AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ರಾಮಲಿಂಗಾರೆಡ್ಡಿ ಆಪ್ತನಿಂದ ಅರಣ್ಯ ಸಿಬ್ಬಂದಿಗೆ ಅವಾಜ್; ಕೋರ್ಟ್ ಆದೇಶದ ನಂತರ FIR ದಾಖಲು

ಕಾವೇರಿ ನೀರು ಪೈಪ್ ಲೈನ್ ಕಾಮಗಾರಿ ತಡೆದ ಅರಣ್ಯ ಇಲಾಖೆ ಸಿಬ್ಬಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಆಪ್ತರೂ ಆಗಿರುವ ಕಾಂಗ್ರೆಸ್ ಮುಖಂಡ, ಬಿಲ್ಡರ್ ಬಾಬುರೆಡ್ಡಿ ಅವಾಚ್ಯ ಶಬ್ದಗಳಿಂದ ಅವಾಜ್ ಹಾಕಿದ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದ ಆಡಿಯೋ ಲಭ್ಯವಾಗಿದೆ. ಆರಂಭದಲ್ಲಿ ಪೊಲೀಸರು ಎನ್​​ಸಿಆರ್ ದಾಖಲಿಸಿದ್ದರು. ಕೋರ್ಟ್ ಆದೇಶದ ನಂತರ ಎಫ್​ಐಆರ್ ದಾಖಲಿಸಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಆಪ್ತನಿಂದ ಅರಣ್ಯ ಸಿಬ್ಬಂದಿಗೆ ಅವಾಜ್; ಕೋರ್ಟ್ ಆದೇಶದ ನಂತರ FIR ದಾಖಲು
ಸಚಿವ ರಾಮಲಿಂಗಾರೆಡ್ಡಿ ಆಪ್ತನಿಂದ ಅರಣ್ಯ ಸಿಬ್ಬಂದಿಗೆ ಅವಾಜ್; FIR ದಾಖಲು
ರಾಮು, ಆನೇಕಲ್​
| Edited By: |

Updated on: Feb 22, 2024 | 1:27 PM

Share

ಆನೇಕಲ್, ಫೆ.22: ಕಾವೇರಿ ನೀರು ಪೈಪ್ ಲೈನ್ ಕಾಮಗಾರಿ ತಡೆದ ಅರಣ್ಯ ಇಲಾಖೆ ಸಿಬ್ಬಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರ ಆಪ್ತರೂ ಆಗಿರುವ ಕಾಂಗ್ರೆಸ್ ಮುಖಂಡ, ಬಿಲ್ಡರ್ ಬಾಬುರೆಡ್ಡಿ ಅವಾಚ್ಯ ಶಬ್ದಗಳಿಂದ ಅವಾಜ್ ಹಾಕಿದ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದ ಆಡಿಯೋ ಲಭ್ಯವಾಗಿದೆ.

ಕಲ್ಕೆರೆ ಅರಣ್ಯ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೆ ಪೈಪ್ ಲೈನ್ ಕಾಮಗಾರಿ ನಡೆಸಲಾಗುತ್ತಿತ್ತು. ಈ ವಿಚಾರ ತಿಳಿದ ರಾತ್ರಿ ಗಸ್ತು ತಿರುಗುತ್ತಿದ್ದ ಅರಣ್ಯ ಸಿಬ್ಬಂದಿ ವಿಜಯ್ ಕುಮಾರ್, ಕಾಮಗಾರಿಯನ್ನು ತಡೆದಿದ್ದಾರೆ. ಫೆಬ್ರವರಿ 16 ರಂದು ರಾತ್ರಿ 10:45 ರ ಸುಮಾರಿಗೆ ನಡೆದ ಘಟನೆ ಇದಾಗಿದೆ. ಈ ವೇಳೆ ಗುತ್ತಿಗೆದಾರ ರಾಮಲಿಂಗಾರೆಡ್ಡಿ ಆಪ್ತರೂ ಆಗಿರುವ ಬನ್ನೇರುಘಟ್ಟ ಸಮೀಪದ ಸಕಲವಾರ ನಿವಾಸಿ ಬಾಬುರೆಡ್ಡಿಗೆ ಕರೆ ಮಾಡಿದ್ದಾರೆ.

ಇದನ್ನೂ ಓದಿ: ಜೆರೋಸಾ ಶಾಲೆ ಶಿಕ್ಷಕಿ ವಿರುದ್ಧ ಆಡಿಯೋ ವೈರಲ್ ಮಾಡಿದ ಆರೋಪ; ಮಹಿಳೆಗೆ ವಿದೇಶದಿಂದ ಬೆದರಿಕೆ ಕರೆ

ಅದರಂತೆ, ಸಿಬ್ಬಂದಿ ಜೊತೆ ಮಾತನಾಡಿದ ಬಾಬುರೆಡ್ಡಿ ಅವಾಚ್ಯ ಶಬ್ದಗಳಿಂದ ಅವಾಜ್ ಹಾಕಿದ್ದಾರೆ. ಸ್ಥಳದಿಂದ ಜಾಗ ಖಾಲಿ ಮಾಡು. ಇಲ್ಲದಿದ್ದರೆ ಸ್ಥಳಕ್ಕೆ ಬಂದು ಹೊಡೆಯುವುದಾಗಿ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದ ಆಡಿಯೋ ಲಭ್ಯವಾಗಿದೆ. ಈ ಬಗ್ಗೆ ದೂರು ಸ್ವೀಕರಿಸಿದ ಬನ್ನೇರುಘಟ್ಟ ಠಾಣಾ ಪೊಲೀಸರು ಎನ್​ಸಿಆರ್ ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಲಾಗಿತ್ತು. ಇದೀಗ ಕೋರ್ಟ್ ಆದೇಶದಂತೆ ಬಾಬುರೆಡ್ಡಿ ವಿರುದ್ಧ ಐಪಿಸಿ 1860, 506, 504 ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?