AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ತಂದೆಯ ಸ್ನೇಹಿತರಿಂದ ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರ, ಗರ್ಭಿಣಿಯಾದ ಇಬ್ಬರು ಬಾಲಕಿಯರು

ತಂದೆಯ ಸ್ನೇಹಿತರು ಇಬ್ಬರು ಹದಿಹರೆಯದ ಸಹೋದರಿಯರ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ (Rajasthan) ಅಲ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ.

ರಾಜಸ್ಥಾನದಲ್ಲಿ ತಂದೆಯ ಸ್ನೇಹಿತರಿಂದ ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರ, ಗರ್ಭಿಣಿಯಾದ ಇಬ್ಬರು ಬಾಲಕಿಯರು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 31, 2023 | 2:05 PM

Share

ಜೈಪುರ, ಜು.31: ತಂದೆಯ ಸ್ನೇಹಿತರು ಇಬ್ಬರು ಹದಿಹರೆಯದ ಸಹೋದರಿಯರ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ (Rajasthan) ಅಲ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ, ಈ ಬಗ್ಗೆ ಎನ್‌ಇಬಿ ಪೊಲೀಸ್ ಠಾಣೆಯಲ್ಲಿ ತಂದೆ ದೂರು ನೀಡಿದ್ದು, ಇದೀಗ ಇಬ್ಬರೂ ಹುಡುಗಿಯರು ಗರ್ಭಿಣಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ತಂದೆ ನೀಡಿರುವ ದೂರಿನ ಪ್ರಕಾರ ತನ್ನ 15 ಮತ್ತು 13 ವರ್ಷದ ಪುತ್ರಿಯರ ಮೇಲೆ  ಸ್ನೇಹಿತರಾದ ಸಪ್ಪಿ ಮತ್ತು ಸುಭಾನ್ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಹಿರಿಯ ಮಗಳು ಹೊಟ್ಟೆ ನೋವು ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದಳು, ಪೋಷಕರು ಆಕೆಯನ್ನು ತಕ್ಷಣ ವೈದ್ಯರ ಬಳಿಗೆ ಕರೆದುಕೊಂಡು ಹೋಗಿದ್ದಾರೆ. ಈ ಸಮಯದಲ್ಲಿ ಗರ್ಭಿಣಿ ಎಂಬ ವಿಷಯ ಬೆಳಕಿಗೆ ಬಂದಿದೆ. ಇದೀಗ ಆಕೆ ಏಳೂವರೆ ತಿಂಗಳ ಗರ್ಭಿಣಿ ಎಂದು ಆಕೆಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

ಈ ಬಗ್ಗೆ ತಂದೆ ದೊಡ್ಡ ಮಗಳನ್ನು ಪ್ರಶ್ನಿಸಿದಾಗ ಸಪ್ಪಿ ಮತ್ತು ಸುಭಾನ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ತಿಳಿಸಿದ್ದಾಳೆ. ಇದರ ಜತೆಗೆ ತಂಗಿಯ ಮೇಲೆಯೂ ಅತ್ಯಾಚಾರವೆಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇನ್ನು ಈ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬಾಲಕಿಗೆ ಬೆದರಿಕೆ ಹಾಕಿದ್ದರು ಎಂದು ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: 6 ತಿಂಗಳ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಶುಕ್ರವಾರ ಎನ್‌ಇಬಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಬಾಲಕಿಯರ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ (ಅಲ್ವಾರ್) ಆನಂದ್ ಶರ್ಮಾ ತಿಳಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿಯರಿಬ್ಬರೂ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.

ಕಿರಿಯ ಬಾಲಕಿ ಎರಡೂವರೆ ತಿಂಗಳ ಗರ್ಭಿಣಿ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಎನ್‌ಇಬಿ ಎಸ್‌ಎಚ್‌ಒ ಅನಿಲ್ ಜೈನ್ ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಯಾರು ಬಂಧನವಾಗಿಲ್ಲ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:18 pm, Mon, 31 July 23

Follow Us
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ