AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಮನೆಗೆ ನುಗ್ಗಿ ವೃದ್ಧೆಯ ಹತ್ಯೆ ಮಾಡಿ, ಚಿನ್ನಾಭರಣ ಕಳ್ಳತನ: ಪರಿಚಿತರ ಕೈವಾಡ ಶಂಕೆ

ಬೆಂಗಳೂರು: ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧೆಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಕಾಡುಗೋಡಿಯ ಚೆನ್ನಸಂದ್ರ ಬಳಿ ನಡೆದಿದೆ. ಜಯಮ್ಮ(70) ಕೊಲೆಯಾದ ವೃದ್ಧೆ. ದುಷ್ಕರ್ಮಿಗಳು ವೃದ್ಧೆ ಜಯಮ್ಮನನ್ನು ಕೊಲೆ ಮಾಡಿ 45 ಲಕ್ಷ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಇದೇ ಆಗಸ್ಟ್ 12 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವೃದ್ಧೆ ಜಯಮ್ಮ ಅವರ ಪತಿ ಅಪ್ಪಯ್ಯಣ್ಣ ವಿದ್ಯುತ್ ಬಿಲ್ ಪಾವತಿಸಲು ಇಮ್ಮಡಿಹಳ್ಳಿಯ ಬೆಸ್ಕಾಂ ಕಚೇರಿಗೆ ತೆರಳಿದ್ದರು‌. ವಿದ್ಯುತ್ ಬಿಲ್ ಪಾವತಿಸಿ ಅಣ್ಣಯ್ಯಪ್ಪ […]

ಹಾಡಹಗಲೇ ಮನೆಗೆ ನುಗ್ಗಿ ವೃದ್ಧೆಯ ಹತ್ಯೆ ಮಾಡಿ, ಚಿನ್ನಾಭರಣ ಕಳ್ಳತನ: ಪರಿಚಿತರ ಕೈವಾಡ ಶಂಕೆ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Aug 17, 2020 | 2:01 PM

Share

ಬೆಂಗಳೂರು: ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧೆಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಕಾಡುಗೋಡಿಯ ಚೆನ್ನಸಂದ್ರ ಬಳಿ ನಡೆದಿದೆ. ಜಯಮ್ಮ(70) ಕೊಲೆಯಾದ ವೃದ್ಧೆ.

ದುಷ್ಕರ್ಮಿಗಳು ವೃದ್ಧೆ ಜಯಮ್ಮನನ್ನು ಕೊಲೆ ಮಾಡಿ 45 ಲಕ್ಷ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಇದೇ ಆಗಸ್ಟ್ 12 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವೃದ್ಧೆ ಜಯಮ್ಮ ಅವರ ಪತಿ ಅಪ್ಪಯ್ಯಣ್ಣ ವಿದ್ಯುತ್ ಬಿಲ್ ಪಾವತಿಸಲು ಇಮ್ಮಡಿಹಳ್ಳಿಯ ಬೆಸ್ಕಾಂ ಕಚೇರಿಗೆ ತೆರಳಿದ್ದರು‌. ವಿದ್ಯುತ್ ಬಿಲ್ ಪಾವತಿಸಿ ಅಣ್ಣಯ್ಯಪ್ಪ ತನ್ನ ಸ್ನೇಹಿತರ ಜೊತೆ ಮಾತನಾಡುತ್ತ ನಿಂತರು. ಬಳಿಕ ಅಪ್ಪಯ್ಯಣ್ಣ ಮಧ್ಯಾಹ್ನ 1 ಗಂಟೆಗೆ ಮನೆಗೆ ವಾಪಸ್ ಬಂದ ವೇಳೆ ಪತ್ನಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಗೊತ್ತಾಗಿದೆ.

ಅಪ್ಪಯ್ಯಣ್ಣ ಬಾಗಿಲು ತೆರೆದು ಒಳಗೆ ಹೋದ ವೇಳೆ ಪಡಸಾಲೆಯಲ್ಲಿ ಜಯಮ್ಮ ಬಿದ್ದಿದ್ದರು. ಅಗಾಂತವಾಗಿ ಬಿದ್ದಿದ್ದ ಪತ್ನಿಯನ್ನ ಎಬ್ಬಿಸಲು ಹೋದ ವೇಳೆ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿರುವುದು ಗೊತ್ತಾಗಿದೆ. ಬಳಿಕ ಮಂಚದ ಕೆಳಗೆ ಇಟ್ಟಿದ್ದ ಟ್ರಂಕ್​ನಲ್ಲಿದ್ದ 45 ಲಕ್ಷ ನಗದು, ಕೊಲೆಯಾದ ಜಯಮ್ಮ ಕುತ್ತಿಗೆಯಲ್ಲಿದ್ದ 30 ಗ್ರಾಂ ಚಿನ್ನದ ಸರ, 8 ಗ್ರಾಂ ತೂಕವಿದ್ದ 2 ಉಂಗುರ, 50 ಗ್ರಾಂ ಚಿನ್ನದ ಬ್ರೇಸ್ಲೆಟ್ ಕಳ್ಳತನ ಮಾಡಲಾಗಿದೆ. ವೃದ್ಧೆ ಮಹಿಳೆಯ ಪತಿ ಅಣ್ಣಯ್ಯಪ್ಪ ಕಾಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿ ಕೇಸ್ ದಾಖಲಿಸಿದ್ದಾರೆ. ಪೊಲೀಸರು ಸಿಸಿ ಕ್ಯಾಮರಾ ದೃಶ್ಯಗಳನ್ನು ವಶಕ್ಕೆ ಪಡೆದು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Published On - 12:56 pm, Mon, 17 August 20

Follow Us
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್