AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತಿಗೆ ಮೇಲೆ ನಾದಿನಿಗೆ ಪ್ರೀತಿ; ಮದುವೆಯಾಗಲು ಮನೆ ಬಿಟ್ಟು ಓಡಿದ ಸಲಿಂಗ ಕಾಮಿಗಳ ಕತೆಯೇನಾಯ್ತು?

ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಅತ್ತಿಗೆಯೊಂದಿಗೆ ಪ್ರೀತಿಯಲ್ಲಿ ಬಿದ್ದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ನಡೆದಿದೆ. ಅವರಿಬ್ಬರೂ ಮದುವೆಯಾಗಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಮನೆ ಬಿಟ್ಟು ಓಡಿಹೋಗಲು ಅವರು ಮುಂದಾಗಿದ್ದಾರೆ. ಬಳಿಕ ತಮ್ಮ ಮದುವೆಗೆ ಯಾರೂ ಒಪ್ಪದ ಹಿನ್ನೆಲೆಯಲ್ಲಿ ಅವರಿಬ್ಬರ ಸಲಿಂಗ ಪ್ರೇಮ ಸಂಬಂಧವು ವಿವಾದಗಳಿಗೆ ಕಾರಣವಾಯಿತು. ಇದಾದ ಬಳಿಕ ಅವರಿಗೆ ತಮ್ಮನ್ನು ಮದುವೆಯಾಗಲು ಮನೆಯಲ್ಲಿ ಬಿಡುವುದಿಲ್ಲ ಎಂದು ಹೇಳಿ ನಾದಿನಿ ತನ್ನ ಅಣ್ಣನ ಹೆಂಡತಿಗೆ ವಿಷ ಸೇವಿಸಲು ಒತ್ತಾಯಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಆ ಮಹಿಳೆಯ ಸ್ಥಿತಿ ಗಂಭೀರವಾಗಿದೆ.

ಅತ್ತಿಗೆ ಮೇಲೆ ನಾದಿನಿಗೆ ಪ್ರೀತಿ; ಮದುವೆಯಾಗಲು ಮನೆ ಬಿಟ್ಟು ಓಡಿದ ಸಲಿಂಗ ಕಾಮಿಗಳ ಕತೆಯೇನಾಯ್ತು?
Girls
ಸುಷ್ಮಾ ಚಕ್ರೆ
|

Updated on: Jan 06, 2025 | 9:54 PM

Share

ಉನ್ನಾವ್: ಉತ್ತರ ಪ್ರದೇಶದ ಉನ್ನಾವೊದಲ್ಲಿ ಯುವತಿಯೊಬ್ಬಳು ತನ್ನ ಅತ್ತಿಗೆಯನ್ನು ಮದುವೆಯಾಗುವಂತೆ ಒತ್ತಾಯಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಳೆದ 6 ತಿಂಗಳಿನಿಂದ ಅವರಿಬ್ಬರ ನಡುವೆ ಆಪ್ತ ಸಂಬಂಧ ಬೆಳೆದಿತ್ತು. ಯುವತಿಗೆ ತನ್ನ ಅತ್ತಿಗೆ ತನ್ನ ಅಣ್ಣನೊಂದಿಗೆ ಆತ್ಮೀಯವಾಗಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಅಣ್ಣನನ್ನು ಬಿಟ್ಟು ತನ್ನನ್ನೇ ಮದುವೆಯಾಗಬೇಕೆಂದು ಆಕೆ ಅತ್ತಿಗೆಗೆ ಒತ್ತಾಯಿಸುತ್ತಿದ್ದಳು. ಇಬ್ಬರೂ ಸಲಿಂಗ ವಿವಾಹವಾಗಲು ಮನೆ ಬಿಟ್ಟು ಓಡಿಹೋಗಲು ನಿರ್ಧರಿಸಿದ್ದರು.

ಈ ವಿಷಯ ಮನೆಯಲ್ಲಿ ಗೊತ್ತಾಗಿ ಅವರ ಪ್ರಣಯ ಸಂಬಂಧವು ವಿವಾದಗಳಿಗೆ ಕಾರಣವಾಯಿತು. ನಂತರ ಅತ್ತಿಗೆ ವಿಷ ಸೇವಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಿವಾಹಿತ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಮತ್ತು ಆಕೆಯ ಕುಟುಂಬದವರು ಚಿಕಿತ್ಸೆಗಾಗಿ ಬಂಗಾರ್‌ಮೌ ಸಿಎಚ್‌ಸಿಗೆ ದಾಖಲಿಸಿದ್ದಾರೆ.

ಐದು ದಿನಗಳ ಹಿಂದೆ, ಯುವತಿ ಮತ್ತು ಆಕೆಯ ಅತ್ತಿಗೆ ಇಬ್ಬರೂ ಪರಾರಿಯಾಗಿದ್ದರು. ಆದರೆ ಪೊಲೀಸರು ಅವರನ್ನು ಪತ್ತೆ ಮಾಡಿ ಅವರ ಕುಟುಂಬಗಳಿಗೆ ಒಪ್ಪಿಸಿದ್ದಾರೆ. ವಿವಾಹಿತ ಮಹಿಳೆಯ ಪತಿ ಆಕೆಯಿಂದ ದೂರವಾಗಿದ್ದ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ