AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಹತ್ಯೆಗೀಡಾದ ಬಾಲಕಿ ಆ ದಿನ ಸಂಜೆ ಹೊರಹೋಗಿದ್ದೇಕೆ?: ಸಂತ್ರಸ್ತೆಯ ಗೆಳತಿ ಹೀಗಂತಾರೆ

ನೀತು ಮಗಳ ಹುಟ್ಟುಹಬ್ಬಕ್ಕಾಗಿ ಭಾನುವಾರ ಇವರಿಬ್ಬರು ಕೆಲವು ವಸ್ತುಗಳನ್ನು ಖರೀದಿಸಲು ಹೋಗಿದ್ದರು ಎಂದು ನೀತು ಸುದ್ದಿಗಾರರಿಗೆ ತಿಳಿಸಿದರು. ಹೊರಗೆ ಹೋಗಿ ಬಂದ ಮೇಲೆ ಮನೆಯಲ್ಲಿ ಇಬ್ಬರೂ ಸ್ನಾನ ಮಾಡಿ ಮತ್ತೊಮ್ಮೆ ಹೊರಗೆ ಹೋಗಿದ್ದಾರೆ. ಅಲ್ಲಿ ಅವರಿಬ್ಬರೂ ಎರಡು ಅಂಗಡಿಗಳಲ್ಲಿ ವಸ್ತುಗಳನ್ನು ಖರೀದಿಸಿದ್ದಾರೆ.

ದೆಹಲಿಯಲ್ಲಿ ಹತ್ಯೆಗೀಡಾದ ಬಾಲಕಿ ಆ ದಿನ ಸಂಜೆ ಹೊರಹೋಗಿದ್ದೇಕೆ?: ಸಂತ್ರಸ್ತೆಯ ಗೆಳತಿ ಹೀಗಂತಾರೆ
ಸಂತ್ರಸ್ತೆಯ ಗೆಳತಿ ನೀತು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 29, 2023 | 7:39 PM

Share

ದೆಹಲಿಯ (Delhi) ಶಾದಾಬಾದ್ ಪ್ರದೇಶದಲ್ಲಿ (Shadabad area) ಅಪ್ರಾಪ್ತ ಬಾಲಕಿಯ ಭೀಕರ ಹತ್ಯೆ (Delhi Murder) ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಭಾನುವಾರ ಸಂಜೆ, 20 ವರ್ಷದ ಸಾಹಿಲ್ ಎಂಬ ಯುವಕ ತನ್ನ 16 ವರ್ಷದ ಗೆಳತಿಯನ್ನು ಬರ್ಬರವಾಗಿ ಇರಿದು ಕಲ್ಲಿನಿಂದ ಹೊಡೆದು ಕೊಂದಿದ್ದ ಘಟನೆ ಅತ್ಯಂತ ಬರ್ಬರ, ಪೈಶಾಚಿಕವಾಗಿತ್ತು. ಘೋರ ಅಪರಾಧದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಟಿವಿ9 ಭಾರತ್ ವರ್ಷ್ ಬಿಡುಗಡೆ ಮಾಡಿದ ವಿಶೇಷ ವಿಡಿಯೊದಲ್ಲಿ, ಅಪ್ರಾಪ್ತ ಬಾಲಕಿ ಕಳೆದ ಕೆಲವು ವಾರಗಳಿಂದ ನೀತು ಎಂಬ ಯುವತಿಯೊಂದಿಗೆ ವಾಸಿಸುತ್ತಿದ್ದಳು ಎಂದು ಹೇಳಲಾಗಿದೆ. ನೀತು ಅವರ ಪತಿ ಊರಲ್ಲಿರಲಿಲ್ಲ, ಹಾಗಾಗಿ ಬಾಲಕಿ ನೀತು ಜತೆ ವಾಸವಾಗಿದ್ದಳು.

ನೀತು ಮಗಳ ಹುಟ್ಟುಹಬ್ಬಕ್ಕಾಗಿ ಭಾನುವಾರ ಇವರಿಬ್ಬರು ಕೆಲವು ವಸ್ತುಗಳನ್ನು ಖರೀದಿಸಲು ಹೋಗಿದ್ದರು ಎಂದು ನೀತು ಸುದ್ದಿಗಾರರಿಗೆ ತಿಳಿಸಿದರು. ಹೊರಗೆ ಹೋಗಿ ಬಂದ ಮೇಲೆ ಮನೆಯಲ್ಲಿ ಇಬ್ಬರೂ ಸ್ನಾನ ಮಾಡಿ ಮತ್ತೊಮ್ಮೆ ಹೊರಗೆ ಹೋಗಿದ್ದಾರೆ. ಅಲ್ಲಿ ಅವರಿಬ್ಬರೂ ಎರಡು ಅಂಗಡಿಗಳಲ್ಲಿ ವಸ್ತುಗಳನ್ನು ಖರೀದಿಸಿದ್ದಾರೆ.

ನೀವು ಮನೆಗೆ ಹೋಗಿ, ನಾನು ನನ್ನ ಸ್ನೇಹಿತೆ ಭಾವನಾ ಮನೆಗೆ ಹೋಗುವುದಾಗಿ ಹೇಳಿದ್ದಳು. ಇದಾದ ನಂತರ ಆಕೆ ಮನಗೆ ಹಿಂತಿರುಗಲೇ ಇಲ್ಲ ಎಂದು ಗದ್ಗತಿರಾಗಿ ನೀತು ನುಡಿದಿದ್ದಾರ. ಆರೋಪಿಯ ಬಗ್ಗೆ ಕೇಳಿದಾಗ, ಅವನ ಹೆಸರು ಸಾಹಿಲ್. ಸಂತ್ರಸ್ತೆ ಸುಮಾರು ಐದು-ಆರು ತಿಂಗಳಿನಿಂದ ಡೇಟಿಂಗ್ ಮಾಡುತ್ತಿದ್ದಳು..ಆದರೆ, ಇಬ್ಬರಿಗೂ ಮೂರ್ನಾಲ್ಕು ವರ್ಷಗಳಿಂದ ಪರಿಚಯವಿತ್ತು ಎಂದು ನೀತು ಹೇಳಿದ್ದಾರೆ.

ಸಂತ್ರಸ್ತೆ ನನಗೆ ತುಂಬಾ ಹತ್ತಿರವಾದ ನಂತರವೇ ಅವರ ಸಂಬಂಧದ ಬಗ್ಗೆ ನನಗೆ ತಿಳಿದಿದ್ದು. ಮೃತರು ಸಾಹಿಲ್ ಜೊತೆ ಮಾತನಾಡಲು ನಿರಾಕರಿಸಿದ್ದರಿಂದ ಇಬ್ಬರೂ ಸ್ವಲ್ಪ ಸಮಯದಿಂದ ಜಗಳವಾಡುತ್ತಿದ್ದರು.

ಆಕೆ ನನ್ನ ಮುಂದೆ ಈ ಬಗ್ಗೆ ಹೇಳದೇ ಇರುವ ಕಾರಣ ಅವರ ಸಂಬಂಧದ ಬಗ್ಗೆ ನಾನು ಕುಟುಂಬದವರ ಮುಂದೆ ಹೇಳಿರಲಿಲ್ಲ. ಗುಡಿಯಾ ಎಂಬ ಸ್ನೇಹಿತೆ ಮೂಲಕ ಸಂತ್ರಸ್ತೆ ನನಗೆ ಪರಿಚಿತವಾಗಿದ್ದಳು.

ಇದನ್ನೂ ಓದಿ: Delhi murder: ದೆಹಲಿಯಲ್ಲಿ 16ರ ಹರೆಯದ ಬಾಲಕಿಯ ಬರ್ಬರ ಕೊಲೆ ಮಾಡಿದ ಆರೋಪಿ ಸಾಹಿಲ್ ಬಂಧನ

ಏತನ್ಮಧ್ಯೆ, ಟಿವಿ9 ಭಾರತವರ್ಷ್ ಜತೆ ಮಾತನಾಡಿದ ಸಂತ್ರಸ್ತೆಯ ತಾಯಿ ಆರೋಪಿಯನ್ನು ನೇಣಿಗೇರಿಸಬೇಕು ಎಂದು ಹೇಳಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ