲ್ ಸ್ಪ್ರೇ ಹಾಕಿ ಪ್ರಜ್ಞೆ ತಪ್ಪಿಸಿ ಕುರಿಗಳನ್ನು ಕಳ್ಳತನ ಮಾಡಿ ಗೂಡ್ಸ್​ ವಾಹನದಲ್ಲಿ ಒಯ್ಯುತ್ತಿದ್ದಾರೆ.

ಜಿಲ್ಲೆಯ ಗಂಗಾವತಿ ತಾಲೂಕಿನ ಅಯೋದ್ಯಾ ಕ್ರಾಸ್, ಮಲ್ಲಾಪುರ ಸೇರಿ ಹಲವಡೆ ಕಳ್ಳತನ ಪ್ರಕರಣಗಳು ನಡೆದಿವೆ. ಪ್ರತಿನಿತ್ಯ ಒಂದಿಲ್ಲೊಂದು ಕಡೆ ಕುರಿ ಕಳ್ಳತನ ಮಾಡಲಾಗುತ್ತಿದೆ. ಎರಡು ದಿನದ ಹಿಂದೆ ಚೌಡಪ್ಪ ಬನ್ನಿ ಎಂಬವರು ಸಾಕುತ್ತಿದ್ದ 25 ಕ್ಕೂ ಹೆಚ್ಚು ಕುರಿಗಳನ್ನು ಕಳ್ಳತನ ಮಾಡಲಾಗಿದೆ. ಈ ಬಗ್ಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಳ್ಳರನ್ನು ಪತ್ತೆ ಮಾಡುವಂತೆ ಆಗ್ರಹಿಸಲಾಗಿದೆ.

ಇದನ್ನೂ ಓದಿ: ಕೊಪ್ಪಳ: ಕಲ್ಲಂಗಡಿ ತಿನ್ನಲು ಹೊಲಕ್ಕೆ ನುಗ್ಗಿದ ಕರಡಿಯನ್ನು ಅಟ್ಟಾಡಿಸಿದ ನಾಯಿ, ವಿಡಿಯೋ ಇಲ್ಲಿದೆ

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು