AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ತಂದೆಯ ಸ್ನೇಹಿತರಿಂದ ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರ, ಗರ್ಭಿಣಿಯಾದ ಇಬ್ಬರು ಬಾಲಕಿಯರು

ತಂದೆಯ ಸ್ನೇಹಿತರು ಇಬ್ಬರು ಹದಿಹರೆಯದ ಸಹೋದರಿಯರ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ (Rajasthan) ಅಲ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ.

ರಾಜಸ್ಥಾನದಲ್ಲಿ ತಂದೆಯ ಸ್ನೇಹಿತರಿಂದ ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರ, ಗರ್ಭಿಣಿಯಾದ ಇಬ್ಬರು ಬಾಲಕಿಯರು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 31, 2023 | 2:05 PM

Share

ಜೈಪುರ, ಜು.31: ತಂದೆಯ ಸ್ನೇಹಿತರು ಇಬ್ಬರು ಹದಿಹರೆಯದ ಸಹೋದರಿಯರ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ (Rajasthan) ಅಲ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ, ಈ ಬಗ್ಗೆ ಎನ್‌ಇಬಿ ಪೊಲೀಸ್ ಠಾಣೆಯಲ್ಲಿ ತಂದೆ ದೂರು ನೀಡಿದ್ದು, ಇದೀಗ ಇಬ್ಬರೂ ಹುಡುಗಿಯರು ಗರ್ಭಿಣಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ತಂದೆ ನೀಡಿರುವ ದೂರಿನ ಪ್ರಕಾರ ತನ್ನ 15 ಮತ್ತು 13 ವರ್ಷದ ಪುತ್ರಿಯರ ಮೇಲೆ  ಸ್ನೇಹಿತರಾದ ಸಪ್ಪಿ ಮತ್ತು ಸುಭಾನ್ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಹಿರಿಯ ಮಗಳು ಹೊಟ್ಟೆ ನೋವು ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದಳು, ಪೋಷಕರು ಆಕೆಯನ್ನು ತಕ್ಷಣ ವೈದ್ಯರ ಬಳಿಗೆ ಕರೆದುಕೊಂಡು ಹೋಗಿದ್ದಾರೆ. ಈ ಸಮಯದಲ್ಲಿ ಗರ್ಭಿಣಿ ಎಂಬ ವಿಷಯ ಬೆಳಕಿಗೆ ಬಂದಿದೆ. ಇದೀಗ ಆಕೆ ಏಳೂವರೆ ತಿಂಗಳ ಗರ್ಭಿಣಿ ಎಂದು ಆಕೆಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

ಈ ಬಗ್ಗೆ ತಂದೆ ದೊಡ್ಡ ಮಗಳನ್ನು ಪ್ರಶ್ನಿಸಿದಾಗ ಸಪ್ಪಿ ಮತ್ತು ಸುಭಾನ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ತಿಳಿಸಿದ್ದಾಳೆ. ಇದರ ಜತೆಗೆ ತಂಗಿಯ ಮೇಲೆಯೂ ಅತ್ಯಾಚಾರವೆಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇನ್ನು ಈ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬಾಲಕಿಗೆ ಬೆದರಿಕೆ ಹಾಕಿದ್ದರು ಎಂದು ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: 6 ತಿಂಗಳ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಶುಕ್ರವಾರ ಎನ್‌ಇಬಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಬಾಲಕಿಯರ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ (ಅಲ್ವಾರ್) ಆನಂದ್ ಶರ್ಮಾ ತಿಳಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿಯರಿಬ್ಬರೂ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.

ಕಿರಿಯ ಬಾಲಕಿ ಎರಡೂವರೆ ತಿಂಗಳ ಗರ್ಭಿಣಿ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಎನ್‌ಇಬಿ ಎಸ್‌ಎಚ್‌ಒ ಅನಿಲ್ ಜೈನ್ ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಯಾರು ಬಂಧನವಾಗಿಲ್ಲ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:18 pm, Mon, 31 July 23

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ