ಚಾಕು ಇರಿದು ಪೊಲೀಸ್ ಮಾಹಿತಿದಾರನ ಬರ್ಬರ ಕೊಲೆ

ಬೆಂಗಳೂರು: ಕ್ಷುಲ್ಲಕ ಕಾಣಕ್ಕೆ ಯುವಕನೊಬ್ಬನಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದು ಭೀಕರವಾಗಿ ಹತ್ಯೆ ನಡೆಸಿರುವ ಘಟನೆ ಕುವೆಂಪು ನಗರದಲ್ಲಿ ನಡೆದಿದೆ. ಪ್ರಭುಅಲಿಯಾಸ್ ಅಪ್ಪು ಕೊಲೆಯಾದ ಯುವಕ. 25ವರ್ಷದ ಪ್ರಭು ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿರುವಾಗ ಅಟ್ಯಾಕ್ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಬಂದಂತೆ ಇರಿದು ಎಸ್ಕೇಪ್ ಆಗಿದ್ದಾರೆ. ಕೊಲೆಯಾಗಿರುವ ಪ್ರಭು ತಾನು ಮಾಡುವ ಕೆಲಸದ ಜತೆಗೆ ಪೊಲೀಸ್ ಇನ್ಫಾರ್ಮರ್ ಆಗಿ ಕೆಲಸ ಮಾಡಿಕೊಂಡಿದ್ದ. ಕಮಲ ನಗರ, ಕುವೆಂಪು ನಗರದ ಸುತ್ತಮತ್ತ […]

ಚಾಕು ಇರಿದು ಪೊಲೀಸ್ ಮಾಹಿತಿದಾರನ ಬರ್ಬರ ಕೊಲೆ
ಸಾಧು ಶ್ರೀನಾಥ್​

Updated on: Jan 26, 2020 | 11:26 AM

ಬೆಂಗಳೂರು: ಕ್ಷುಲ್ಲಕ ಕಾಣಕ್ಕೆ ಯುವಕನೊಬ್ಬನಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದು ಭೀಕರವಾಗಿ ಹತ್ಯೆ ನಡೆಸಿರುವ ಘಟನೆ ಕುವೆಂಪು ನಗರದಲ್ಲಿ ನಡೆದಿದೆ. ಪ್ರಭುಅಲಿಯಾಸ್ ಅಪ್ಪು ಕೊಲೆಯಾದ ಯುವಕ. 25ವರ್ಷದ ಪ್ರಭು ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ.

ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿರುವಾಗ ಅಟ್ಯಾಕ್ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಬಂದಂತೆ ಇರಿದು ಎಸ್ಕೇಪ್ ಆಗಿದ್ದಾರೆ. ಕೊಲೆಯಾಗಿರುವ ಪ್ರಭು ತಾನು ಮಾಡುವ ಕೆಲಸದ ಜತೆಗೆ ಪೊಲೀಸ್ ಇನ್ಫಾರ್ಮರ್ ಆಗಿ ಕೆಲಸ ಮಾಡಿಕೊಂಡಿದ್ದ. ಕಮಲ ನಗರ, ಕುವೆಂಪು ನಗರದ ಸುತ್ತಮತ್ತ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ಸ್ಥಳೀಯ ಪೊಲೀಸ್ರಿಗೆ ಮಾಹಿತಿ ನೀಡುತ್ತಿದ್ದ.

ಒಂದೆರಡು ಭಾರಿ ದರೋಡೆ ಮಾಡಿದ್ದ ದರೋಡೆಕೊರರ ಬಗ್ಗೆ ಪೊಲೀಸ್ರಿಗೆ ಮಾಹಿತಿ ನೀಡಿ ರೆಡ್‌ಹ್ಯಾಂಡ್ ಆಗಿ ಹಿಡಿಸಿದ್ದ ಎನ್ನಲಾಗಿದೆ. ಕಳ್ಳರ, ದರೋಡೆಕೊರರ ಬಗ್ಗೆ ಪೊಲೀಸ್ರಿಗೆ ಮಾಹಿತಿ ನೀಡುತ್ತಿದ್ದ ವಿಚಾರವೇ ಜೀವಕ್ಕೆ ಸಂಚಾರ ತಂದಿಡ್ತಾ ಅನ್ನೋ ಅನುಮಾನಗಳು ಹುಟ್ಟಿಕೊಂಡಿದೆ. ಘಟನೆ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ಪೊಲೀಸ್ರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Published On - 9:49 am, Sun, 26 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us