Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನಿನ ಮೇಲೆ ಬಿಡುಗಡೆಗೊಂಡು ಅತ್ಯಾಚಾರ ಸಂತ್ರಸ್ತೆಯನ್ನು ಹಾಡ ಹಗಲೇ ಕೊಚ್ಚಿ ಕೊಂದ ಸಹೋದರರು

ಅತ್ಯಾಚಾರದ ಆರೋಪದ ಮೇಲೆ ಜೈಲು ಸೇರಿದ್ದ ಆರೋಪಿ  ಜಾಮೀನಿನ ಮೇಲೆ ಹೊರಬಂದು ಸಹೋದರನೊಂದಿಗೆ ಸೇರಿ ಅತ್ಯಾಚಾರ ಸಂತ್ರಸ್ತೆಯನ್ನು ಹಾಡಹಗಲಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಂತಕರಾದ ಅಶೋಕ್ ಮತ್ತು ಪವನ್ ನಿಶಾದ್ ಕ್ರೂರ ಹತ್ಯೆಯ ಕೆಲವು ದಿನಗಳ ಮೊದಲು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜಾಮೀನಿನ ಮೇಲೆ ಬಿಡುಗಡೆಗೊಂಡು ಅತ್ಯಾಚಾರ ಸಂತ್ರಸ್ತೆಯನ್ನು ಹಾಡ ಹಗಲೇ ಕೊಚ್ಚಿ ಕೊಂದ ಸಹೋದರರು
ಸಾವು
Follow us
ನಯನಾ ರಾಜೀವ್
|

Updated on: Nov 21, 2023 | 12:20 PM

ಅತ್ಯಾಚಾರದ ಆರೋಪದ ಮೇಲೆ ಜೈಲು ಸೇರಿದ್ದ ಆರೋಪಿ  ಜಾಮೀನಿನ ಮೇಲೆ ಹೊರಬಂದು ಸಹೋದರನೊಂದಿಗೆ ಸೇರಿ ಅತ್ಯಾಚಾರ ಸಂತ್ರಸ್ತೆಯನ್ನು ಹಾಡಹಗಲಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಂತಕರಾದ ಅಶೋಕ್ ಮತ್ತು ಪವನ್ ನಿಶಾದ್ ಕ್ರೂರ ಹತ್ಯೆಯ ಕೆಲವು ದಿನಗಳ ಮೊದಲು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಸ್ಥರು ಭಯ ಹಾಗೂ ಅಸಹಾಯಕತೆಯಿಂದ ನೋಡುತ್ತಾ ನಿಂತಿದ್ದರು, ಯುವತಿಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ಪವನ್ ನಿಶಾದ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಯುವತಿ ದೂರು ನೀಡಿದ್ದಳು. ಪವನ್ ನಿಶಾದ್ ಹಾಗೂ ಆತನ ಸಹಚರರು ಯುವತಿಯ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದರು, ಜತೆಗೆ ದೂರನ್ನು ಹಿಂಪಡೆಯುವಂತೆಯೂ ಕೇಳಿದ್ದರು, ಆದರೆ ಯುವತಿಯ ಪೋಷಕರು ಅದಕ್ಕೆ ಒಪ್ಪಿರಲಿಲ್ಲ.

ಪವನ್ ಅವರ ಸಹೋದರ ಅಶೋಕ್ ನಿಶಾದ್ ಪ್ರತ್ಯೇಕ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಯುವತಿಯ ಕೊಲೆಗೆ ಎರಡು ದಿನಗಳ ಮೊದಲು ಬಿಡುಗಡೆಗೊಂಡಿದ್ದ. ಇಬ್ಬರೂ ಮಹಿಳೆಯ ಕುಟುಂಬದ ಬಳಿ ಹೋಗಿ ಪ್ರಕರಣ ಮುಚ್ಚಿ ಹಾಕುವಂತೆ ಒತ್ತಾಯಿಸಲಾಗಿತ್ತು. ಆದರೆ ಯುವತಿ ಹಿಂದೆ ಸರಿಯದ ಕಾರಣ ಹೊಲದಲ್ಲಿ ದನವನ್ನು ಮೇಯಿಸಿ ಹಿಂದಿರುಗುತ್ತಿದ್ದಾಗ ಸಹೋದರರು ಹೊಂಚು ಹಾಕಿ ಆಕೆಯನ್ನು ಹತ್ಯೆ ಮಾಡಿದ್ದಾರೆ.

ಮತ್ತಷ್ಟು ಓದಿ: ಮಾತಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ; BBMP ಸಿಬ್ಬಂದಿಯನ್ನು ಕೊಂದ ಸ್ನೇಹಿತ ಅರೆಸ್ಟ್

ಪವನ್ ಮತ್ತು ಅಶೋಕ್ ನಿಶಾದ್ ಈಗ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದೇ ಸಮುದಾಯದ ಎರಡು ಕುಟುಂಬದ ನಡುವೆ ಹಳೆಯ ವೈಷಮ್ಯವಿತ್ತು,ವ್ಯಾಜ್ಯ ನಡೆಯುತ್ತಿತ್ತು. ಮಾಹೆವಾಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ದೇರ್ಹಾ ಗ್ರಾಮದಲ್ಲಿ ಈ ಭೀಕರ ಘಟನೆ ನಡೆದಿದೆ.

ಪೊಲೀಸರು ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ತಂಡಗಳನ್ನು ರಚಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ