AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ಬಾಲಕಿಯನ್ನು ಅಪಹರಿಸಿ ಅಪ್ರಾಪ್ತ ಸೇರಿ ಮೂವರಿಂದ ಸಾಮೂಹಿಕ ಅತ್ಯಾಚಾರ

ಬಾಲಕಿಯನ್ನು ಅಪಹರಿಸಿ ಅಪ್ರಾಪ್ತ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದ ಲಾಡ್ನೂನ್​ನಲ್ಲಿ ನಡೆದಿದೆ. ಬಾಲಕಿಯನ್ನು ಭಾನುವಾರ ಮೂವರು ಅಪಹರಿಸಿದ್ದರು, ಅತ್ಯಾಚಾರವೆಸಗಿ ಕಾರಿನಲ್ಲಿ ಕರೆದುಕೊಂಡು ಬಂದು ಮನೆ ಎದುರು ಎಸೆದು ಹೋಗಿದ್ದರು. ಮೂವರು ಆರೋಪಿಗಳ ಪೈಕಿ ಇಬ್ಬರು ಶಂಕಿತರನ್ನು 38 ವರ್ಷದ ಜಸಾರಾಮ್ ಮತ್ತು 34 ವರ್ಷದ ಮಹಾವೀರ್ ಎಂದು ಗುರುತಿಸಲಾಗಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಲಾಡ್ನೂನ್ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ತಿಳಿಸಿದ್ದಾರೆ.

ರಾಜಸ್ಥಾನ: ಬಾಲಕಿಯನ್ನು ಅಪಹರಿಸಿ ಅಪ್ರಾಪ್ತ ಸೇರಿ ಮೂವರಿಂದ ಸಾಮೂಹಿಕ ಅತ್ಯಾಚಾರ
ಅಪರಾಧImage Credit source: India Today
ನಯನಾ ರಾಜೀವ್
|

Updated on: Nov 22, 2023 | 10:02 AM

Share

ಬಾಲಕಿಯನ್ನು ಅಪಹರಿಸಿ ಅಪ್ರಾಪ್ತ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದ ಲಾಡ್ನೂನ್​ನಲ್ಲಿ ನಡೆದಿದೆ. ಬಾಲಕಿಯನ್ನು ಭಾನುವಾರ ಮೂವರು ಅಪಹರಿಸಿದ್ದರು, ಅತ್ಯಾಚಾರವೆಸಗಿ ಕಾರಿನಲ್ಲಿ ಕರೆದುಕೊಂಡು ಬಂದು ಮನೆ ಎದುರು ಎಸೆದು ಹೋಗಿದ್ದರು. ಮೂವರು ಆರೋಪಿಗಳ ಪೈಕಿ ಇಬ್ಬರು ಶಂಕಿತರನ್ನು 38 ವರ್ಷದ ಜಸಾರಾಮ್ ಮತ್ತು 34 ವರ್ಷದ ಮಹಾವೀರ್ ಎಂದು ಗುರುತಿಸಲಾಗಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಲಾಡ್ನೂನ್ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ತಿಳಿಸಿದ್ದಾರೆ.

ಮೂರನೇ ಆರೋಪಿ 16 ವರ್ಷದ ಯುವಕನಾಗಿದ್ದು, ಆತನ ವಿರುದ್ಧ ಬಾಲಾಪರಾಧಿ ಕಾನೂನಿನಡಿ ಪ್ರತ್ಯೇಕವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಬಾಲಕಿಯ ಸ್ಥಿತಿ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಆಕೆಯ ಕುಟುಂಬಸ್ಥರು ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ದಾಖಲಿಸಿದ್ದು, ಘಟನೆಯ ಬಗ್ಗೆ ಮಾತನಾಡಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಡಿ (ಗ್ಯಾಂಗ್ರೇಪ್), 363 (ಅಪಹರಣ) ಮತ್ತು ಪೋಕ್ಸೋ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್‌ಎಚ್‌ಒ ಹೇಳಿದರು.

ಮತ್ತಷ್ಟು ಓದಿ: ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್

ಭಾನುವಾರ ಸಂಜೆ ಮಗಳು ಕಾಣದ ಹಿನ್ನೆಲೆಯಲ್ಲಿ ಹುಡುಕುತ್ತಿರುವಾಗ ಕಾರಿನಿಂದ ಯಾರನ್ನೋ ಎಸೆಯುವುದನ್ನು ಕಂಡಿದ್ದಾರೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ, ವರದಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ರಾಜಸ್ಥಾನದ ಜೈಪುರದಲ್ಲಿ 40 ವರ್ಷದ ಮಹಿಳೆಯನ್ನು ಬಸ್ ಚಾಲಕನೊಬ್ಬ ಅಪಹರಿಸಿ ಅತ್ಯಾಚಾರ ಎಸಗಿದ್ದ. ಮಹಿಳೆಯ ಪತಿ, ಆಕೆಯನ್ನು ಪತ್ತೆಹಚ್ಚಲು ಸಾಧ್ಯವಾಗದ ನಂತರ ಕಾಣೆಯಾದ ವರದಿಯನ್ನು ಸಲ್ಲಿಸಲು ಹರ್ಮಾಡ ಪೊಲೀಸ್ ಠಾಣೆಗೆ ಸಂಪರ್ಕಿಸಿದರು. ನಂತರ ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ