ಜಾಮೀನಿನ ಮೇಲೆ ಬಿಡುಗಡೆಗೊಂಡು ಅತ್ಯಾಚಾರ ಸಂತ್ರಸ್ತೆಯನ್ನು ಹಾಡ ಹಗಲೇ ಕೊಚ್ಚಿ ಕೊಂದ ಸಹೋದರರು

ಅತ್ಯಾಚಾರದ ಆರೋಪದ ಮೇಲೆ ಜೈಲು ಸೇರಿದ್ದ ಆರೋಪಿ  ಜಾಮೀನಿನ ಮೇಲೆ ಹೊರಬಂದು ಸಹೋದರನೊಂದಿಗೆ ಸೇರಿ ಅತ್ಯಾಚಾರ ಸಂತ್ರಸ್ತೆಯನ್ನು ಹಾಡಹಗಲಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಂತಕರಾದ ಅಶೋಕ್ ಮತ್ತು ಪವನ್ ನಿಶಾದ್ ಕ್ರೂರ ಹತ್ಯೆಯ ಕೆಲವು ದಿನಗಳ ಮೊದಲು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜಾಮೀನಿನ ಮೇಲೆ ಬಿಡುಗಡೆಗೊಂಡು ಅತ್ಯಾಚಾರ ಸಂತ್ರಸ್ತೆಯನ್ನು ಹಾಡ ಹಗಲೇ ಕೊಚ್ಚಿ ಕೊಂದ ಸಹೋದರರು
ಸಾವು

Updated on: Nov 21, 2023 | 12:20 PM

ಅತ್ಯಾಚಾರದ ಆರೋಪದ ಮೇಲೆ ಜೈಲು ಸೇರಿದ್ದ ಆರೋಪಿ  ಜಾಮೀನಿನ ಮೇಲೆ ಹೊರಬಂದು ಸಹೋದರನೊಂದಿಗೆ ಸೇರಿ ಅತ್ಯಾಚಾರ ಸಂತ್ರಸ್ತೆಯನ್ನು ಹಾಡಹಗಲಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಂತಕರಾದ ಅಶೋಕ್ ಮತ್ತು ಪವನ್ ನಿಶಾದ್ ಕ್ರೂರ ಹತ್ಯೆಯ ಕೆಲವು ದಿನಗಳ ಮೊದಲು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಸ್ಥರು ಭಯ ಹಾಗೂ ಅಸಹಾಯಕತೆಯಿಂದ ನೋಡುತ್ತಾ ನಿಂತಿದ್ದರು, ಯುವತಿಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ಪವನ್ ನಿಶಾದ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಯುವತಿ ದೂರು ನೀಡಿದ್ದಳು. ಪವನ್ ನಿಶಾದ್ ಹಾಗೂ ಆತನ ಸಹಚರರು ಯುವತಿಯ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದರು, ಜತೆಗೆ ದೂರನ್ನು ಹಿಂಪಡೆಯುವಂತೆಯೂ ಕೇಳಿದ್ದರು, ಆದರೆ ಯುವತಿಯ ಪೋಷಕರು ಅದಕ್ಕೆ ಒಪ್ಪಿರಲಿಲ್ಲ.

ಪವನ್ ಅವರ ಸಹೋದರ ಅಶೋಕ್ ನಿಶಾದ್ ಪ್ರತ್ಯೇಕ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಯುವತಿಯ ಕೊಲೆಗೆ ಎರಡು ದಿನಗಳ ಮೊದಲು ಬಿಡುಗಡೆಗೊಂಡಿದ್ದ. ಇಬ್ಬರೂ ಮಹಿಳೆಯ ಕುಟುಂಬದ ಬಳಿ ಹೋಗಿ ಪ್ರಕರಣ ಮುಚ್ಚಿ ಹಾಕುವಂತೆ ಒತ್ತಾಯಿಸಲಾಗಿತ್ತು. ಆದರೆ ಯುವತಿ ಹಿಂದೆ ಸರಿಯದ ಕಾರಣ ಹೊಲದಲ್ಲಿ ದನವನ್ನು ಮೇಯಿಸಿ ಹಿಂದಿರುಗುತ್ತಿದ್ದಾಗ ಸಹೋದರರು ಹೊಂಚು ಹಾಕಿ ಆಕೆಯನ್ನು ಹತ್ಯೆ ಮಾಡಿದ್ದಾರೆ.

ಮತ್ತಷ್ಟು ಓದಿ: ಮಾತಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ; BBMP ಸಿಬ್ಬಂದಿಯನ್ನು ಕೊಂದ ಸ್ನೇಹಿತ ಅರೆಸ್ಟ್

ಪವನ್ ಮತ್ತು ಅಶೋಕ್ ನಿಶಾದ್ ಈಗ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದೇ ಸಮುದಾಯದ ಎರಡು ಕುಟುಂಬದ ನಡುವೆ ಹಳೆಯ ವೈಷಮ್ಯವಿತ್ತು,ವ್ಯಾಜ್ಯ ನಡೆಯುತ್ತಿತ್ತು. ಮಾಹೆವಾಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ದೇರ್ಹಾ ಗ್ರಾಮದಲ್ಲಿ ಈ ಭೀಕರ ಘಟನೆ ನಡೆದಿದೆ.

ಪೊಲೀಸರು ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ತಂಡಗಳನ್ನು ರಚಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us