AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ಕಳಿಸಿ ಹಿರಿಯ ಪೊಲೀಸ್ ಅಧಿಕಾರಿಗೇ ಬ್ಲ್ಯಾಕ್ ಮೇಲ್! ಆಮೇಲೇನಾಯ್ತು?

ಕಿಡಿಗೇಡಿಗಳು ಮುಂದೆ ಎಸಿಪಿ ಮೊಬೈಲ್‌ಗೆ ವಿಡಿಯೋ ಕಾಲ್ ಮಾಡಿದ್ದಾರೆ. ಎಸಿಪಿ ಕುತೂಹಲದಿಂದ ವಿಡಿಯೋ ಕರೆ ಸ್ವೀಕರಿಸಿದಾಗ ಯುವತಿಯೊಬ್ಬಳು ಮಾತನಾಡಿದ್ದಳು. ಮತ್ತು ಆ ಯುವತಿ ನಗ್ನಳಾಗಿ ತನ್ನ ದೇಹ ಪ್ರದರ್ಶಿಸಿದ್ದಳು.

ಅಶ್ಲೀಲ ವಿಡಿಯೋ ಕಳಿಸಿ ಹಿರಿಯ ಪೊಲೀಸ್ ಅಧಿಕಾರಿಗೇ ಬ್ಲ್ಯಾಕ್ ಮೇಲ್! ಆಮೇಲೇನಾಯ್ತು?
ಅಶ್ಲೀಲ ವಿಡಿಯೋ ಕಳಿಸಿ ಹಿರಿಯ ಪೊಲೀಸ್ ಅಧಿಕಾರಿಗೇ ಬ್ಲ್ಯಾಕ್ ಮೇಲ್! ಆಮೇಲೇನಾಯ್ತು?
TV9 Web
| Edited By: ಸಾಧು ಶ್ರೀನಾಥ್​|

Updated on:Sep 20, 2022 | 9:11 PM

Share

ಬೆಂಗಳೂರು: ಅಶ್ಲೀಲ ವಿಡಿಯೋ ಕಳಿಸಿ ಪೊಲೀಸ್ ಅಧಿಕಾರಿಗೆ ಬ್ಲ್ಯಾಕ್ ಮೇಲ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸೈಬರ್ ವಂಚಕರಿಂದ ವಿಐಪಿ ಸೆಕ್ಯೂರಿಟಿ ಎಸಿಪಿಗೆ ಬ್ಲ್ಯಾಕ್ ಮೇಲ್ ಮಾಡಿರುವ ಪ್ರಕರಣ ಇದಾಗಿದೆ. ವಂಚಕರು ಮೊದಮೊದಲು ವಾಟ್ಸಪ್ ಮೂಲಕ ಹಾಯ್, ಹಲೋ ಅಂತ ಮೇಸೆಜ್ ಕಳಿಸಿದ್ದರು. ವಂಚಕರ ಆ ಮೊಬೈಲ್‌ ಸಂಖ್ಯೆಯಿದ್ದ ವಾಟ್ಸ್ಯಾಪ್‌ ಡಿಸ್​ಪ್ಲೇ ಇಮೇಜ್​ಗೆ ಹುಡುಗಿಯ ಫೋಟೋ ಹಾಕಲಾಗಿತ್ತು. ಡಿಪಿ ಪೋಟೋ ಎಸಿಪಿಗೆ ಸಂಬಂಧಿಯಾಗಿರುವ ಯುವತಿಯೊಬ್ಬರ ಮುಖಚರ್ಯೆಗೆ ಹೋಲುವಂತಿತ್ತು. ಹೀಗಾಗಿ ಯಾವುದೇ ಅನುಮಾನಪಡದೆ ಸಂತ್ರಸ್ತ ಎಸಿಪಿ, ವಾಟ್ಸ್ಯಾಪ್‌ ಸಂದೇಶಕ್ಕೆ ಪ್ರತಿಕ್ರಿಯಿಸಿಬಿಟ್ಟಿದ್ದಾರೆ.

‘ಹೊಸ ಸಿಮ್‌ ಕಾರ್ಡ್‌ ತೆಗೆದುಕೊಂಡಿದ್ದೀರಾ?’ ಎಂದು ತಮ್ಮ ಸಂಬಂಧಿ ಯುವತಿಯನ್ನು ಎಸಿಪಿ ಪ್ರಶ್ನಿಸಿದ್ದಾರೆ. ಅದಾದ ಮೆಲೆ ವಂಚಕರು ಎಸಿಪಿಯ ಮೊಬೈಲ್‌ಗೆ ನಿರಂತರವಾಗಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ಕಿಡಿಗೇಡಿಗಳು ಮುಂದೆ ಎಸಿಪಿ ಮೊಬೈಲ್‌ಗೆ ವಿಡಿಯೋ ಕಾಲ್ ಮಾಡಿದ್ದಾರೆ. ಎಸಿಪಿ ಕುತೂಹಲದಿಂದ ವಿಡಿಯೋ ಕರೆ ಸ್ವೀಕರಿಸಿದಾಗ ಯುವತಿಯೊಬ್ಬಳು ಮಾತನಾಡಿದ್ದಳು. ಆ ಯುವತಿ ನಗ್ನಳಾಗಿ ತನ್ನ ದೇಹ ಪ್ರದರ್ಶಿಸಿದ್ದಳು. ಇದರಿಂದ ಗಾಬರಿಯಾದ ಎಸಿಪಿ ಕಾಲ್ ಕಟ್ ಮಾಡಿದ್ದಾರೆ.

ಇಷ್ಟೆಲ್ಲಾ ಆದ ಮೆಲೆ, ನಗ್ನ ಯುವತಿಯ ಜತೆ ವಿಡಿಯೋ ಕರೆಯಲ್ಲಿ ಸಂಭಾಷಣೆ ನಡೆಸಿರುವ ದೃಶ್ಯಾವಳಿಯನ್ನು ಚಿತ್ರೀಕರಿಸಿಕೊಂಡಿದ್ದೇವೆ. ಆ ವಿಡಿಯೋ ಫೇಸ್‌ಬುಕ್‌, ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುತ್ತೇವೆ ಎಂದು ಕಿರಾತಕರು ಬೆದರಿಕೆ ಹಾಕಿದ್ದಾರೆ. ಬಳಿಕ, ತಾವು ಪೊಲೀಸ್ ಎಂದೂ ಹೇಳಿಕೊಂಡು ಬೆದರಿಕೆ ಹಾಕಿದ್ದರು ಅದೇ ಕಿಡಿಗೇಡಿಗಳು! ಸೈಬರ್ ಖದೀಮರ ಕಿರುಕುಳ ತಾಳಲಾರದೇ ಕೊನೆಗೆ ಕೇಂದ್ರ ವಿಭಾಗದ ಸಿಇಎನ್ ಠಾಣೆಗೆ ಬಾಧಿತ ಎಸಿಪಿ ದೂರು ನೀಡಿದ್ದಾರೆ. ಸೆಂಟ್ರಲ್ ಸಿಇಎನ್ ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕೆಎಸ್ ಆರ್ ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು:

ನೆಲಮಂಗಲ: ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಹಿಂಬದಿಯಿಂದ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾರೆ. ನಾಗಸಂದ್ರ ಮೆಟ್ರೋ ಸಮೀಪದ ನವಯುಗ ಟೋಲ್ ಬಳಿ‌ ಘಟನೆ ನಡೆದಿದೆ. ಚಿಕ್ಕಬಾಣವರ ನಿವಾಸಿ ಚೇತನ್ ಗೌಡ (25) ಮೃತ ದುರ್ದೈವಿ.

ಬೈಕ್ ಗಳ ನಡುವೆ ಡಿಕ್ಕಿಯಾದ ಬಳಿಕ ರಸ್ತೆ ಬಲ ಬದಿಗೆ ಬಿದ್ದ ಕಾರಣ ಸವಾರನ ಮೇಲೆ ಬಸ್ ಹರಿದಿದೆ. ಬಸ್ ಮಂಗಳೂರಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿತ್ತು. ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:56 pm, Tue, 20 September 22

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು