AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬೈಕ್​ನಲ್ಲಿ ಬಂದು 12 ಲಕ್ಷ ರೂ. ದೋಚಿದ ಖದೀಮರು: ಪೊಲೀಸ್ ಇನ್ಸ್​ಪೆಕ್ಟರ್ ಅಮಾನತು..!

Crime News Kannada: ದೆಹಲಿಯ ನ್ಯೂ ಕೋಡ್ಲಿಯ ನಿವಾಸಿ ಪ್ರವೀಣ್ ಗಾರ್ಗ್ ಹಲವು ಕಡೆ ರಿಫೈಂಡ್ ಆಯಿಲ್ ವ್ಯವಹಾರ ನಡೆಸುತ್ತಿದ್ದರು. ಈ ಅಂಗಡಿಗಳಿಂದ ತನ್ನ ಮಾರಾಟಗಾರ ಸುಖಬೀರ್ ಹಣ ಸಂಗ್ರಹಿಸಿ ಸ್ಕೂಟಿಯಲ್ಲಿ ಹಾಜಿಪುರ ಅಂಡರ್‌ಪಾಸ್ ಬಳಿ ಹಾದು ಹೋಗುತ್ತಿದ್ದಾಗ ವೇಳೆ ಈ ಘಟನೆ ನಡೆದಿದೆ.

Crime News: ಬೈಕ್​ನಲ್ಲಿ ಬಂದು 12 ಲಕ್ಷ ರೂ. ದೋಚಿದ ಖದೀಮರು: ಪೊಲೀಸ್ ಇನ್ಸ್​ಪೆಕ್ಟರ್ ಅಮಾನತು..!
ಸಾಂದರ್ಭಿಕ ಚಿತ್ರ
TV9 Web
| Updated By: ಝಾಹಿರ್ ಯೂಸುಫ್|

Updated on: Aug 22, 2021 | 10:26 PM

Share

ಉತ್ತರ ಪ್ರದೇಶದ ನೋಯ್ಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಡುಹಗಲೇ 12 ಲಕ್ಷ ರೂ. ದೋಚಿರುವ ಘಟನೆ ನಡೆದಿದೆ. ಅದು ಕೂಡ ಪೊಲೀಸ್ ಠಾಣೆಯ ಅಸುಪಾಸಿನಲ್ಲೇ ಎಂಬುದೇ ಅಚ್ಚರಿ. ಹೌದು, ನೋಯ್ಡಾ ಪೊಲೀಸ್ ಠಾಣಾ ವಲಯ-39 ಪ್ರದೇಶದ ಅಂಡರ್‌ಪಾಸ್ ಬಳಿ ತೈಲದ ಕಂಪನಿಯ ಏಜೆಂಟ್‌ನಿಂದ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು 12 ಲಕ್ಷ ರೂಪಾಯಿ ದೋಚಿದ್ದಾರೆ. ವಿವಿಧ ಕಡೆಗಳಿಂದ ಹಣ ಸಂಗ್ರಹಿಸಿ ವಾಪಾಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಹಣದೊಂದಿಗೆ ಖದೀಮರು ಕ್ಷಣಾರ್ಧದಲ್ಲಿ ಕಣ್ಮರೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೆಹಲಿಯ ನ್ಯೂ ಕೋಡ್ಲಿಯ ನಿವಾಸಿ ಪ್ರವೀಣ್ ಗಾರ್ಗ್ ಹಲವು ಕಡೆ ರಿಫೈಂಡ್ ಆಯಿಲ್ ವ್ಯವಹಾರ ನಡೆಸುತ್ತಿದ್ದರು. ಈ ಅಂಗಡಿಗಳಿಂದ ತನ್ನ ಮಾರಾಟಗಾರ ಸುಖಬೀರ್ ಹಣ ಸಂಗ್ರಹಿಸಿ ಸ್ಕೂಟಿಯಲ್ಲಿ ಹಾಜಿಪುರ ಅಂಡರ್‌ಪಾಸ್ ಬಳಿ ಹಾದು ಹೋಗುತ್ತಿದ್ದಾಗ ವೇಳೆ ಮೋಟಾರ್ ಸೈಕಲ್‌ನಲ್ಲಿ ಮೂವರು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅಡ್ಡಗಟ್ಟಿದ್ದರು. ಅಲ್ಲದೆ ಸುಖಬೀರ್ ಮೇಲೆ ಹಲ್ಲೆ ನಡೆಸಿ ಸ್ಕೂಟಿಯ ಟ್ರಂಕ್‌ನಲ್ಲಿ ಇರಿಸಿದ್ದ 12 ಲಕ್ಷ ರೂಪಾಯಿಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ಕೂಡಲೇ ಸ್ಥಳೀಯ ಪೊಲೀಸ್ ಇನ್ಸ್​ಪೆಕ್ಟರ್ ಅಜಾದ್ ಸಿಂಗ್ ತೋಮರ್ ಅವರಿಗೆ ಮಾಹಿತಿ ನೀಡಿದರೂ ಅವರು ನಿರ್ಲಕ್ಷ್ಯವಹಿಸಿದ್ದಾರೆ. ಇದರಿಂದ ಖದೀಮರು ಅನಾಯಾಸವಾಗಿ ಪರಾರಿಯಾಗಲು ಸಹಾಯಕವಾಗಿದೆ ಎಂದು ತೈಲ ವ್ಯಾಪಾರಿ ಪ್ರವೀಣ್ ಗಾರ್ಗ್ ಆರೋಪಿಸಿದ್ದಾರೆ. ಇತ್ತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಲವ ಕುಮಾರ್, ಕಳ್ಳರನ್ನು ಹಿಡಿಯಲು ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಅಷ್ಟೇ ಅಲ್ಲದೆ ಸಿಸಿಟಿವಿ ಕ್ಯಾಮೆರಾಗಳು ಮತ್ತು ಸ್ಥಳದ ಸುತ್ತಲೂ ಅಳವಡಿಸಲಾಗಿರುವ ಕಣ್ಗಾವಲಿನ ಕ್ಯಾಮೆರಾ ಆಧಾರದ ಮೇಲೆ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಇನ್ನು ಹಗಲು ಹೊತ್ತಿನಲ್ಲೇ ರಾಜಾರೋಷವಾಗಿ ನಡೆದಿರುವ ಈ ಘಟನೆಗೆ ಸಂಬಂಧಿಸಿದರೆ ಪೊಲೀಸ್ ಠಾಣೆ ಸೆಕ್ಟರ್-39 ರ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುವುದು. ಇದು ನಿಜವಾಗಲೂ ಪೊಲೀಸರ ನಿರ್ಲಕ್ಷ್ಯದಿಂದ ನಡೆದಿದ್ದು, ಅದಕ್ಕೆ ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಲವ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: TVS Apache RR 310: ಬರಲಿದೆ ಟಿವಿಎಸ್​ ಅಪಾಚೆ 310 ಧೂಂ ಧಾಂ ಬೈಕ್

ಇದನ್ನೂ ಓದಿ: ಗಂಟೆಗೆ ಲಕ್ಷ ಲಕ್ಷ…ಬಣ್ಣದ ಲೋಕದ ನಟಿಮಣಿಯರ ಇನ್ನೊಂದು ಮುಖ ಬಹಿರಂಗ

ಇದನ್ನೂ ಓದಿ: IPL 2021: ಐಪಿಎಲ್​ನಿಂದ ಹಿಂದೆ ಸರಿದ 10 ಸ್ಟಾರ್ ಆಟಗಾರರು ಇವರೇ

(miscreants looted Rs 12 lakh, inspector in-charge suspended)

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು