AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ತಂದೆಯ ಸ್ನೇಹಿತರಿಂದ ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರ, ಗರ್ಭಿಣಿಯಾದ ಇಬ್ಬರು ಬಾಲಕಿಯರು

ತಂದೆಯ ಸ್ನೇಹಿತರು ಇಬ್ಬರು ಹದಿಹರೆಯದ ಸಹೋದರಿಯರ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ (Rajasthan) ಅಲ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ.

ರಾಜಸ್ಥಾನದಲ್ಲಿ ತಂದೆಯ ಸ್ನೇಹಿತರಿಂದ ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರ, ಗರ್ಭಿಣಿಯಾದ ಇಬ್ಬರು ಬಾಲಕಿಯರು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 31, 2023 | 2:05 PM

Share

ಜೈಪುರ, ಜು.31: ತಂದೆಯ ಸ್ನೇಹಿತರು ಇಬ್ಬರು ಹದಿಹರೆಯದ ಸಹೋದರಿಯರ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ (Rajasthan) ಅಲ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ, ಈ ಬಗ್ಗೆ ಎನ್‌ಇಬಿ ಪೊಲೀಸ್ ಠಾಣೆಯಲ್ಲಿ ತಂದೆ ದೂರು ನೀಡಿದ್ದು, ಇದೀಗ ಇಬ್ಬರೂ ಹುಡುಗಿಯರು ಗರ್ಭಿಣಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ತಂದೆ ನೀಡಿರುವ ದೂರಿನ ಪ್ರಕಾರ ತನ್ನ 15 ಮತ್ತು 13 ವರ್ಷದ ಪುತ್ರಿಯರ ಮೇಲೆ  ಸ್ನೇಹಿತರಾದ ಸಪ್ಪಿ ಮತ್ತು ಸುಭಾನ್ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಹಿರಿಯ ಮಗಳು ಹೊಟ್ಟೆ ನೋವು ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದಳು, ಪೋಷಕರು ಆಕೆಯನ್ನು ತಕ್ಷಣ ವೈದ್ಯರ ಬಳಿಗೆ ಕರೆದುಕೊಂಡು ಹೋಗಿದ್ದಾರೆ. ಈ ಸಮಯದಲ್ಲಿ ಗರ್ಭಿಣಿ ಎಂಬ ವಿಷಯ ಬೆಳಕಿಗೆ ಬಂದಿದೆ. ಇದೀಗ ಆಕೆ ಏಳೂವರೆ ತಿಂಗಳ ಗರ್ಭಿಣಿ ಎಂದು ಆಕೆಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

ಈ ಬಗ್ಗೆ ತಂದೆ ದೊಡ್ಡ ಮಗಳನ್ನು ಪ್ರಶ್ನಿಸಿದಾಗ ಸಪ್ಪಿ ಮತ್ತು ಸುಭಾನ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ತಿಳಿಸಿದ್ದಾಳೆ. ಇದರ ಜತೆಗೆ ತಂಗಿಯ ಮೇಲೆಯೂ ಅತ್ಯಾಚಾರವೆಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇನ್ನು ಈ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬಾಲಕಿಗೆ ಬೆದರಿಕೆ ಹಾಕಿದ್ದರು ಎಂದು ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: 6 ತಿಂಗಳ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಶುಕ್ರವಾರ ಎನ್‌ಇಬಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಬಾಲಕಿಯರ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ (ಅಲ್ವಾರ್) ಆನಂದ್ ಶರ್ಮಾ ತಿಳಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿಯರಿಬ್ಬರೂ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.

ಕಿರಿಯ ಬಾಲಕಿ ಎರಡೂವರೆ ತಿಂಗಳ ಗರ್ಭಿಣಿ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಎನ್‌ಇಬಿ ಎಸ್‌ಎಚ್‌ಒ ಅನಿಲ್ ಜೈನ್ ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಯಾರು ಬಂಧನವಾಗಿಲ್ಲ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:18 pm, Mon, 31 July 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ