AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಮನೆಗೆ ನುಗ್ಗಿ ವೃದ್ಧೆಯ ಹತ್ಯೆ ಮಾಡಿ, ಚಿನ್ನಾಭರಣ ಕಳ್ಳತನ: ಪರಿಚಿತರ ಕೈವಾಡ ಶಂಕೆ

ಬೆಂಗಳೂರು: ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧೆಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಕಾಡುಗೋಡಿಯ ಚೆನ್ನಸಂದ್ರ ಬಳಿ ನಡೆದಿದೆ. ಜಯಮ್ಮ(70) ಕೊಲೆಯಾದ ವೃದ್ಧೆ. ದುಷ್ಕರ್ಮಿಗಳು ವೃದ್ಧೆ ಜಯಮ್ಮನನ್ನು ಕೊಲೆ ಮಾಡಿ 45 ಲಕ್ಷ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಇದೇ ಆಗಸ್ಟ್ 12 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವೃದ್ಧೆ ಜಯಮ್ಮ ಅವರ ಪತಿ ಅಪ್ಪಯ್ಯಣ್ಣ ವಿದ್ಯುತ್ ಬಿಲ್ ಪಾವತಿಸಲು ಇಮ್ಮಡಿಹಳ್ಳಿಯ ಬೆಸ್ಕಾಂ ಕಚೇರಿಗೆ ತೆರಳಿದ್ದರು‌. ವಿದ್ಯುತ್ ಬಿಲ್ ಪಾವತಿಸಿ ಅಣ್ಣಯ್ಯಪ್ಪ […]

ಹಾಡಹಗಲೇ ಮನೆಗೆ ನುಗ್ಗಿ ವೃದ್ಧೆಯ ಹತ್ಯೆ ಮಾಡಿ, ಚಿನ್ನಾಭರಣ ಕಳ್ಳತನ: ಪರಿಚಿತರ ಕೈವಾಡ ಶಂಕೆ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Aug 17, 2020 | 2:01 PM

Share

ಬೆಂಗಳೂರು: ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧೆಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಕಾಡುಗೋಡಿಯ ಚೆನ್ನಸಂದ್ರ ಬಳಿ ನಡೆದಿದೆ. ಜಯಮ್ಮ(70) ಕೊಲೆಯಾದ ವೃದ್ಧೆ.

ದುಷ್ಕರ್ಮಿಗಳು ವೃದ್ಧೆ ಜಯಮ್ಮನನ್ನು ಕೊಲೆ ಮಾಡಿ 45 ಲಕ್ಷ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಇದೇ ಆಗಸ್ಟ್ 12 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವೃದ್ಧೆ ಜಯಮ್ಮ ಅವರ ಪತಿ ಅಪ್ಪಯ್ಯಣ್ಣ ವಿದ್ಯುತ್ ಬಿಲ್ ಪಾವತಿಸಲು ಇಮ್ಮಡಿಹಳ್ಳಿಯ ಬೆಸ್ಕಾಂ ಕಚೇರಿಗೆ ತೆರಳಿದ್ದರು‌. ವಿದ್ಯುತ್ ಬಿಲ್ ಪಾವತಿಸಿ ಅಣ್ಣಯ್ಯಪ್ಪ ತನ್ನ ಸ್ನೇಹಿತರ ಜೊತೆ ಮಾತನಾಡುತ್ತ ನಿಂತರು. ಬಳಿಕ ಅಪ್ಪಯ್ಯಣ್ಣ ಮಧ್ಯಾಹ್ನ 1 ಗಂಟೆಗೆ ಮನೆಗೆ ವಾಪಸ್ ಬಂದ ವೇಳೆ ಪತ್ನಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಗೊತ್ತಾಗಿದೆ.

ಅಪ್ಪಯ್ಯಣ್ಣ ಬಾಗಿಲು ತೆರೆದು ಒಳಗೆ ಹೋದ ವೇಳೆ ಪಡಸಾಲೆಯಲ್ಲಿ ಜಯಮ್ಮ ಬಿದ್ದಿದ್ದರು. ಅಗಾಂತವಾಗಿ ಬಿದ್ದಿದ್ದ ಪತ್ನಿಯನ್ನ ಎಬ್ಬಿಸಲು ಹೋದ ವೇಳೆ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿರುವುದು ಗೊತ್ತಾಗಿದೆ. ಬಳಿಕ ಮಂಚದ ಕೆಳಗೆ ಇಟ್ಟಿದ್ದ ಟ್ರಂಕ್​ನಲ್ಲಿದ್ದ 45 ಲಕ್ಷ ನಗದು, ಕೊಲೆಯಾದ ಜಯಮ್ಮ ಕುತ್ತಿಗೆಯಲ್ಲಿದ್ದ 30 ಗ್ರಾಂ ಚಿನ್ನದ ಸರ, 8 ಗ್ರಾಂ ತೂಕವಿದ್ದ 2 ಉಂಗುರ, 50 ಗ್ರಾಂ ಚಿನ್ನದ ಬ್ರೇಸ್ಲೆಟ್ ಕಳ್ಳತನ ಮಾಡಲಾಗಿದೆ. ವೃದ್ಧೆ ಮಹಿಳೆಯ ಪತಿ ಅಣ್ಣಯ್ಯಪ್ಪ ಕಾಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿ ಕೇಸ್ ದಾಖಲಿಸಿದ್ದಾರೆ. ಪೊಲೀಸರು ಸಿಸಿ ಕ್ಯಾಮರಾ ದೃಶ್ಯಗಳನ್ನು ವಶಕ್ಕೆ ಪಡೆದು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Published On - 12:56 pm, Mon, 17 August 20

Follow Us
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ