ಜಾಮೀನಿನ ಮೇಲೆ ಬಿಡುಗಡೆಗೊಂಡು ಅತ್ಯಾಚಾರ ಸಂತ್ರಸ್ತೆಯನ್ನು ಹಾಡ ಹಗಲೇ ಕೊಚ್ಚಿ ಕೊಂದ ಸಹೋದರರು

ಅತ್ಯಾಚಾರದ ಆರೋಪದ ಮೇಲೆ ಜೈಲು ಸೇರಿದ್ದ ಆರೋಪಿ  ಜಾಮೀನಿನ ಮೇಲೆ ಹೊರಬಂದು ಸಹೋದರನೊಂದಿಗೆ ಸೇರಿ ಅತ್ಯಾಚಾರ ಸಂತ್ರಸ್ತೆಯನ್ನು ಹಾಡಹಗಲಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಂತಕರಾದ ಅಶೋಕ್ ಮತ್ತು ಪವನ್ ನಿಶಾದ್ ಕ್ರೂರ ಹತ್ಯೆಯ ಕೆಲವು ದಿನಗಳ ಮೊದಲು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜಾಮೀನಿನ ಮೇಲೆ ಬಿಡುಗಡೆಗೊಂಡು ಅತ್ಯಾಚಾರ ಸಂತ್ರಸ್ತೆಯನ್ನು ಹಾಡ ಹಗಲೇ ಕೊಚ್ಚಿ ಕೊಂದ ಸಹೋದರರು
ಸಾವು
Follow us
|

Updated on: Nov 21, 2023 | 12:20 PM

ಅತ್ಯಾಚಾರದ ಆರೋಪದ ಮೇಲೆ ಜೈಲು ಸೇರಿದ್ದ ಆರೋಪಿ  ಜಾಮೀನಿನ ಮೇಲೆ ಹೊರಬಂದು ಸಹೋದರನೊಂದಿಗೆ ಸೇರಿ ಅತ್ಯಾಚಾರ ಸಂತ್ರಸ್ತೆಯನ್ನು ಹಾಡಹಗಲಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಂತಕರಾದ ಅಶೋಕ್ ಮತ್ತು ಪವನ್ ನಿಶಾದ್ ಕ್ರೂರ ಹತ್ಯೆಯ ಕೆಲವು ದಿನಗಳ ಮೊದಲು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಸ್ಥರು ಭಯ ಹಾಗೂ ಅಸಹಾಯಕತೆಯಿಂದ ನೋಡುತ್ತಾ ನಿಂತಿದ್ದರು, ಯುವತಿಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ಪವನ್ ನಿಶಾದ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಯುವತಿ ದೂರು ನೀಡಿದ್ದಳು. ಪವನ್ ನಿಶಾದ್ ಹಾಗೂ ಆತನ ಸಹಚರರು ಯುವತಿಯ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದರು, ಜತೆಗೆ ದೂರನ್ನು ಹಿಂಪಡೆಯುವಂತೆಯೂ ಕೇಳಿದ್ದರು, ಆದರೆ ಯುವತಿಯ ಪೋಷಕರು ಅದಕ್ಕೆ ಒಪ್ಪಿರಲಿಲ್ಲ.

ಪವನ್ ಅವರ ಸಹೋದರ ಅಶೋಕ್ ನಿಶಾದ್ ಪ್ರತ್ಯೇಕ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಯುವತಿಯ ಕೊಲೆಗೆ ಎರಡು ದಿನಗಳ ಮೊದಲು ಬಿಡುಗಡೆಗೊಂಡಿದ್ದ. ಇಬ್ಬರೂ ಮಹಿಳೆಯ ಕುಟುಂಬದ ಬಳಿ ಹೋಗಿ ಪ್ರಕರಣ ಮುಚ್ಚಿ ಹಾಕುವಂತೆ ಒತ್ತಾಯಿಸಲಾಗಿತ್ತು. ಆದರೆ ಯುವತಿ ಹಿಂದೆ ಸರಿಯದ ಕಾರಣ ಹೊಲದಲ್ಲಿ ದನವನ್ನು ಮೇಯಿಸಿ ಹಿಂದಿರುಗುತ್ತಿದ್ದಾಗ ಸಹೋದರರು ಹೊಂಚು ಹಾಕಿ ಆಕೆಯನ್ನು ಹತ್ಯೆ ಮಾಡಿದ್ದಾರೆ.

ಮತ್ತಷ್ಟು ಓದಿ: ಮಾತಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ; BBMP ಸಿಬ್ಬಂದಿಯನ್ನು ಕೊಂದ ಸ್ನೇಹಿತ ಅರೆಸ್ಟ್

ಪವನ್ ಮತ್ತು ಅಶೋಕ್ ನಿಶಾದ್ ಈಗ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದೇ ಸಮುದಾಯದ ಎರಡು ಕುಟುಂಬದ ನಡುವೆ ಹಳೆಯ ವೈಷಮ್ಯವಿತ್ತು,ವ್ಯಾಜ್ಯ ನಡೆಯುತ್ತಿತ್ತು. ಮಾಹೆವಾಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ದೇರ್ಹಾ ಗ್ರಾಮದಲ್ಲಿ ಈ ಭೀಕರ ಘಟನೆ ನಡೆದಿದೆ.

ಪೊಲೀಸರು ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ತಂಡಗಳನ್ನು ರಚಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ