AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ರಾಮಲಿಂಗಾರೆಡ್ಡಿ ಆಪ್ತನಿಂದ ಅರಣ್ಯ ಸಿಬ್ಬಂದಿಗೆ ಅವಾಜ್; ಕೋರ್ಟ್ ಆದೇಶದ ನಂತರ FIR ದಾಖಲು

ಕಾವೇರಿ ನೀರು ಪೈಪ್ ಲೈನ್ ಕಾಮಗಾರಿ ತಡೆದ ಅರಣ್ಯ ಇಲಾಖೆ ಸಿಬ್ಬಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಆಪ್ತರೂ ಆಗಿರುವ ಕಾಂಗ್ರೆಸ್ ಮುಖಂಡ, ಬಿಲ್ಡರ್ ಬಾಬುರೆಡ್ಡಿ ಅವಾಚ್ಯ ಶಬ್ದಗಳಿಂದ ಅವಾಜ್ ಹಾಕಿದ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದ ಆಡಿಯೋ ಲಭ್ಯವಾಗಿದೆ. ಆರಂಭದಲ್ಲಿ ಪೊಲೀಸರು ಎನ್​​ಸಿಆರ್ ದಾಖಲಿಸಿದ್ದರು. ಕೋರ್ಟ್ ಆದೇಶದ ನಂತರ ಎಫ್​ಐಆರ್ ದಾಖಲಿಸಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಆಪ್ತನಿಂದ ಅರಣ್ಯ ಸಿಬ್ಬಂದಿಗೆ ಅವಾಜ್; ಕೋರ್ಟ್ ಆದೇಶದ ನಂತರ FIR ದಾಖಲು
ಸಚಿವ ರಾಮಲಿಂಗಾರೆಡ್ಡಿ ಆಪ್ತನಿಂದ ಅರಣ್ಯ ಸಿಬ್ಬಂದಿಗೆ ಅವಾಜ್; FIR ದಾಖಲು
ರಾಮು, ಆನೇಕಲ್​
| Edited By: |

Updated on: Feb 22, 2024 | 1:27 PM

Share

ಆನೇಕಲ್, ಫೆ.22: ಕಾವೇರಿ ನೀರು ಪೈಪ್ ಲೈನ್ ಕಾಮಗಾರಿ ತಡೆದ ಅರಣ್ಯ ಇಲಾಖೆ ಸಿಬ್ಬಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರ ಆಪ್ತರೂ ಆಗಿರುವ ಕಾಂಗ್ರೆಸ್ ಮುಖಂಡ, ಬಿಲ್ಡರ್ ಬಾಬುರೆಡ್ಡಿ ಅವಾಚ್ಯ ಶಬ್ದಗಳಿಂದ ಅವಾಜ್ ಹಾಕಿದ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದ ಆಡಿಯೋ ಲಭ್ಯವಾಗಿದೆ.

ಕಲ್ಕೆರೆ ಅರಣ್ಯ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೆ ಪೈಪ್ ಲೈನ್ ಕಾಮಗಾರಿ ನಡೆಸಲಾಗುತ್ತಿತ್ತು. ಈ ವಿಚಾರ ತಿಳಿದ ರಾತ್ರಿ ಗಸ್ತು ತಿರುಗುತ್ತಿದ್ದ ಅರಣ್ಯ ಸಿಬ್ಬಂದಿ ವಿಜಯ್ ಕುಮಾರ್, ಕಾಮಗಾರಿಯನ್ನು ತಡೆದಿದ್ದಾರೆ. ಫೆಬ್ರವರಿ 16 ರಂದು ರಾತ್ರಿ 10:45 ರ ಸುಮಾರಿಗೆ ನಡೆದ ಘಟನೆ ಇದಾಗಿದೆ. ಈ ವೇಳೆ ಗುತ್ತಿಗೆದಾರ ರಾಮಲಿಂಗಾರೆಡ್ಡಿ ಆಪ್ತರೂ ಆಗಿರುವ ಬನ್ನೇರುಘಟ್ಟ ಸಮೀಪದ ಸಕಲವಾರ ನಿವಾಸಿ ಬಾಬುರೆಡ್ಡಿಗೆ ಕರೆ ಮಾಡಿದ್ದಾರೆ.

ಇದನ್ನೂ ಓದಿ: ಜೆರೋಸಾ ಶಾಲೆ ಶಿಕ್ಷಕಿ ವಿರುದ್ಧ ಆಡಿಯೋ ವೈರಲ್ ಮಾಡಿದ ಆರೋಪ; ಮಹಿಳೆಗೆ ವಿದೇಶದಿಂದ ಬೆದರಿಕೆ ಕರೆ

ಅದರಂತೆ, ಸಿಬ್ಬಂದಿ ಜೊತೆ ಮಾತನಾಡಿದ ಬಾಬುರೆಡ್ಡಿ ಅವಾಚ್ಯ ಶಬ್ದಗಳಿಂದ ಅವಾಜ್ ಹಾಕಿದ್ದಾರೆ. ಸ್ಥಳದಿಂದ ಜಾಗ ಖಾಲಿ ಮಾಡು. ಇಲ್ಲದಿದ್ದರೆ ಸ್ಥಳಕ್ಕೆ ಬಂದು ಹೊಡೆಯುವುದಾಗಿ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದ ಆಡಿಯೋ ಲಭ್ಯವಾಗಿದೆ. ಈ ಬಗ್ಗೆ ದೂರು ಸ್ವೀಕರಿಸಿದ ಬನ್ನೇರುಘಟ್ಟ ಠಾಣಾ ಪೊಲೀಸರು ಎನ್​ಸಿಆರ್ ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಲಾಗಿತ್ತು. ಇದೀಗ ಕೋರ್ಟ್ ಆದೇಶದಂತೆ ಬಾಬುರೆಡ್ಡಿ ವಿರುದ್ಧ ಐಪಿಸಿ 1860, 506, 504 ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು