AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನಿನ ಮೇಲೆ ಬಿಡುಗಡೆಗೊಂಡು ಅತ್ಯಾಚಾರ ಸಂತ್ರಸ್ತೆಯನ್ನು ಹಾಡ ಹಗಲೇ ಕೊಚ್ಚಿ ಕೊಂದ ಸಹೋದರರು

ಅತ್ಯಾಚಾರದ ಆರೋಪದ ಮೇಲೆ ಜೈಲು ಸೇರಿದ್ದ ಆರೋಪಿ  ಜಾಮೀನಿನ ಮೇಲೆ ಹೊರಬಂದು ಸಹೋದರನೊಂದಿಗೆ ಸೇರಿ ಅತ್ಯಾಚಾರ ಸಂತ್ರಸ್ತೆಯನ್ನು ಹಾಡಹಗಲಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಂತಕರಾದ ಅಶೋಕ್ ಮತ್ತು ಪವನ್ ನಿಶಾದ್ ಕ್ರೂರ ಹತ್ಯೆಯ ಕೆಲವು ದಿನಗಳ ಮೊದಲು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜಾಮೀನಿನ ಮೇಲೆ ಬಿಡುಗಡೆಗೊಂಡು ಅತ್ಯಾಚಾರ ಸಂತ್ರಸ್ತೆಯನ್ನು ಹಾಡ ಹಗಲೇ ಕೊಚ್ಚಿ ಕೊಂದ ಸಹೋದರರು
ಸಾವು
ನಯನಾ ರಾಜೀವ್
|

Updated on: Nov 21, 2023 | 12:20 PM

Share

ಅತ್ಯಾಚಾರದ ಆರೋಪದ ಮೇಲೆ ಜೈಲು ಸೇರಿದ್ದ ಆರೋಪಿ  ಜಾಮೀನಿನ ಮೇಲೆ ಹೊರಬಂದು ಸಹೋದರನೊಂದಿಗೆ ಸೇರಿ ಅತ್ಯಾಚಾರ ಸಂತ್ರಸ್ತೆಯನ್ನು ಹಾಡಹಗಲಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಂತಕರಾದ ಅಶೋಕ್ ಮತ್ತು ಪವನ್ ನಿಶಾದ್ ಕ್ರೂರ ಹತ್ಯೆಯ ಕೆಲವು ದಿನಗಳ ಮೊದಲು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಸ್ಥರು ಭಯ ಹಾಗೂ ಅಸಹಾಯಕತೆಯಿಂದ ನೋಡುತ್ತಾ ನಿಂತಿದ್ದರು, ಯುವತಿಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ಪವನ್ ನಿಶಾದ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಯುವತಿ ದೂರು ನೀಡಿದ್ದಳು. ಪವನ್ ನಿಶಾದ್ ಹಾಗೂ ಆತನ ಸಹಚರರು ಯುವತಿಯ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದರು, ಜತೆಗೆ ದೂರನ್ನು ಹಿಂಪಡೆಯುವಂತೆಯೂ ಕೇಳಿದ್ದರು, ಆದರೆ ಯುವತಿಯ ಪೋಷಕರು ಅದಕ್ಕೆ ಒಪ್ಪಿರಲಿಲ್ಲ.

ಪವನ್ ಅವರ ಸಹೋದರ ಅಶೋಕ್ ನಿಶಾದ್ ಪ್ರತ್ಯೇಕ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಯುವತಿಯ ಕೊಲೆಗೆ ಎರಡು ದಿನಗಳ ಮೊದಲು ಬಿಡುಗಡೆಗೊಂಡಿದ್ದ. ಇಬ್ಬರೂ ಮಹಿಳೆಯ ಕುಟುಂಬದ ಬಳಿ ಹೋಗಿ ಪ್ರಕರಣ ಮುಚ್ಚಿ ಹಾಕುವಂತೆ ಒತ್ತಾಯಿಸಲಾಗಿತ್ತು. ಆದರೆ ಯುವತಿ ಹಿಂದೆ ಸರಿಯದ ಕಾರಣ ಹೊಲದಲ್ಲಿ ದನವನ್ನು ಮೇಯಿಸಿ ಹಿಂದಿರುಗುತ್ತಿದ್ದಾಗ ಸಹೋದರರು ಹೊಂಚು ಹಾಕಿ ಆಕೆಯನ್ನು ಹತ್ಯೆ ಮಾಡಿದ್ದಾರೆ.

ಮತ್ತಷ್ಟು ಓದಿ: ಮಾತಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ; BBMP ಸಿಬ್ಬಂದಿಯನ್ನು ಕೊಂದ ಸ್ನೇಹಿತ ಅರೆಸ್ಟ್

ಪವನ್ ಮತ್ತು ಅಶೋಕ್ ನಿಶಾದ್ ಈಗ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದೇ ಸಮುದಾಯದ ಎರಡು ಕುಟುಂಬದ ನಡುವೆ ಹಳೆಯ ವೈಷಮ್ಯವಿತ್ತು,ವ್ಯಾಜ್ಯ ನಡೆಯುತ್ತಿತ್ತು. ಮಾಹೆವಾಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ದೇರ್ಹಾ ಗ್ರಾಮದಲ್ಲಿ ಈ ಭೀಕರ ಘಟನೆ ನಡೆದಿದೆ.

ಪೊಲೀಸರು ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ತಂಡಗಳನ್ನು ರಚಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ